'ಇಬ್ಬರು ಅತ್ಯಂತ ಶಕ್ತಿಶಾಲಿ ಸೇನಾನಿಗಳೆಂದರೆ ತಾಳ್ಮೆ ಹಾಗೂ ಸಮಯ'
ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂದಿಯಾ ಜೊತೆಗಿರುವ ಫೋಟೋವೊಂದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇಬ್ಬರ ಕೈ ಹಿಡಿದಿರುವ ರಾಹುಲ್, ಆ ರಾಜ್ಯದಲ್ಲಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಅಂತಿಮಗೊಂಡಿದೆ ಎಂದು ಸೂಚಿಸುತ್ತಿರುವಂತಿದೆ.
ಕಮಲ್ ನಾಥ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಆಗುವುದು ಬಹುತೇಕ ಖಚಿತವಾಗಿದೆ. ಈ ಆಯ್ಕೆಯನ್ನು ಜ್ಯೋತಿರಾದಿತ್ಯ ಸಿಂದಿಯಾ ಒಪ್ಪಿದ್ದಾರೆ ಎಂಬುದು ಕಂಡುಬರುತ್ತಿದೆ. ಗುರುವಾರದಂದು ಇದೇ ವಿಚಾರವಾಗಿ ಸುದೀರ್ಘವಾದ ಸಭೆ ನಡೆದಿತ್ತು.
"ಇದು ರೇಸ್ ಅಲ್ಲ, ಇದು ಕುರ್ಚಿಗಾಗಿ ನಡೆಯುವ ಕುಸ್ತಿಯೂ ಅಲ್ಲ, ನಾವಿಲ್ಲಿ ಇರುವುದು ಮಧ್ಯಪ್ರದೇಶದ ಜನರ ಸೇವೆಗಾಗಿ" ಎಂದು ಸಿಂದಿಯಾ ಮಾಧ್ಯಮದವರಿಗೆ ಹೇಳಿದ್ದಾರೆ. ಯಾವಾಗ ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ ವಿಚಾರವು ಬಿಸಿ ಏರಿತೋ ಆಗ ರಾಹುಲ್ ಗಾಂಧಿ ಅವರು ಸೋದರಿ ಪ್ರಿಯಾಂಕಾ ಹಾಗೂ ತಾಯಿ ಸೋನಿಯಾ ಜತೆಗೂ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿದ್ದಾರೆ.

ಮತ್ತೆ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯಲ್ಲಿ ಹಾಕಿರುವ ಫೋಟೋ ವಿಚಾರಕ್ಕೆ ಬಂದರೆ, ಲೇಖಕ ಲಿಯೋ ಟಾಲ್ ಸ್ಟಾಯ್ ರ, ಇಬ್ಬರು ಅತ್ಯಂತ ಶಕ್ತಿಶಾಲಿ ಸೇನಾನಿಗಳೆಂದರೆ ತಾಳ್ಮೆ ಹಾಗೂ ಸಮಯ ಎಂಬ ವಾಕ್ಯಗಳನ್ನು ಹಾಕಿದ್ದಾರೆ.
ರಾಜಸ್ತಾನದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿಯೇ ಇದೆ. ಹೈಕಮಾಂಡ್ ನಲ್ಲಿ ಅಶೋಕ್ ಗೆಹ್ಲೋಟ್ ಆಯ್ಕೆ ಬಗ್ಗೆ ಒಲವಿದ್ದರೆ, ರಾಜಸ್ತಾನ ರಾಜ್ಯ ನಾಯಕರಲ್ಲಿ ಸಚಿನ್ ಪೈಲಟ್ ಆಯ್ಕೆ ಕಡೆ ಮನಸ್ಸಿದೆ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ, ದಯವಿಟ್ಟು ಸಮಾಧಾನದಿಂದ ಇರಬೇಕು. ರಾಹುಲ್ ಹಾಗೂ ಸೋನಿಯಾ ಗಾಂಧಿ ಅವರು ಏನೇ ನಿರ್ಧಾರ ಮಾಡಿದರೂ ಸ್ವಾಗತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಸಚಿನ್ ಪೈಲಟ್ ಮನವಿ ಮಾಡಿದ್ದಾರೆ.
ಇದೀಗ ಲೋಕಸಭೆ ಚುನಾವಣೆ ಕಣ್ಣೆದುರು ಇಟ್ಟುಕೊಂಡು ಅನುಭವಿ ನಾಯಕರನ್ನೇ ಆಯ್ಕೆ ಮಾಡುವ ಕಡೆಗೆ ಕಾಂಗ್ರೆಸ್ ವರಿಷ್ಠರಿಗೆ ಒಲವಿದೆ. ಅದೇ ಸಂದರ್ಭದಲ್ಲಿ ಯುವ ನಾಯಕರಿಗೂ ಬೇಸರ ಮಾಡಬಾರದು ಎಂಬ ಸಂಗತಿಯೂ ಗಮನದಲ್ಲಿದೆ.
The two most powerful warriors are patience and time.
— Rahul Gandhi (@RahulGandhi) December 13, 2018
- Leo Tolstoy pic.twitter.com/MiRq2IlrIg
ಯಾವ ರಾಜ್ಯದಲ್ಲಿ ಯಾರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಮಾಧ್ಯಮದವರು ಸೋನಿಯಾ ಗಾಂಧಿ ಅವರನ್ನು ಕೇಳಿದಾಗ, ಯಾರು ಮುಖ್ಯಮಂತ್ರಿ ಅಂತ ನನಗೆ ಗೊತ್ತಿಲ್ಲ. ರಾಹುಲ್ ರನ್ನು ಕೇಳಿ ಎಂದಿದ್ದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications