ಅಕ್ರಮ ಮರಳು ಗಣಿಗಾರಿಕೆ: ನೀರಲ್ಲಿ ಸಿಲುಕಿದ ಲಾರಿಗಳು
ಮಧ್ಯಪ್ರದೇಶ, ಜುಲೈ 21: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮಂಡಳಿಯ ಆದೇಶ ಉಲ್ಲಂಘಿಸಿ ಅಕ್ರಮ ಮರಳು ಗಣಿಗಾರಿಕೆ ನಡೆದಿದೆ. ಈ ವೇಳೆ ಮರಳು ಸಾಗಿಸುತ್ತಿದ್ದ ಹಲವು ಲಾರಿಗಳು ಗಾಣಿಗಾರಿಕೆ ಪ್ರದೇಶದಲ್ಲಿ ಸಿಲುಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಂಗಾರು ಋತು ಆರಂಭವಾಗುತ್ತಿದ್ದಂತೆ ನದಿ ಇನ್ನಿತರ ನೀರಿನ ಮೂಲಗಳಿಂದ ಮರಳು ತೆಗೆಯುವುದು ನಿಷಿದ್ಧವಾಗಿದೆ. ಈ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಎಚ್ಚರಿಸಿದ್ದಲ್ಲದೇ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ಮಾಡಿದಂತೆ ಸೂಚಿಸಿ ಆದೇಶಿಸಿದೆ. ಹೀಗಿದ್ದರು ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಸಿಂಧ್ ನದಿಯ ಅಕ್ರಮ ಗಣಿಗಾರಿಕೆ ಮಾಡಿದ್ದರಿಂದಲೇ ಲಾರಿಗಳು ಸಿಲುಕಿರುವ ಘಟನೆ ನಡೆದಿದೆ.
ಮುಂಗಾರು ಋತುವಿನ ಆಗಿದ್ದರಿಂದ ಎಲ್ಲೆಡೆ ಧಾರಾಕಾರ ಮಳೆ ಬಿದ್ದಿದೆ. ಹೀಗಾಗಿ ಸಿಂಧ್ ನದಿಯಲ್ಲಿ ನೀರು ಹೆಚ್ಚಾಗಿದೆ. ಜೋರು ಮಳೆಗೆ ಮರಳು ತೆಗೆದಿದ್ದ ಪ್ರದೇಶ ಸಂಪೂರ್ಣ ಜವಾವೃತವಾಗಿದೆ. ಈ ವೇಳೆ ಮರಳು ತುಂಬಿದ್ದ ಲಾರಿ/ಟಿಪ್ಪರ್ಗಳು ಮುಂದೆ ಚಲಿಸಲಾಗದೇ ನೀರು ಮತ್ತು ಮರಳಿನಲ್ಲಿಯೇ ಸಿಲುಕಿವೆ. ಲಾರಿಗಳಿಂದ ಹೊರ ಬರಲು ಅಥವಾ ಸುರಕ್ಷಿತ ಸ್ಥಳಕ್ಕೆ ಲಾರಿ ಕರೆತರಲಾಗದೇ ಚಾಲಕರು ಪರದಾಡಿದ್ದಾರೆ. ಈ ಕುರಿತು ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನದಿ, ಪರಿಸರಕ್ಕೆ ಹಾನಿಯಾಗುತ್ತದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮುಂಗಾರು ಋತು ಇನ್ನೇನು ಆರಂಭವಾಗುತ್ತದೆ ಎಂಬ ಸಂದರ್ಭದಲ್ಲಿ ಮರಳು ಗಣಿಗಾರಿಕೆ ನಿಷೇಧಿ ಆದೇಶಿಸಿದೆ. ಈ ಕುರಿತು ಸೂಕ್ತ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ರಾಜ್ಯ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿಲಾಗಿರುತ್ತದೆ. ಆದರೆ ಅಧಿಕಾರ ನಿರ್ಲಕ್ಷ್ಯದಿಂದ ಅಥವಾ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡಲಾಗಿದೆ.
ಮರಳು ಗಣಿಗಾರಿಕೆ ಯಿಂದ ಪರಿಹಾರಕ್ಕೆ, ನದಿಗೆ ಹಾನಿ ಉಂಟಾಗುತ್ತದೆ. ಅಂತರ್ಜಲ ಮಟ್ಟ ಕುಸಿಯುತ್ತದೆ. ನದಿ ಪಾತ್ರದ ಮರಳು ಗಣಿಗಾರಿಕೆಯು ಮೀನುಗಳು ಮತ್ತು ಜಲಚರಗಳ ಸಂತಾನೋತ್ಪತ್ತಿಯ ಋತುವಿನ ಮೇಲೆ ಪರಿಣಾಮ ಬೀರುತ್ತದೆ. ಪರಿಸರದ ಸಂರಕ್ಷಣೆ ಹಾಗೂ ಭವಿಷ್ಯದ ಹಿತ ದೃಷ್ಟಿಯಿಂದ ಅಕ್ರಮ ಮರಳು ಗಣಿಗಾರಿಕೆ ಮಾಡುವವ ವಿರುದ್ಧ ಪರಿಸರವಾದಿಗಳು ಕ್ರಮ ಆಗ್ರಹಿಸಿದ್ದಾರೆ.
Recommended Video
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications