ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾಭಾರತ, ರಾಮಾಯಣದಲ್ಲಿ ಹಿಂಸೆಯ ಪಾಠವಿದೆ: ಸೀತಾರಾಮ್ ಯಚೂರಿ

|
Google Oneindia Kannada News

ಭೋಪಾಲ್, ಮೇ 03: "ರಾಮಾಯಣ, ಮಹಾಭಾರತ ಗ್ರಂಥಗಳೂ ಹಿಂಸೆ ಮತ್ತು ಯುದ್ಧವನ್ನು ಬೋಧಿಸುತ್ತವೆ. ಆರೆಸ್ಸೆಸ್ ಪ್ರಚಾರಕರು ಈ ಧರ್ಮಗ್ರಂಥಗಳನ್ನು ಬೋಧಿಸುತ್ತಾರೆ, ಆದರೆ ಹಿಂಸೆ ಮಹಾಪಾಪ ಎನ್ನುತ್ತಾರೆ. ಇದರಲ್ಲಿ ಯಾವ ತರ್ಕವಿದೆ" ಎಂದು ಅವರು ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಚುನಾವಣಾ ಸಮಾವೇಶವೊಂದರಲ್ಲಿ ಭಾಗವಹಿಸಿದ್ದ ಯಚೂರಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನೂ ತರಾಟೆಗೆ ತೆಗೆದುಕೊಂಡರು.

ರಾಮಾಯಣ ವಿವಾದ: ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಸ್ಪಷ್ಟೀಕರಣರಾಮಾಯಣ ವಿವಾದ: ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಸ್ಪಷ್ಟೀಕರಣ

Ramayana and Mahabharata filled with instances of violence and battles: Sitaram Yechury

"ಹಿಂದುಗಳು ಹಿಂಸೆಯಲ್ಲಿ ತೊಡಗಬಹುದು ಎಂಬುದನ್ನು ಈ ಗ್ರಂಥಗಳು ತೊರಿಸಿವೆ. ಗೋಹತ್ಯೆ ಮಾಡುವವರನ್ನು ಶಿಕ್ಷಿಸುವ ನೆಪದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ತಮ್ಮದೇ ಒಂದು ಸೈನ್ಯ ಕಟ್ಟಿಕೊಂಡಿದ್ದನ್ನು ಯಾವ ರೀತಿಯಲ್ಲಿ ಸಮರ್ಥಿಸಿಕೊಳ್ಳಲು ಸಾಧ್ಯ" ಎಂದು ಅವರು ಪ್ರಶ್ನಿಸಿದ್ದಾರೆ.

ರಾಮ ಮರ್ಯಾದಾ ಪುರುಷೋತ್ತಮನೇ ಅಲ್ಲ ಎಂದ ಭಗವಾನ್ ಸಂದರ್ಶನರಾಮ ಮರ್ಯಾದಾ ಪುರುಷೋತ್ತಮನೇ ಅಲ್ಲ ಎಂದ ಭಗವಾನ್ ಸಂದರ್ಶನ

ಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡ, ಭೋಪಾಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಮಾತನಾಡಿ, "ಇದು ಸಾರ್ವತ್ರಿಕ ಚುನಾವಣೆಯಲ್ಲ, ನಮ್ಮ ಸಂವಿಧಾನವನ್ನು ಉಳಿಸುವ ಸಲುವಾಗಿ ನಡೆಯುತ್ತಿರುವ ಹೋರಾಟ" ಎಂದರು.

ಇದು ಸಿದ್ಧಾಂತಗಳ ನಡುವಿನ ಯುದ್ಧವೇ ಹೊರತು, ವ್ಯಕ್ತಿಗಳ ನಡುವಿನ ಹೋರಾಟವಲ್ಲ ಎಂದು ಸಿಂಗ್ ಹೇಳಿದರು.

English summary
Sitaram Yechury, CPI(M) leader said, Ramayana and Mahabharata are also filled with instances of violence and battles. Being a pracharak, you narrate the epics but still claim Hindus can't be violent? What is the logic behind saying there is a religion which engages in violence and we Hindus don't.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X