ಹುಲಿ ಇರೋದು ಒಂದೇ, ಅದು ಕಾಡಿನಲ್ಲಿದೆ: ಸಿಂಧಿಯಾಗೆ ದಿಗ್ವಿಜಯ್ ಸಿಂಗ್ ಉತ್ತರ
ಬೋಪಾಲ್, ಜುಲೈ 3: ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಮಾತಿಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಿರುಗೇಟು ನೀಡಿದ್ದಾರೆ. 'ಟೈಗರ್ ಅಭಿ ಝಿಂದಾ ಹೈ' ಎಂದಿದ್ದ ಮಾಜಿ ಕೇಂದ್ರ ಸಚಿವ, ಸಿಂಧಿಯಾಗೆ 'ಹುಲಿ ಇರೋದು ಒಂದೇ' ಅದು ಕಾಡಿನಲ್ಲಿದೆ ಎಂದಿದ್ದಾರೆ.
Recommended Video
ಶುಕ್ರವಾರ, ದಿಗ್ವಿಜಯ್ ಸಿಂಗ್ ಎರಡು ಟ್ವೀಟ್ ಮಾಡಿದ್ದಾರೆ, ಮೊದಲಿಗೆ ಅವರು 'ಆಗ ನಾನು ಮತ್ತು ಶ್ರೀಮಂತ ಮಾಧವರಾವ್ ಸಿಂಧಿಯಾ ಜಿ ಹುಲಿಯನ್ನು ಬೇಟೆಯಾಡುತ್ತಿದ್ದೆವು. ಇಂದಿರಾ ಜಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಪರಿಚಯಿಸಿದಾಗಿನಿಂದ, ನಾನು ಈಗ ಹುಲಿಯನ್ನು ಮಾತ್ರ ಕ್ಯಾಮರಾಕ್ಕೆ ತರುತ್ತೇನೆ ಎಂದಿದ್ದಾರೆ.
ಇದೇ ವೇಳೆ ಇನ್ನೊಂದು ಟ್ವೀಟ್ನಲ್ಲಿ ' ಹುಲಿಯ ಗುಣ ತಿಳಿದಿದೆ, ಕಾಡಿನಲ್ಲಿ ಕೇವಲ ಒಂದು ಹುಲಿ ಮಾತ್ರ ಇರುತ್ತದೆ' ಎಂದು ಸಿಂಧಿಯಾ ಅವರ 'ಟೈಗರ್ ಅಭಿ ಝಿಂದಾ ಹೈ' ಹೇಳಿಕೆಗೆ ದಿಗ್ವಿಜಯ್ ಸಿಂಗ್ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
#WATCH I don't need any certificate from Digvijaya Singh and Kamal Nath. The facts are before the people how they looted the state in 15 months....I want to tell them 'tiger abhi zinda hai': BJP leader Jyotiraditya Scindia#MadhyaPradesh pic.twitter.com/GRdEIT7kcZ
— ANI (@ANI) July 2, 2020
ವಾಸ್ತವವಾಗಿ, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್ಸಿನ ಕಮಲ್ ನಾಥ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹುಲಿ ಇನ್ನೂ ಜೀವಂತವಾಗಿದೆ ಎಂದು ನಿರಂತರವಾಗಿ ಹೇಳುತ್ತಲೇ ಇದ್ದರು. ಅದಕ್ಕಾಗಿಯೇ ದಿಗ್ವಿಜಯ್ ಸಿಂಗ್, ಸಿಂಧಿಯಾ ಮತ್ತು ಶಿವರಾಜ್ ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಕಾಡಿನಲ್ಲಿ ಒಂದೇ ಹುಲಿ ಮಾತ್ರ ವಾಸಿಸುತ್ತದೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಮಧ್ಯಪ್ರದೇಶ ಸಂಪುಟ ವಿಸ್ತರಣೆಯಾಗಿದ್ದು, ಶಿವರಾಜ್ ಸಿಂಗ್ ಚೌಹಾಣ್ 28 ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. 28 ಸಚಿವರ ಪೈಕಿ 14 ಮಂದಿ ಸಿಂಧಿಯಾ ಬೆಂಬಲಿಗರಾಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಂಧಿಯಾ, ದಿಗ್ವಿಜಯ್ ಸಿಂಗ್ ಅಥವಾ ಕಮಲನಾಥ್ ಅವರಿಂದ ನನಗೆ ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ, ಕಳೆದ 15 ತಿಂಗಳಲ್ಲಿ ಅವರು ರಾಜ್ಯವನ್ನು ಯಾವು ರೀತಿ ಕೊಳ್ಳೆ ಹೊಡೆದಿದ್ದಾರೆ ಎಂಬ ಬಗ್ಗೆ ಜನರಿಗೆ ತಿಳಿದಿದೆ. ಅವರಿಗೋಸ್ಕರ ಅವರಿಬ್ಬರು ಎಲ್ಲವನ್ನು ಮಾಡಿದ್ದಾರೆ, ಅವರು ನೀಡಿದ್ದ ಭರವಸೆಗಳನ್ನು ಜನ ಪರಿಶೀಲನೆ ಮಾಡಲಿದ್ದಾರೆ, ನಾನು ಬೇರೆ ಏನು ಮಾತನಾಡುವುದಿಲ್ಲ ಟೈಗರ್ ಅಭಿ ಜಿಂದಾ ಹೈ ಎಂದು ಮಾತ್ರ ಹೇಳುತ್ತೇನೆ ಎಂದಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications