72 ಗಂಟೆಗಳ ಬಳಿಕ ರಕ್ಷಣೆ; ಬದುಕಲಿಲ್ಲ ಬಾಲಕ ಪ್ರಹ್ಲಾದ್
ಭೋಪಾಲ್, ನವೆಂಬರ್ 08 : ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಪ್ರಹ್ಲಾದ್ ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸತತ 72 ಗಂಟೆಗಳಿಗೂ ಅಧಿಕ ಹೊತ್ತಿನ ಕಾರ್ಯಾಚರಣೆ ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.
ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಸೇತುಪುರ ಗ್ರಾಮದ ಮೂರು ವರ್ಷದ ಬಾಲಕ ಪ್ರಹ್ಲಾದ್ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದಾರೆ. ನವೆಂಬರ್ 4ರಂದು ಆಟವಾಡುವಾಗ ಬಾಲಕ ಕೊಳವೆಬಾವಿಗೆ ಬಿದ್ದಿದ್ದ.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸ್ಥಳೀಯ ಪೊಲೀಸರು ಸತತವಾಗಿ ಕಾರ್ಯಾಚರಣೆ ನಡೆಸಿ ಶನಿವಾರ ರಾತ್ರಿ ಬಾಲಕನನ್ನು ಕೊಳವೆಬಾವಿಯಿಂದ ಮೇಲಕ್ಕೆ ಎತ್ತಿದ್ದರು. ಬಳಿಕ ಆಸ್ಪತ್ರೆಗೆ ಆತನನ್ನು ಕರೆದುಕೊಂಡು ಹೋಗಲಾಗಿತ್ತು.

ಕೆಲವು ದಿನಗಳ ಹಿಂದೆ ಸೇತುಪುರ ಗ್ರಾಮದ ಜಮೀನಿನಲ್ಲಿ ತೆಗೆಸಿದ್ದ ಕೊಳವೆಬಾವಿಗೆ ಪ್ರಹ್ಲಾದ್ ಅಕ್ಟೋಬರ್ 4ರಂದು ಬಿದ್ದಿದ್ದ. 200 ಮೀಟರ್ ಆಳದಲ್ಲಿ ಸಿಲುಕಿದ್ದ ಆತನನ್ನು ರಕ್ಷಣೆ ಮಾಡಲು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆ ಮಾಡುವ ಮೂಲಕ ಉಸಿರಾಡಲು ಸಹಾಯಕವಾಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೋರ್ವೆಲ್ಗೆ ಸಮಾನಾಂತರವಾಗಿ ಚಾನೆಲ್ ಕೊರೆದು ರಕ್ಷಣಾ ಕಾರ್ಯಾಚರಣೆ ಆರಂಭಿಸಿಲಾಗಿತ್ತು.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಪಡೆಗಳು ಸತತ 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದವು. ಶನಿವಾರ ಬಾಲಕನನ್ನು ಪತ್ತೆ ಹಚ್ಚಿ, ರಕ್ಷಣೆ ಮಾಡಲಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications