ಶೀಘ್ರದಲ್ಲೇ ಜನಸಂಖ್ಯಾ ನಿಯಂತ್ರಣ ಕಾನೂನು- ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್
ರಾಯ್ಪುರ, ಜೂನ್ 1: ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಜನಸಂಖ್ಯೆ ನಿಯಂತ್ರಣಕ್ಕಾಗಿ ಬಿಜೆಪಿ ಮುಂದಾಗಿದೆ. ಇದರ ಬೆನ್ನಲ್ಲೆ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ಶೀಘ್ರದಲ್ಲೇ ತರಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮಂಗಳವಾರ ಹೇಳಿದ್ದಾರೆ. ರಾಯ್ಪುರದ ಬರೋಂಡಾ ICAR-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬಯೋಟಿಕ್ ಸ್ಟ್ರೆಸ್ ಮ್ಯಾನೇಜ್ಮೆಂಟ್ನಲ್ಲಿ 'ಗರೀಬ್ ಕಲ್ಯಾಣ್ ಸಮ್ಮೇಳನ'ದಲ್ಲಿ ಭಾಗವಹಿಸಿದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಶೀಘ್ರದಲ್ಲಿ ತರಲಾಗುವುದು ಎಂದು ಹೇಳಿದ್ದಾರೆ.
ಜನಸಂಖ್ಯೆ ನಿಯಂತ್ರಣ ಕಾನೂನು ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಟೇಲ್, 'ಶೀಘ್ರದಲ್ಲೇ ಜನಸಂಖ್ಯೆ ನಿಯಂತ್ರಣ ಕಾನೂನು ತರಲಾಗುವುದು. ಅಂತಹ ಬಲವಾದ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡ ನಂತರ ಉಳಿದ ಕಾರ್ಯಗಳನ್ನು ಮಾಡಲಾಗುತ್ತದೆ' ಎಂದಿದ್ದಾರೆ. ಛತ್ತೀಸ್ಗಢದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರದ ಕೆಲವು ಯೋಜನೆಗಳ ಅಡಿಯಲ್ಲಿ ಗುರಿ ಸಾಧಿಸಲು ವಿಫಲವಾಗಿದೆ ಎಂದು ಆರೋಪಿಸಿದರು.

'ಕೆಲಸ ಸಾಧಿಸಲು ಅಸಮರ್ಥ ಕಾಂಗ್ರೆಸ್'
"ರಾಜ್ಯ ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿ ಕೇವಲ 23 ಪ್ರತಿಶತದಷ್ಟು ಕೆಲಸವನ್ನು ಸಾಧಿಸಲು ಸಮರ್ಥವಾಗಿದೆ. ಆದರೆ ಅದರ ಅಡಿಯಲ್ಲಿ ಇನ್ನೂ ಸರಾಸರಿ 50 ಪ್ರತಿಶತದಷ್ಟು ಗುರಿ ಸಾಧನೆಯಿದೆ. ರಾಜ್ಯದಲ್ಲಿ ನೀರಿನ ಮೂಲ ಸಮಸ್ಯೆ ಇಲ್ಲ ಆದರೆ ನಿರ್ವಹಣೆಯದ್ದೇ ಸಮಸ್ಯೆ. ಅದೇ ರೀತಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗುರಿಯನ್ನು ಪೂರ್ಣಗೊಳಿಸಲು ರಾಜ್ಯಕ್ಕೆ ಸಾಧ್ಯವಾಗಿಲ್ಲ'' ಎಂದು ಹೇಳಿದರು.

ಮೋದಿ ಸರ್ಕಾರವನ್ನು ಕೊಂಡಾಡಿದ ಪ್ರಹ್ಲಾದ್ ಸಿಂಗ್
ಇದಕ್ಕೂ ಮುನ್ನ, ಗರೀಬಿ ಕಲ್ಯಾಣ ಸಮ್ಮೇಳನದ ಸಂದರ್ಭದಲ್ಲಿ ಕೇಂದ್ರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪಟೇಲ್, ಕಳೆದ ಎಂಟು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರದ ವಿವಿಧ ಸಾಧನೆಗಳನ್ನು ಕೊಂಡಾಡಿದ್ದಾರೆ. 'ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ' ಕೇಂದ್ರ ಸರ್ಕಾರದ ಮೂಲ ಮಂತ್ರವಾಗಿದೆ ಎಂದು ಹೇಳಿದ್ದಾರೆ.

ಚೀನಾ ಉದಾಹರಣೆಯಾಗಿ ಕೊಟ್ಟ ನಿತೀಶ್ ಕುಮಾರ್
ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಅಸ್ಸಾಂ ಜನಸಂಖ್ಯೆ ನಿಯಂತ್ರಣಕ್ಕಾಗಿ ಕಾನೂನು ಜಾರಿಗೆ ಮುಂದಾಗುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಸ್ನೇಹಿತ ನಿತೀಶ್ ಕುಮಾರ್ ತಮ್ಮ ಭಿನ್ನಾಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. "ರಾಜ್ಯಗಳು ತಮಗೆ ಬೇಕಾದುದನ್ನು ಮಾಡಬಹುದು. ಆದರೆ ಕಾನೂನಿನಿಂದ ಜನಸಂಖ್ಯಾ ನಿಯಂತ್ರಣ ಸಾಧ್ಯವಿಲ್ಲ ಎಂದು ನಾನು ಸ್ಪಷ್ಟವಾಗಿ ನಂಬುತ್ತೇನೆ. ಚೀನಾ ಅಥವಾ ಇನ್ನಾವುದೇ ರಾಷ್ಟ್ರದ ಉದಾಹರಣೆಯನ್ನು ಇದಕ್ಕಾಗಿ ತೆಗೆದುಕೊಳ್ಳಬಹುದು" ನಿತೀಶ್ ಕುಮಾರ್ ಹೇಳಿದರು.

ಮಹಿಳೆಯರಿಗೆ ಶಿಕ್ಷಣ ಅಗತ್ಯ- ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ಪ್ರಕಾರ ಕುಟುಂಬದ ಮಹಿಳೆ ಹೆಚ್ಚು ವಿದ್ಯಾವಂತಳಾದರೆ ಫಲವತ್ತತೆ ಪ್ರಮಾಣ ಕಡಿಮೆಯಾಗುತ್ತದೆ ಎಂಬ ಅಂಕಿಅಂಶವು ಒಂದು "ಅಚ್ಚರಿಯ ಸತ್ಯ". "ಮಹಿಳೆಯರಿಗೆ ಅರಿವು ಮತ್ತು ಶಿಕ್ಷಣ ದೊರೆತಾಗ, ಜನಸಂಖ್ಯೆ ಬೆಳವಣಿಗೆ ದರ ಕುಸಿಯುತ್ತದೆ" ಎಂದು ಅವರು ಹೇಳಿದ್ದಾರೆ.
"2040 ರ ವೇಳೆಗೆ ಜನಸಂಖ್ಯೆಯು ಕುಸಿಯಲು ಪ್ರಾರಂಭವಾಗುತ್ತದೆ. ನಾವು ಈ ಮಾರ್ಗದಲ್ಲಿದ್ದೇವೆ. ಇದನ್ನು ಕಾನೂನಿನ ಜಾರಿ ಮೂಲಕ ಮಾಡಬಹುದೆಂದು ಕೆಲವರು ನಂಬಿದರೆ ಅದು ಅವರ ಆಲೋಚನೆ. ನಾವು ಇದನ್ನು ಹೇಗೆ ಮಾಡಬಹುದು ಎಂಬುದರ ಕುರಿತು ನನ್ನ ಆಲೋಚನೆ ಸ್ಪಷ್ಟವಾಗಿದೆ. ಇದು ಕೇವಲ ಒಂದು ಸಮುದಾಯದ ಸಮಸ್ಯೆಯಲ್ಲ, ಆದರೆ ಮಹಿಳೆಯರಿಗೆ ಶಿಕ್ಷಣ ನೀಡಿದರೆ ಎಲ್ಲರಿಗೂ ಲಾಭವಾಗುತ್ತದೆ. ಬಿಹಾರದಲ್ಲಿ ಫಲವತ್ತತೆ ಪ್ರಮಾಣ ಎಷ್ಟು ಕಡಿಮೆಯಾಗುತ್ತಿದೆ ಎಂಬುದನ್ನು ನೀವೇ ಗಮನಿಸಿ" ಎಂದು ಸಿಎಂ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications