ಅಕ್ರಮ ಮರಳು ಗಣಿಗಾರಿಕೆ: ನೀರಲ್ಲಿ ಸಿಲುಕಿದ ಲಾರಿಗಳು
ಮಧ್ಯಪ್ರದೇಶ, ಜುಲೈ 21: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮಂಡಳಿಯ ಆದೇಶ ಉಲ್ಲಂಘಿಸಿ ಅಕ್ರಮ ಮರಳು ಗಣಿಗಾರಿಕೆ ನಡೆದಿದೆ. ಈ ವೇಳೆ ಮರಳು ಸಾಗಿಸುತ್ತಿದ್ದ ಹಲವು ಲಾರಿಗಳು ಗಾಣಿಗಾರಿಕೆ ಪ್ರದೇಶದಲ್ಲಿ ಸಿಲುಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಂಗಾರು ಋತು ಆರಂಭವಾಗುತ್ತಿದ್ದಂತೆ ನದಿ ಇನ್ನಿತರ ನೀರಿನ ಮೂಲಗಳಿಂದ ಮರಳು ತೆಗೆಯುವುದು ನಿಷಿದ್ಧವಾಗಿದೆ. ಈ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಎಚ್ಚರಿಸಿದ್ದಲ್ಲದೇ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ಮಾಡಿದಂತೆ ಸೂಚಿಸಿ ಆದೇಶಿಸಿದೆ. ಹೀಗಿದ್ದರು ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಸಿಂಧ್ ನದಿಯ ಅಕ್ರಮ ಗಣಿಗಾರಿಕೆ ಮಾಡಿದ್ದರಿಂದಲೇ ಲಾರಿಗಳು ಸಿಲುಕಿರುವ ಘಟನೆ ನಡೆದಿದೆ.
ಮುಂಗಾರು ಋತುವಿನ ಆಗಿದ್ದರಿಂದ ಎಲ್ಲೆಡೆ ಧಾರಾಕಾರ ಮಳೆ ಬಿದ್ದಿದೆ. ಹೀಗಾಗಿ ಸಿಂಧ್ ನದಿಯಲ್ಲಿ ನೀರು ಹೆಚ್ಚಾಗಿದೆ. ಜೋರು ಮಳೆಗೆ ಮರಳು ತೆಗೆದಿದ್ದ ಪ್ರದೇಶ ಸಂಪೂರ್ಣ ಜವಾವೃತವಾಗಿದೆ. ಈ ವೇಳೆ ಮರಳು ತುಂಬಿದ್ದ ಲಾರಿ/ಟಿಪ್ಪರ್ಗಳು ಮುಂದೆ ಚಲಿಸಲಾಗದೇ ನೀರು ಮತ್ತು ಮರಳಿನಲ್ಲಿಯೇ ಸಿಲುಕಿವೆ. ಲಾರಿಗಳಿಂದ ಹೊರ ಬರಲು ಅಥವಾ ಸುರಕ್ಷಿತ ಸ್ಥಳಕ್ಕೆ ಲಾರಿ ಕರೆತರಲಾಗದೇ ಚಾಲಕರು ಪರದಾಡಿದ್ದಾರೆ. ಈ ಕುರಿತು ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನದಿ, ಪರಿಸರಕ್ಕೆ ಹಾನಿಯಾಗುತ್ತದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮುಂಗಾರು ಋತು ಇನ್ನೇನು ಆರಂಭವಾಗುತ್ತದೆ ಎಂಬ ಸಂದರ್ಭದಲ್ಲಿ ಮರಳು ಗಣಿಗಾರಿಕೆ ನಿಷೇಧಿ ಆದೇಶಿಸಿದೆ. ಈ ಕುರಿತು ಸೂಕ್ತ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸುವಂತೆ ರಾಜ್ಯ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿಲಾಗಿರುತ್ತದೆ. ಆದರೆ ಅಧಿಕಾರ ನಿರ್ಲಕ್ಷ್ಯದಿಂದ ಅಥವಾ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡಲಾಗಿದೆ.
ಮರಳು ಗಣಿಗಾರಿಕೆ ಯಿಂದ ಪರಿಹಾರಕ್ಕೆ, ನದಿಗೆ ಹಾನಿ ಉಂಟಾಗುತ್ತದೆ. ಅಂತರ್ಜಲ ಮಟ್ಟ ಕುಸಿಯುತ್ತದೆ. ನದಿ ಪಾತ್ರದ ಮರಳು ಗಣಿಗಾರಿಕೆಯು ಮೀನುಗಳು ಮತ್ತು ಜಲಚರಗಳ ಸಂತಾನೋತ್ಪತ್ತಿಯ ಋತುವಿನ ಮೇಲೆ ಪರಿಣಾಮ ಬೀರುತ್ತದೆ. ಪರಿಸರದ ಸಂರಕ್ಷಣೆ ಹಾಗೂ ಭವಿಷ್ಯದ ಹಿತ ದೃಷ್ಟಿಯಿಂದ ಅಕ್ರಮ ಮರಳು ಗಣಿಗಾರಿಕೆ ಮಾಡುವವ ವಿರುದ್ಧ ಪರಿಸರವಾದಿಗಳು ಕ್ರಮ ಆಗ್ರಹಿಸಿದ್ದಾರೆ.
Recommended Video
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications