ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ; ಹಾಸ್ಯ ಕಲಾವಿದನಿಗೆ ಮೂರನೇ ಬಾರಿ ಜಾಮೀನು ನಿರಾಕರಿಸಿದ ಕೋರ್ಟ್
ಇಂದೋರ್, ಜನವರಿ 28: ದೇಶದಲ್ಲಿ ಸಾಮರಸ್ಯ ಹಾಗೂ ಸಹೋದರತ್ವವನ್ನು ಉತ್ತೇಜಿಸುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಕರ್ತವ್ಯ ಎಂದು ಹೇಳಿರುವ ಮಧ್ಯಪ್ರದೇಶ ಹೈಕೋರ್ಟ್ ಇಂದೋರ್ ನ್ಯಾಯಪೀಠ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಬಂಧಿತರಾಗಿದ್ದ ಹಾಸ್ಯ ಕಲಾವಿದ ಮುನಾವರ್ ಫಾರುಖ್ ಗೆ ಮೂರನೇ ಬಾರಿ ಜಾಮೀನು ನಿರಾಕರಿಸಿದೆ.
ಮಧ್ಯ ಪ್ರದೇಶದ ಮೊನ್ರೋ ಕೆಫೆಯಲ್ಲಿ ಜನವರಿ 1ರಂದು ಮುನಾವರ್ ಹಾಸ್ಯ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಹಾಸ್ಯದ ನೆಪದಲ್ಲಿ ಫಾರುಖ್ ಹಿಂದೂ ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳನ್ನು ಅವಮಾನಿಸಿದ್ದಾರೆ. ಗೃಹ ಸಚಿವ ಅಮಿತ್ ಶಾಗೂ ಅವಮಾನ ಮಾಡಿದ್ದಾರೆ ಎಂದು ಇಂದೋರ್ ನ ಬಿಜೆಪಿ ಶಾಸಕಿ ಮಾಲಿನಿ ಗೌರ್ ಅವರ ಮಗ ಏಕಲವ್ಯ ಗೌರ್ ದೂರು ದಾಖಲಿಸಿದ್ದರು. ಆನಂತರ ಇಂದೋರ್ ಪೊಲೀಸರು ಹಾಸ್ಯ ಕಲಾವಿದ ಫಾರುಖ್ ಹಾಗೂ ಎಡ್ವಿನ್ ಆಂಥೊನಿ, ಪ್ರಖರ್ ವ್ಯಾಸ್, ಪ್ರಿಯಂ ವ್ಯಾಸ್, ನಳಿನ್ ಯಾದವ್ ಅವರನ್ನು ಜನವರಿ 2ರಂದು ಬಂಧಿಸಿದ್ದರು.

ಫಾರುಖ್ ಈ ಮುನ್ನ ಎರಡು ಬಾರಿ ಜಾಮೀನಿಗೆ ಮನವಿ ಮಾಡಿದ್ದರು. ಜನವರಿ 14ರಂದು ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ಎರಡನೇ ಅರ್ಜಿ ಸಲ್ಲಿಸಿದ್ದರು. ಆಗಲೂ ಜಾಮೀನು ನಿರಾಕರಣೆಯಾಗಿ ಜನವರಿ 27ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ರೋಹಿತ್ ಆರ್ಯ, "ಧಾರ್ಮಿಕ ವಿಚಾರಗಳಿಂದ ಏಕೆ ಲಾಭ ಪಡೆದುಕೊಳ್ಳುತ್ತೀರ? ನಿಮ್ಮ ಮನಸ್ಥಿತಿಗೆ ಏನಾಗಿದೆ? ನಿಮ್ಮ ವ್ಯವಹಾರಕ್ಕಾಗಿ ಇಂಥ ಕೆಲಸಗಳನ್ನು ಹೇಗೆ ಮಾಡುತ್ತೀರ? ಎಂದು ಪ್ರಶ್ನಿಸಿದ್ದರು.
ಇದೀಗ ಮತ್ತೊಮ್ಮೆ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications