'ನೋ ಪ್ರಾಬ್ಲಮ್' , ಬಹುಮತ ಸಾಬೀತುಪಡಿಸಲು ಸಿದ್ಧ: ಕಮಲನಾಥ್
ಭೋಪಾಲ್, ಮೇ 20: ಕಮಲನಾಥ್ ನೇತೃತ್ವದ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಅಲ್ಪಮತಕ್ಕೆ ಕುಸಿದಿದೆ, ಮೊದಲಿಗೆ ಬಹುಮತ ಸಾಬೀತುಪಡಿಸಿ ನಂತರ ರಾಜ್ಯಭಾರ ಮಾಡಲಿ ಎಂದು ಬಿಜೆಪಿ ಎಸೆದ ಸವಾಲನ್ನು ಕಮಲನಾಥ್ ಸ್ವೀಕರಿಸಿದ್ದಾರೆ. ನೋ ಪ್ರಾಬ್ಲಮ್, ಬಹುಮತ ಸಾಬೀತುಪಡಿಸಲು ಸಿದ್ಧ ಎಂದಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
'ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ನಾವು ಸಿದ್ಧ. ನಮ್ಮ ಸರ್ಕಾರಕ್ಕೆ ಯಾವುದೇ ರೀತಿಯ ಬಹುಮತದ ಕೊರತೆಯಾಗಿಲ್ಲ' ಎಂದು ಮಧ್ಯಪ್ರದೇಶ ಸಿಎಂ ಕಮಲ್ನಾಥ್ ಅವರು ಸ್ಪಷ್ಟಪಡಿಸಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನದಿಂದಲೂ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಕಳೆದ 5 ತಿಂಗಳಲ್ಲಿ ನಾನು ನಾಲ್ಕು ಬಾರಿ ಬಹುಮತ ಸಾಬೀತುಪಡಿಸಿದ್ದೇನೆ. ಇನ್ನೊಮ್ಮೆ ಸಾಬೀತುಪಡಿಸಲು ನಮಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಕಮಲ್ನಾಥ್ ಹೇಳಿದರು.
ಕಾಂಗ್ರೆಸ್ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಬೇಕಿದೆ ಜೊತೆಗೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಗೋಪಾಲ್ ಭಾರ್ಗವ ಅವರು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಗೆ ಪತ್ರ ಬರೆದಿದ್ದರು.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ
ಮೇ 29ರಂದು ಪ್ರಕಟವಾದ ಲೋಕಸಭೆ ಚುನಾವಣೆ 2019ರ ಎಕ್ಸಿಟ್ ಪೋಲ್ ಪ್ರಕಾರ ಮಧ್ಯಪ್ರದೇಶದಲ್ಲಿ 29 ಸ್ಥಾನಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ ಕೇವಲ 5 ಸ್ಥಾನ ಗಳಿಸಲಿದೆ ಎಂದು ವರದಿ ಬಂದಿದೆ. 2018ರ ವಿಧಾನಸಭೆ ಫಲಿತಾಂಶದಲ್ಲಿ 230 ಸ್ಥಾನಗಳ ಪೈಕಿ ಕಾಂಗ್ರೆಸ್ 114 ಸ್ಥಾನ ಗಳಿಸಿತ್ತು. ಬಿಜೆಪಿ 109, ಬಿಎಸ್ಪಿ 2,ಎಸ್ಪಿ 1 ಹಾಗೂ ಪಕ್ಷೇತರರು 4 ಮಂದಿ ಶಾಸಕರಾಗಿದ್ದರು.