ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್
ಭೋಪಾಲ್, ಏಪ್ರಿಲ್ 19: ಮಾಲೆಗಾಂವ್ ಸ್ಫೋಟ 2008ರ ಆರೋಪಿ, ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ವಿವಾದಿತ ಹೇಳಿಕೆ ಹಿಂಪಡೆದಿರುವುದಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದದ ಕಿಡಿ ಹೊತ್ತಿಸಿದ್ದರು. ಸಾಧ್ವಿ ಹೇಳಿಕೆಗೆ ಎಲ್ಲೆಡೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕೂಡಾ ಇದು ಅವರ ವಯಕ್ತಿಕ ಹೇಳಿಕೆ ಎಂದು ವಿವಾದತ ದೂರ ಉಳಿಯಲು ಯತ್ನಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಶತ್ರುಗಳು ಇದರಿಂದ ಲಾಭ ಪಡೆಯಬಹುದು ಎಂದೆನಿಸುತ್ತಿದೆ. ಹೀಗಾಗಿ, ನನ್ನ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಹಾಗೂ ನೋವಿನಿಂದ ಕ್ಷಮೆಯಾಚಿಸುತ್ತಿದ್ದೇನೆ ಅವರು(ಹೇಮಂತ್ ಕರ್ಕರೆ) ಭಯೋತ್ಪಾದಕನ ಗುಂಡೇಟಿಗೆ ಬಲಿಯಾದರು. ಅವರು ಹುತಾತ್ಮರಾದರು ಎಂದು ಹೇಳಿದರು.

2008ರ ಸೆಪ್ಟೆಂಬರ್ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹಿಂದೂ ಭಯೋತ್ಪಾದನಾ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಎಟಿಎಸ್, ಸಾಧ್ವಿ ಮತ್ತು ಇತರರನ್ನು ಬಂಧಿಸಿತ್ತು. 2016ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿಗೆ ಕ್ಲೀನ್ ಚಿಟ್ ನೀಡಿತ್ತು.
ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ (ATS) ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು 2008ರ ನವೆಂಬರ್ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಅವರೊಂದಿಗೆ ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಮೃತಪಟ್ಟಿದ್ದರು. ಹೇಮಂತ್ ಕರ್ಕರೆ ಅವರ ತನಿಖೆಯ ಕಾರಣದಿಂದಲೇ ಸಾಧ್ವಿ ಪ್ರಗ್ಯಾ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರುವಂತಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications