ಮಧ್ಯಪ್ರದೇಶ: ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ನಿಶ್ಚಿತ
ಭೂಪಾಲ್, ನವೆಂಬರ್ 10: ಮಧ್ಯಪ್ರದೇಶದ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆಯುವುದು ನಿಶ್ಚಿತವಾಗಿದೆ.
ಮಧ್ಯಪ್ರದೇಶದ 28 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುತೇಕ ಸ್ಪಷ್ಟ ಬಹುಮತ ದೊರೆಯುವುದು ಖಚಿತವಾಗಿದೆ.
ಆದರೆ, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸ್ವಕ್ಷೇತ್ರ ಗ್ವಾಲಿಯಾರ್ - ಚಂಬಲ್ ಪ್ರದೇಶದಲ್ಲಿ 8-10 ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಕಂಡುಬರುತ್ತಿದೆ. ಚುನಾವಣೆ ನಡೆದ 28 ಸ್ಥಾನಗಳ ಪೈಕಿಯಲ್ಲಿ 16 ಸ್ಥಾನಗಳನ್ನು ಗ್ವಾಲಿಯರ್ - ಚಂಬಲ್ ವಲಯದಲ್ಲಿಯೇ ಇವೆ. ಮೊರೆನಾ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದು, ಕಡಿಮೆ ಅಂತರೊಂದಿಗೆ ಮುನ್ನಡೆಯಲ್ಲಿದೆ.

ನವೆಂಬರ್ 3ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಇಂದು ಮಧ್ಯಾಹ್ನದವರೆಗೂ ಬಿಜೆಪಿ 19, ಕಾಂಗ್ರೆಸ್ 8 ಮತ್ತು ಬಿಎಸ್ ಪಿ ಒಂದು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಪ್ರಮುಖವಾಗಿ ಮಾಲ್ವಾ-ನಿಮಾರ್ ಪ್ರದೇಶದ ಸ್ಥಾನಗಳಲ್ಲಿ ಬಿಜೆಪಿ ಉತ್ತಮ ಸಾಧನೆ ತೋರುತ್ತಿದ್ದರೆ, ಕೇಂದ್ರ ಸಂಸದ ಮತ್ತು ಬುಂದೇಲ್ಖಂಡ್ ಪ್ರದೇಶದ ಎರಡು ಸ್ಥಾನಗಳಲ್ಲಿ ದೊಡ್ಡ ಅಂತರದೊಂದಿಗೆ ಮುಂದಿದೆ.
ಸಂಜೆಯವರೆಗೂ ಇದೇ ರೀತಿಯಲ್ಲಿ 19-20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಮುಂದುವರೆದರೆ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಸರಳ ಬಹುಮತ ಸಿಕ್ಕಂತಾಗಲಿದೆ. ಬಿಜೆಪಿ ಪ್ರಸ್ತುತ 107 ಸ್ಥಾನಗಳನ್ನು ಹೊಂದಿದ್ದು, ಸರಳ ಬಹುಮತಕ್ಕೆ ಇನ್ನೂ 9 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ ಸರಳ ಬಹುಮತ ಪಡೆಯಲು ಎಲ್ಲಾ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ.
ಬಿಜೆಪಿಯ ಅಭಿವೃದ್ಧಿ ಮತ್ತು ಸಾರ್ವಜನಿಕರ ಕಲ್ಯಾಣ ರಾಜಕೀಯಕ್ಕೆ ಜನರು ಮತ ಚಲಾಯಿಸಿದ್ದಾರೆ ಎಂಬ ಪ್ರವೃತ್ತಿಗಳು ಸ್ಪಷ್ಟವಾಗಿ ಬಿಂಬಿಸುತ್ತವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications