'ಟೈಗರ್ ಅಭಿ ಜಿಂದಾ ಹೈ' ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ ಸಿಂಧಿಯಾ
ಭೋಪಾಲ್, ಜುಲೈ 3: ಮಧ್ಯಪ್ರದೇಶದ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಈಗ ಸ್ಥಳೀಯ ಕಾಂಗ್ರೆಸ್ ನಾಯಕರ ವಿರುದ್ಧ ಗುಡುಗಿದ್ದು, ಟೈಗರ್ ಜಿಂದಾ ಹೈ ಎಂದು ಎಚ್ಚರಿಸಿದ್ದಾರೆ.
Recommended Video
ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಿ ನಾಲ್ಕು ತಿಂಗಳುಗಳಾಗಿತ್ತು ಆದರೂ ಸಂಪುಟ ವಿಸ್ತರಣೆಯಾಗಿರಲಿಲ್ಲ. ಈ ಕಾರಣಕ್ಕಾಗಿ ಸಿಂಧಿಯಾ ವಿರುದ್ಧ ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದರು.
ಇದಲ್ಲದೆ ಸಿಂಧಿಯಾ ಹಾಗೂ ಅವರ ಬೆಂಬಲಿಗರ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಜ್ಯೋತಿರಾದಿತ್ಯ ಸಿಂಧಿಯಾ, ಕಳೆದ ನಾಲ್ಕು ತಿಂಗಳುಗಳಿಂದ ಮಾನಹಾನಿ, ಟೀಕೆಗಳನ್ನು ನೋಡಿಕೊಂಡು ಬಂದಿದ್ದೇನೆ. ಆದರೆ ಈ ಹುಲಿ ಇನ್ನೂ ಬದುಕಿದೆ.

ಮಧ್ಯಪ್ರದೇಶದಲ್ಲಿ ನಡೆಯುವ ಎಲ್ಲಾ 24 ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. 15 ತಿಂಗಳುಗಳ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಲಿದ್ದಾರೆ.
ನನ್ನ ವಿರುದ್ಧದ ಟೀಕೆಗಳಿಗೆ ಚುನಾವಣೆ ಮೂಲಕವೇ ಉತ್ತರಿಸಲಿದ್ದೇನೆ, ಸಿಂಧಿಯಾ ಯೆರೆನ್ನುವುದು ಆಗ ತಿಳಿಯಲಿದೆ. ಕಮಲ್ನಾಥ್ ಹಾಗೂ ದಿಗ್ವಿಜಯ್ ಸಿಂಗ್ ಅವರೇ ಟೈಗರ್ ಜಿಂದಾ ಹೈ ಎಂದು ಗ್ವಾಲಿಯರ್ ಯುವ ರಾಜ ಗುಡುಗಿದ್ದಾರೆ.
ಏತನ್ಮಧ್ಯೆ ಗುರುವಾರ ನಡೆದ ಮಧ್ಯಪ್ರದೇಶ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಸಿಂಧಿಯಾ ಪರ 14 ಶಾಸಕರಿಗೆ ಸ್ಥಾನ ದೊರೆತಿದೆ. ಇದರಿಂದ ಸಿಂಧಿಯಾ ಕೂಡ ಫುಲ್ ಖುಷ್ ಆಗಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications