ವಿದೇಶಿ ಮಹಿಳೆಗೆ ಜನಿಸಿದವರು ದೇಶಭಕ್ತರಾಗಲು ಸಾಧ್ಯವೇ? ರಾಹುಲ್ ವಿರುದ್ದ ವಾಗ್ದಾಳಿ
ಭೋಪಾಲ್, ಜೂನ್ 29: ವಿವಾದಕಾರಿ ಹೇಳಿಕೆ ನೀಡುವುದರಲ್ಲಿ ಎತ್ತಿದ ಕೈಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ದ ಹರಿತವಾದ ಮಾತನ್ನಾಡಿದ್ದಾರೆ.
Recommended Video
ಈ ಹಿಂದೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದು ವಿವಾದ ಸೃಷ್ಟಿಸಿದ್ದ ಪ್ರಗ್ಯಾ, "ವಿದೇಶಿ ಮಹಿಳೆಗೆ ಜನಿಸಿದ ಯಾರಾದರೂ ದೇಶಭಕ್ತರಾಗಲು ಸಾಧ್ಯವಿಲ್ಲ"ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.
"ರಾಹುಲ್ ಗಾಂಧಿಗೆ ಸುಸಂಸ್ಕೃತ ರೀತಿಯಲ್ಲಿ ಮಾತನಾಡಲು ಬರುವುದಿಲ್ಲ. ಕಾಂಗ್ರೆಸ್ ದೇಶಭಕ್ತಿಯನ್ನು ಹೊಂದಿರುವ ಪಕ್ಷವಲ್ಲ. ಎರಡು ರಾಷ್ಟ್ರಗಳ ಪೌರತ್ವವನ್ನು ಹೊಂದಿರುವ ವ್ಯಕ್ತಿಯಿಂದ ದೇಶಪ್ರೇಮವನ್ನು ನಿರೀಕ್ಷಿಸಲು ಸಾಧ್ಯವೇ"ಎಂದು ಪ್ರಗ್ಯಾ ಠಾಕೂರ್ ಪ್ರಶ್ನಿಸಿದ್ದಾರೆ.

"ಮಣ್ಣಿನ ಮಗ ಮಾತ್ರ ದೇಶವನ್ನು ರಕ್ಷಿಸಬಲ್ಲನೆಂದು ಚಾಣಕ್ಯ ಹೇಳಿದ್ದು ಸರಿಯಾಗಿಯೇ ಇದೆ. ವಿದೇಶಿ ಮಹಿಳೆಗೆ ಜನಿಸಿದವರು ಎಂದಿಗೂ ದೇಶಭಕ್ತರಾಗಲು ಸಾಧ್ಯವಿಲ್ಲ"ಎಂದು ಪ್ರಗ್ಯಾ ಠಾಕೂರ್ ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಕ್ರಿಯೆ: ರಾಹುಲ್ ಗಾಂಧಿ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡ ನರೇಂದ್ರ ಸಲೂಜಾ, "ನಾವು ಪ್ರಗ್ಯಾ ಠಾಕೂರ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ"ಎಂದು ಹೇಳಿದ್ದಾರೆ.
"ಮಹಾತ್ಮ ಗಾಂಧಿಯವರ ಹಂತಕನನ್ನು ದೇಶಭಕ್ತನೆಂದು ಹೊಗಳಬಲ್ಲ ಜನಪ್ರತಿನಿಧಿಯೊಬ್ಬರು ಏನು ಬೇಕಾದರೂ ಹೇಳುವ ಮಟ್ಟಕ್ಕೆ ಹೋಗಬಹುದು"ಎಂದು ನರೇಂದ್ರ ಸಲೂಜಾ ಪ್ರತಿಕ್ರಿಯಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications