ರೈತರ ಖಾತೆಗೆ ನೇರವಾಗಿ 4 ಸಾವಿರ ರೂ. ಜಮಾ: ಸರ್ಕಾರ ಘೋಷಣೆ
ಭೋಪಾಲ್, ಸೆಪ್ಟೆಂಬರ್ 23: ರೈತರ ಖಾತೆಗೆ ನೇರವಾಗಿ ಸರ್ಕಾರದ ವತಿಯಿಂದ 4 ಸಾವಿರ ರೂ. ಎರಡು ಕಂತುಗಳಲ್ಲಿ ಜಮಾವಣೆ ಮಾಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ದಾಖಲಿಸಿಕೊಂಡಿರುವ ರೈತರಿಗೆ ಯೋಜನೆಯ ಲಾಭ ದೊರೆಯಲಿದೆ.
ರೈತರ ಒಟ್ಟಾರೆ ಅಭಿವೃದ್ಧಿಗಾಗಿ ಕಿಸಾನ್ ಸಮ್ಮನ್ ನಿಧಿ, ಶೂನ್ಯ ಬಡ್ಡಿ ದರದಲ್ಲಿ ಸಾಲ ಮತ್ತು ಪ್ರಧಾನಿ ಬೆಳೆ ವಿಮೆ ಮುಂತಾದ ಯೋಜನೆಗಳೊಂದಿಗೆ ರೈತರ ಹಿತದೃಷ್ಟಿಯಿಂದ ನಡೆಸಬೇಕೆಂದು ನಾವು ನಿರ್ಧರಿಸಿದ್ದು, ಎಲ್ಲಾ ಯೋಜನೆಗಳನ್ನು ವಿಶೇಷ ಪ್ಯಾಕೇಜ್ ಆಗಿ ಅನುಷ್ಠಾನ ಮಾಡುತ್ತೇವೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.

77 ಲಕ್ಷ ರೈತರಿಗೆ ಸೌಲಭ್ಯ
ಸೆಪ್ಟೆಂಬರ್ 25 ರಂದು ದೀನ್ ದಯಾಳ್ ಉಪಾಧ್ಯಾಯ್ ಅವರ ಜನ್ಮ ದಿನಾಚರಣೆಯಿದ್ದು, ಈ ಯೋಜನೆಯಡಿ 77 ಲಕ್ಷ ರೈತರಿಗೆ ಸೌಲಭ್ಯ ಸಿಗಲಿದೆ. ರೈತರಿಗೆ ಶೂನ್ಯದರದಲ್ಲಿ ಸಾಲ ನೀಡುವ ಸಲುವಾಗಿ 800 ಕೋಟಿ ರು ಹಣವನ್ನು ಸಹಕಾರ ಸಂಘಗಳಿಗೆ ನೀಡಿದ್ದಾರೆ.

ರೈತ ಕಲ್ಯಾಣ ಯೋಜನೆ
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೈತ ಕಲ್ಯಾಣ ಯೋಜನೆಯನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ. ಯೋಜನೆಯ ಅಡಿ ರೈತರಿಗೆ ವಾರ್ಷಿಕವಾಗಿ 4 ಸಾವಿರ ರೂ. ಪಾವತಿಸಲಾಗುವುದು. ರೈತರ ಕಲ್ಯಾಣ ನನ್ನ ಜೀವನದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರದ ಕೃಷಿ ಮಸೂದೆ, ರೈತರ ಆಕ್ರೋಶ
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂರು ನೂತನ ಕೃಷಿ ಮಸೂದೆಗೆ ದೇಶದಾದ್ಯಂತ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ವಿವಾದಾತ್ಮಕ ಕೃಷಿ ಮಸೂದೆಯನ್ನು ಖಂಡಿಸಿ ಬಿಜೆಪಿ ಮಿತ್ರಪಕ್ಷದ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಸಹ ಇತ್ತೀಚೆಗೆ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವಿಚಾರ ರಾಷ್ಟ್ರಮಟ್ಟದಲ್ಲಿ ದೊಡ್ಡ ಸದ್ದು ಮಾಡಿತ್ತು.

ಯಾವ್ಯಾವ ಮಸೂದೆ
ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ-2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ-2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದಕ್ಕೆ ಇಡೀ ರೈತ ಸಮುದಾಯ ಮತ್ತು ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ನಡುವೆಯೂ ಮಸೂದೆಯ ಅಂಗೀಕರ ಪಡೆದ ಎರಡು ದಿನಗಳ ನಂತರ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications