ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣ ಬಹಿರಂಗ ಪಡಿಸಿದ ಸಾಧ್ವಿ ಪ್ರಜ್ಞಾ!
Recommended Video
ಭೋಪಾಲ್, ಆಗಸ್ಟ್ 26: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸುವ ಸಮಯದಲ್ಲಿ ಮಾತನಾಡುತ್ತಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ನೀಡಿದ ಹೇಳಿಕೆ ಇದೀಗ ಅಂತರ್ಜಾಲ ಲೋಕದಲ್ಲಿ ಸಾಕಷ್ಟು ಚರ್ಚೆಗೊಳಗಾಗಿದೆ.
"ನನಗೆ ಗುರುಗಳು ಒಮ್ಮೆ ಹೇಳಿದ್ದರು, ನಮ್ಮ(ಬಿಜೆಪಿ) ಎದುರು ಕೆಟ್ಟ ಕಾಲವಿದೆ. ವಿಪಕ್ಷಗಳು ನಮ್ಮ ವಿರುದ್ಧ 'ಮಾರಕ ಶಕ್ತಿ'ಯನ್ನು ಉಪಯೋಗಿಸಿಕೊಂಡು ಸೇಡು ತೀರಿಸಿಕೊಳ್ಳಲು ನೋಡುತ್ತವೆ ಎಂದು. ಆದರೆ ನಾನು ಅದನ್ನು ಮರೆತಿದ್ದೆ. ಆದರೆ ನಮ್ಮ ಮಹಾನ್ ನಾಯಕರೆಲ್ಲ ನಮ್ಮನ್ನು ಅಕಾಲಿಕವಾಗಿ ಅಗಲುತ್ತಿರುವುದನ್ನು ನೋಡಿದರೆ ಗುರುಗಳು ಅಂದು ಹೇಳಿದ್ದ ಮಾತು ನಿಜವೇನೋ ಅನ್ನಿಸುತ್ತಿದೆ ಎಂದು ಸಾದ್ವಿ ಪ್ರಗ್ಯಾ ಸಿಂಗ್ ಹೇಳಿದ್ದರು.
ಈ ಆಗಸ್ಟ್ ತಿಂಗಳಲಿನಲ್ಲೇ ಕೇಂದ್ರದ ಮಾಜಿ ಸಚಿವರಾದ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಮತ್ತು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ವಿಧಿವಶರಾದರು. ಕಳೆದ ಒಂದು ವರ್ಷಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ.

ಈ ಎಲ್ಲವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್, "ವಿರೋಧಪಕ್ಷಗಳೇ ಮಾರಕ ಶಕ್ತಿಗಳನ್ನು ಪ್ರಯೋಗಿಸಿ ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣವಾಗುತ್ತಿವೆ" ಎಂದಿದ್ದಾರೆ.
"ನನಗೆ ಜೈಲಿನಲ್ಲಿ ಹಿಂಸೆ ನೀಡಿದ್ದಕ್ಕೆ ನಾನು ಹೇಮಂತ್ ಕರ್ಕರೆ ಅವರಿಗೆ ಶಾಪ ನೀಡಿದ್ದೇ ಅವರು ಮುಂಬೈ ಸ್ಫೋಟದ ಸಮಯದಲ್ಲಿ ಸಾವಿಗೀಡಾಗಲು ಕಾರಣ" ಎಂಬ ಹೇಳಿಕೆ ನೀಡಿ ಇತ್ತೀಚೆಗಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications