ಭೋಪಾಲ್ನಿಂದ ಸ್ಪರ್ಧೆಗೆ ಸಿದ್ಧ ಎಂದ ಪ್ರಜ್ಞಾ ಸಿಂಗ್ ಠಾಕೂರ್
ಭೋಪಾಲ್, ಏ.17: ಭೋಪಾಲ್ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಸಿದ್ಧ ಎಂದು ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಭೋಪಾಲ್ನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿದೆ.
ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಉಮಾಭಾರತಿ ಸ್ಪರ್ಧೆ?
ದಿಗ್ವಿಜಯ್ ಸಿಂಗ್ ವಿರುದ್ಧ ಉಮಾಭಾರತಿ ಅಥವಾ ಪ್ರಜ್ಞಾಸಿಂಗ್ ನಿಲ್ಲಿಸಲು ಬಿಜೆಪಿ ಗಂಭೀರ ಚಿಂತನೆ ನಡೆಸುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪ್ರಜ್ಞಾ ಸಿಂಗ್ ಬಿಜೆಪಿ ನೀಡಿದರೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ, ಹಿಂದು ವಿರೋಧಿ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸುವುದು ನನ್ನ ಉದ್ದೇಶ ಈ ಮೂಲಕ ದೇಶದಲ್ಲಿ ರಾಷ್ಟ್ರವಾದವನ್ನು ಇನ್ನಷ್ಟು ಜಾಗೃತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮಾಲೆಗಾವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಪ್ರಮುಖ ಆರೋಪಿಯಾಗಿದ್ದರು. ಇತ್ತೀಚೆಗೆ ಎನ್ಐಎ ಕೋರ್ಟ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿತ್ತು.ಯುಪಿಎ ಅವಧಿಯಲ್ಲಿ ಹಿಂದು ಭಯೋತ್ಪಾದನೆ ಎಂಬ ಶಬ್ದವನ್ನು ಹುಟ್ಟುಹಾಕಲಾಗಿತ್ತು.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಇದರಲ್ಲಿ ದಿಗ್ವಿಜಯ್ ಸಿಂಗ್ ಪಾತ್ರವೂ ಮಹತ್ವದ್ದಾಗಿದೆ ಎಂದು ಬಿಜೆಪಿ ಆರೋಪ. ಈ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಚುನಾವಣಾ ವಿಷಯವಾಗಿ ಬಿಜೆಪಿ ತೆಗೆದುಕೊಂಡಿದೆ.
ಹೀಗಾಗಿ ಪ್ರಜ್ಞಾ ಸಿಂಗ್ ಸ್ಪರ್ಧೆ ಬಗ್ಗೆ ತೀವ್ರ ಕುತೂಹಲ ಆರಂಭವಾಗಿದೆ.