''ಹನುಮಾನ್ ಚಾಲೀಸಾ ಪಠಣ ಮಾಡಿ, ವೈರಸ್ ಮುಕ್ತರಾಗಿ''
ಭೋಪಾಲ್, ಜುಲೈ 26: ಹಪ್ಪಳ ತಿನ್ನಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ, ಕೊರೊನಾವೈರಸ್ ಮುಕ್ತರಾಗಿ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಕರೆ ನೀಡಿದ್ದು ನೆನಪಿರಬಹುದು. ಇದೇ ರೀತಿ ಅನೇಕ ರಾಜಕಾರಣಿಗಳು ಅವೈಜ್ಞಾನಿಕ ವಿಧಾನಗಳನ್ನು ಬಳಸಲು ಜನತೆಗೆ ಕರೆ ನೀಡಿ ನಗೆಪಾಟಲಿಗೆ ಒಳಗಾಗಿದ್ದಾರೆ. ಕೆಲವರು ದೇವರನ್ನು ಮುಂದಿಟ್ಟುಕೊಂಡು ಜನರ ಓಲೈಕೆಗೆ ಮುಂದಾಗಿದ್ದಾರೆ.
ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಕೂಡಾ ಇಂಥ ಹೇಳಿಕೆ ನೀಡಿದ್ದಾರೆ. ದಿನಕ್ಕೆ 5 ಸಲ ಹನುಮಾನ್ ಚಾಲೀಸ ಪಠಿಸಿ, ಕೊರೊನಾವೈರಸ್ ಓಡಿಸಿ ಎಂದು ಕರೆ ನೀಡಿದ್ದಾರೆ.
ಭೋಪಾಲ್ ನಲ್ಲಿ ಜುಲೈ 24ರಿಂದ ಆಗಸ್ಟ್ 4ರ ತನಕ ಪ್ರತಿದಿನ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಕೊರೊನಾವೈರಸ್ ದೂರಾಗಿಸಲು ಇದೊಂದೆ ಮಾರ್ಗ. ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಯಾಗಲಿದೆ. ಆಧ್ಯಾತ್ಮಿಕ ಮಾರ್ಗದಲ್ಲಿ ನಮ್ಮ ಪ್ರಯತ್ನ ನಾವು ಮಾಡೋಣ, ದೇಶದ ಹಿಂದುಗಳೆಲ್ಲ ಒಕ್ಕೊರಲಿನಿಂದ ಹನುಮಾನ್ ಚಾಲೀಸಾ ಪಠಣ ಮಾಡಿದರೆ ಕೊರೊನಾ ಮುಕ್ತರಾಗಲು ಸಾಧ್ಯ ಎಂದು ಪ್ರಜ್ಞಾ ಸಿಂಗ್ ಹೇಳಿದ್ದಾರೆ.

2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ಸಿನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಾಬ್ರಿ ಮಸೀದಿ ಧ್ವಂಸದ ಬಗ್ಗೆ ಹೆಮ್ಮೆ, ಹೇಮಂತ್ ಕರ್ಕರೆ ಮತ್ತು ನಾಥೂ ರಾಮ್ ಗೊಡ್ಸೆ ಬಗ್ಗೆ ನೀಡಿದ ಹೇಳಿಕೆಯೂ ವಿವಾದಕ್ಕೀಡಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications