ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣ ಬಹಿರಂಗ ಪಡಿಸಿದ ಸಾಧ್ವಿ ಪ್ರಜ್ಞಾ!

|
Google Oneindia Kannada News

Recommended Video

ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣ ಬಹಿರಂಗ ಪಡಿಸಿದ ಸಾಧ್ವಿ ಪ್ರಜ್ಞಾ! | Oneindia Kannada

ಭೋಪಾಲ್, ಆಗಸ್ಟ್ 26: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸುವ ಸಮಯದಲ್ಲಿ ಮಾತನಾಡುತ್ತಿದ್ದ ಸಾಧ್ವಿ ಪ್ರಜ್ಞಾ ಸಿಂಗ್ ನೀಡಿದ ಹೇಳಿಕೆ ಇದೀಗ ಅಂತರ್ಜಾಲ ಲೋಕದಲ್ಲಿ ಸಾಕಷ್ಟು ಚರ್ಚೆಗೊಳಗಾಗಿದೆ.

"ನನಗೆ ಗುರುಗಳು ಒಮ್ಮೆ ಹೇಳಿದ್ದರು, ನಮ್ಮ(ಬಿಜೆಪಿ) ಎದುರು ಕೆಟ್ಟ ಕಾಲವಿದೆ. ವಿಪಕ್ಷಗಳು ನಮ್ಮ ವಿರುದ್ಧ 'ಮಾರಕ ಶಕ್ತಿ'ಯನ್ನು ಉಪಯೋಗಿಸಿಕೊಂಡು ಸೇಡು ತೀರಿಸಿಕೊಳ್ಳಲು ನೋಡುತ್ತವೆ ಎಂದು. ಆದರೆ ನಾನು ಅದನ್ನು ಮರೆತಿದ್ದೆ. ಆದರೆ ನಮ್ಮ ಮಹಾನ್ ನಾಯಕರೆಲ್ಲ ನಮ್ಮನ್ನು ಅಕಾಲಿಕವಾಗಿ ಅಗಲುತ್ತಿರುವುದನ್ನು ನೋಡಿದರೆ ಗುರುಗಳು ಅಂದು ಹೇಳಿದ್ದ ಮಾತು ನಿಜವೇನೋ ಅನ್ನಿಸುತ್ತಿದೆ ಎಂದು ಸಾದ್ವಿ ಪ್ರಗ್ಯಾ ಸಿಂಗ್ ಹೇಳಿದ್ದರು.

ವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್ ಗೆ ಬಿಜೆಪಿ ತಪರಾಕಿವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್ ಗೆ ಬಿಜೆಪಿ ತಪರಾಕಿ

ಈ ಆಗಸ್ಟ್ ತಿಂಗಳಲಿನಲ್ಲೇ ಕೇಂದ್ರದ ಮಾಜಿ ಸಚಿವರಾದ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಮತ್ತು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ವಿಧಿವಶರಾದರು. ಕಳೆದ ಒಂದು ವರ್ಷಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದಾರೆ.

MP Pragya Singh Thakurs statement on BJP leaders death

ಈ ಎಲ್ಲವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್, "ವಿರೋಧಪಕ್ಷಗಳೇ ಮಾರಕ ಶಕ್ತಿಗಳನ್ನು ಪ್ರಯೋಗಿಸಿ ಬಿಜೆಪಿ ಹಿರಿಯ ನಾಯಕರ ಸಾವಿಗೆ ಕಾರಣವಾಗುತ್ತಿವೆ" ಎಂದಿದ್ದಾರೆ.

ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಹೈಕೋರ್ಟ್ ನೋಟಿಸ್ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಹೈಕೋರ್ಟ್ ನೋಟಿಸ್

"ನನಗೆ ಜೈಲಿನಲ್ಲಿ ಹಿಂಸೆ ನೀಡಿದ್ದಕ್ಕೆ ನಾನು ಹೇಮಂತ್ ಕರ್ಕರೆ ಅವರಿಗೆ ಶಾಪ ನೀಡಿದ್ದೇ ಅವರು ಮುಂಬೈ ಸ್ಫೋಟದ ಸಮಯದಲ್ಲಿ ಸಾವಿಗೀಡಾಗಲು ಕಾರಣ" ಎಂಬ ಹೇಳಿಕೆ ನೀಡಿ ಇತ್ತೀಚೆಗಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
BJP MP Pragya Singh Thakur on BJP senior leaders' demises said, opposition using some Marak Shakti against BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X