"ಸಿಎಂ ಮತ್ತು ನಾನು ಕೈಜೋಡಿಸಿದ ಮೇಲೆ ಪ್ರತಿಪಕ್ಷಕ್ಕೇನು ಕೆಲಸ"
ಭೋಪಾಲ್, ಅಕ್ಟೋಬರ್.28: ಮಧ್ಯಪ್ರದೇಶದಲ್ಲಿ ನಾನು ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಕೈಜೋಡಿಸಿದ ಮೇಲೆ ವಿರೋಧ ಪಕ್ಷಗಳ ಆಟವೇನೂ ನಡೆಯುವುದಿಲ್ಲ ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ಇಂದೋರ್ ನಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. "ಯಾವಾಗ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಮತ್ತು ನಾನು ಒಟ್ಟಿಗೆ ಕೈಜೋಡಿಸುತ್ತೀವೋ ಅಲ್ಲಿಗೆ ಪ್ರತಿಪಕ್ಷಗಳಿಗೆ ಏನೂ ಉಳಿದಿರುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕೈಗಾರಿಕೆಗಳ ವರ್ಗಾವಣೆ ಮತ್ತು ಲಿಕ್ಕರ್ ಮಾಫಿಯಾ ಬಗ್ಗೆ ಪ್ರಚಾರದಲ್ಲೇ ಬ್ಯುಸಿ ಆಗಿ ಬಿಟ್ಟಿದೆ" ಎಂದು ಜ್ಯೋತಿರಾದಿತ್ಯ ಸಿಂಧಿಯಾ ದೂಷಿಸಿದ್ದಾರೆ.
"ಮುಂಬರುವ ಚುನಾವಣೆಗಳಲ್ಲಿ ನಾವು ಸತ್ಯ ಮತ್ತು ಸುಳ್ಳನ್ನು ಆಯ್ಕೆ ಮಾಡಬೇಕಿದೆ. ಪ್ರಗತಿ ಮಾನದಂಡವನ್ನು ಇಟ್ಟುಕೊಂಡು ನಾವು ಸತ್ಯ ಅಥವಾ ಸುಳ್ಳನ್ನು ಚುನಾಯಿಸಬೇಕಿದೆ. ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಅಭ್ಯರ್ಥಿ ತುಳಸಿ ಸಿಲಾವತ್ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಸನ್ವರ್ ಕ್ಷೇತ್ರದ ಜನರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನರ್ಮದಾ ನದಿಯಿಂದ ನೀರು ತರಿಸುವುದಕ್ಕಾಗಿ ಶ್ರಮಿಸಿದ್ದಾರೆ ಎಂದು ಸಿಂಧಿಯಾ ಹೇಳಿದರು.

"ಹಣ ಗಳಿಕೆಗೆ ಸೀಮಿತಗೊಂಡಿದ್ದ ಕಾಂಗ್ರೆಸ್ ಸರ್ಕಾರ"
"ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಕಮನಾಥ್ ನೇತೃತ್ವದ ಸರ್ಕಾರವು ಕಳೆದ 15 ತಿಂಗಳುಗಳ ಆಡಳಿತದಲ್ಲಿ ಕೇವಲ ಹಣ ಗಳಿಕೆಗಷ್ಟೇ ಆದ್ಯತೆ ನೀಡಿತ್ತು. ಆದರೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ನೇತೃತ್ವದ ಸರ್ಕಾರವು ಕಷ್ಟ ಮತ್ತು ಸುಖದಲ್ಲಿ ಸಾರ್ವಜನಿಕರ ಜೊತೆಗಿದೆ" ಎಂದು ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.03ರಂದು ಮತದಾನ ನಡೆಯಲಿದ್ದು, ನವೆಂಬರ್.10ರಂದು ಫಲಿತಾಂಶ ಹೊರಬೀಳಲಿದೆ. 25 ಶಾಸಕರ ರಾಜೀನಾಮೆ ಮತ್ತು ಮೂವರು ಶಾಸಕರ ಅಕಾಲಿಕ ಮರಣದಿಂದ 28 ಕ್ಷೇತ್ರಗಳಲ್ಲಿ ಶಾಸಕ ಸ್ಥಾನವು ತೆರವಾಗಿತ್ತು. ಮಧ್ಯಪ್ರದೇಶದ 230 ಕ್ಷೇತ್ರಗಳ ಪೈಕಿ ಬಿಜೆಪಿಯ 107 ಶಾಸಕರು, ಕಾಂಗ್ರೆಸ್ಸಿನ 88, ನಾಲ್ವರು ಪಕ್ಷೇತರ ಶಾಸಕರು, ಇಬ್ಬರು ಬಿಎಸ್ ಪಿ ಮತ್ತು ಒಬ್ಬ ಸಮಾಜವಾದಿ ಪಕ್ಷದ ಶಾಸಕರಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications