ಮದುವೆಯಾದ ಜೋಡಿಗೆ 55 ಸಾವಿರ ರೂ. ಉಡುಗೊರೆ ನೀಡಿದ ಮಧ್ಯಪ್ರದೇಶ ಸಿಎಂ
ಭೋಪಾಲ್, ಏಪ್ರಿಲ್ 22: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಸೆಹೋರ್ ಜಿಲ್ಲೆಯ ನಸ್ರುಲ್ಲಗಂಜ್ನಲ್ಲಿ 'ಕನ್ಯಾ ವಿವಾಹ ಯೋಜನೆ' ಗೆ ಮರು ಚಾಲನೆ ನೀಡಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಚೌಹಾಣ್, ಮಗಳನ್ನು ಹೊರೆ ಎಂದು ಪರಿಗಣಿಸುವ ರಾಜ್ಯದ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ಹೇಳಲು ಬಯಸುತ್ತೇನೆ. ಈ ಹೆಣ್ಣು ಮಕ್ಕಳ ಚಿಕ್ಕಪ್ಪ ರಾಜ್ಯದ ಮುಖ್ಯಮಂತ್ರಿ ಎಂದು ಧೈರ್ಯವಾಗಿರಿ. ಈ ತಾಯಂದಿರ ಚಿಕ್ಕಪ್ಪ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಾರೆ ಎಂದು ಚಿಂತೆಯಿಂದ ದೂರವಿರಿ ಎಂದಿದ್ದಾರೆ.
ನಿನ್ನೆ ನಸ್ರುಲ್ಲಾಗಂಜ್ನಲ್ಲಿ ಇಡೀ ರಾಜ್ಯದ ಹೆಣ್ಣು ಮಕ್ಕಳ ಮದುವೆ ಸಮಾರಂಭ ನಡೆಯಿತು. ಇದರಲ್ಲಿ 457 ಹೆಣ್ಣು ಮಕ್ಕಳು ವಿವಾಹವಾದರು. ಮದುವೆಯಾದ ಜೋಡಿಗೆ ಒಟ್ಟು 55 ಸಾವಿರ ರೂ. ಎಲ್ಇಡಿ ಟಿವಿ, ಪಾತ್ರೆ, ಬಟ್ಟೆ, ಹಾಸಿಗೆ, ಸೀಲಿಂಗ್ ಫ್ಯಾನ್, ಚಿನ್ನಾಭರಣ ಹೀಗೆ ರೂ.11 ಸಾವಿರ ಚೆಕ್ ಕೂಡ ನೀಡಿದ್ದಾರೆ. ಮೆರವಣಿಗೆ ಸ್ವಾಗತದ ಸಮಯದಲ್ಲಿ ಮುಖ್ಯಮಂತ್ರಿ ಚೌಹಾಣ್ ಅವರ ಪತ್ನಿ ಶ್ರೀಮತಿ ಸಾಧನಾ ಸಿಂಗ್, ಸೆಹೋರ್ ಜಿಲ್ಲಾ ಉಸ್ತುವಾರಿ ಸಚಿವ ಡಾ. ಪ್ರಭುರಾಮ್ ಚೌಧರಿ ಮತ್ತು ಸಂಸದ ರಮಾಕಾಂತ್ ಭಾರ್ಗವ ಅವರೊಂದಿಗೆ ಇದ್ದರು. ನಸ್ರುಲ್ಲಾಗಂಜ್ನಲ್ಲಿ ಮೆರವಣಿಗೆಗೆ ಮಹಿಳೆಯರು, ಮಕ್ಕಳು ಮತ್ತು ಅಪಾರ ಸಂಖ್ಯೆಯ ಜನರು ಪುಷ್ಪವೃಷ್ಟಿ ಮಾಡುವ ಮೂಲಕ ಸಂಭ್ರಮದಿಂದ ಸ್ವಾಗತಿಸಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೆರವಣಿಗೆಯಲ್ಲಿ ತೆರೆದ ಜೀಪಿನಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು, 'ಚಿಂತಿಸಬೇಡಿ ಹೆಣ್ಣುಮಕ್ಕಳ ಷೋಷಕರ ಸ್ಥಾನದಲ್ಲಿ ನಿಂತು ನಾನು ಅವರಿಗೆ ಎಲ್ಲಾ ಸಹಾಯವನ್ನು ಮಾಡುತ್ತೇನೆ. ಅವರ ಜೀವನವನ್ನು ಉತ್ತಮ ಮತ್ತು ಸಂತೋಷದಿಂದ ಇರಬೇಕು. ನಾವು ಈ ಪ್ರಯತ್ನದಲ್ಲಿ ತೊಡಗಿದ್ದೇವೆ. ಮದುವೆಯ ನಂತರವೂ ಬೇಕಾದರೆ ಚಿಕ್ಕಪ್ಪನ ಸ್ಥಾನದಲ್ಲಿ ನಿಂತು ಅವರನ್ನು ನೋಡಿಕೊಳ್ಳುತ್ತೇನೆ. ಅವರು ಯಾರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೋ ಅವರ ಜೀವನ ಸುಖಮಯವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸೆಹೋರ್ನ ನಸ್ರುಲ್ಲಗಂಜ್ನಿಂದ ಮರುಪ್ರಾರಂಭಿಸಿದರು. ಈ ಯೋಜನೆಯಡಿ ಹೆಣ್ಣು ಮಗುವಿಗೆ 55 ಸಾವಿರ ಆರ್ಥಿಕ ನೆರವು ನೀಡಲಾಗುತ್ತದೆ. ಇದರಲ್ಲಿ 38 ಸಾವಿರ ರೂ.ಮೌಲ್ಯದ ಗೃಹೋಪಯೋಗಿ ವಸ್ತುಗಳು, 11 ಸಾವಿರ ರೂ. ಚೆಕ್ ಹಾಗೂ ಇತರೆ ವ್ಯವಸ್ಥೆಗಾಗಿ 6 ಸಾವಿರ ರೂ. ನೀಡಲು ನಿರ್ಧರಿಸಲಾಗಿದೆ.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications