ಕೊಲೆ ಯತ್ನ ಕೇಸಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಪುತ್ರನ ಬಂಧನ

ಭೋಪಾಲ್, ಜೂನ್ 19: ಕೇಂದ್ರ ಸಚಿವ ಪ್ರಹ್ಲಾದ್​ ಪಟೇಲ್​ ಪುತ್ರ ಪ್ರಬಲ್​ ಪಟೇಲ್ ಹಾಗೂ 6 ಜನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಯತ್ನ, ಹಲ್ಲೆ, ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಬಲ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಎಫ್ಐಆರ್ ಹಾಕಿದ್ದರು.

ನರಸಿಂಗಪುರ್ ಜಿಲ್ಲೆಯ ಗೋಟೆಗಾವ್​ನಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 20 ಮಂದಿ ಮೇಲೆ ಪ್ರಕರಣ ದಾಖಲಾಗಿತ್ತು. 50 ವರ್ಷದ ಹೋಂ ಗಾರ್ಡ್​ಈಶ್ವರ್ ರಾಯ್​ ಹಾಗೂ ಅವರ ಪುತ್ರನ ಮೇಲೆ ಪ್ರಬಲ್ ಪಟೇಲ್ ಮತ್ತು ಸಹಚರರು ಹಲ್ಲೆ ನಡೆಸಿದ್ದರು.

ಈಶ್ವರ್ ರಾಯ್​ಹಾಗೂ ಪುತ್ರನ ಮೇಲೆ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪವೂ ಪ್ರಬಲ್ ವಿರುದ್ಧವಿದೆ. ಘಟನೆಯಲ್ಲಿ ಈಶ್ವರ್​ರಾಯ್ ಗಂಭೀರವಾಗಿ ಗಾಯಗೊಂಡಿದೆ, ಸಚಿವರ ಅಳಿಯ ಮೊನು ಪಟೇಲ್ ಅವರು ಈ ಗಲಭೆಯಲ್ಲಿ ಭಾಗವಾಗಿದ್ದು, ಸದ್ಯ ನಾಪತ್ತೆಯಾಗಿದ್ದಾರೆ.

Union Minister Prahlad Patels son arrested for assaulting duo

ಮೋನು ಪಟೇಲ್ ಅವರು ಮಧ್ಯಪ್ರದೇಶ ಬಿಜೆಪಿ ನಾಯಕ ಮಾಜಿ ಸಚಿವ ಜಲಮ್​ಸಿಂಗ್ ಪಟೇಲ್ ಪುತ್ರರಾಗಿದ್ದು, ಅವರ ಜೊತೆಗೆ ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎಂದು ನರಸಿಂಗಪುರ್​ ಜಿಲ್ಲಾ ಎಸ್​ಪಿ ಗುರುಕರಣ್​ ಸಿಂಗ್​ ಹೇಳಿದ್ದಾರೆ.

ಮದುವೆ ಮನೆಗೆ ಹೋಗಿದ್ದ ಈಶ್ವರ್ ರಾಯ್ ಹಾಗೂ ಅವರ ಪುತ್ರ ಹಿಂತಿರುಗಿ ಮನೆಗೆ ಹೋಗುವಾಗ ಪ್ರಬಲ್ ಪಟೇಲ್ ಹಾಗೂ ಸಹಚರರ ಜೊತೆ ಜಗಳವಾಡಿಕೊಂಡಿದ್ದಾರೆ. ಪ್ರಬಲ್​ ಪಟೇಲ್​ ಮತ್ತು ಸಹಚರರು ಆತನ ಮೇಲೆ ರಾಡ್, ಬ್ಯಾಟ್​ನಿಂದ ಹಲ್ಲೆ ನಡೆಸಿದ್ದರು.

ವಾಜಪೇಯಿ ಅಧಿಕಾರ ಅವಧಿಯಲ್ಲಿ ಸಚಿವರಾಗಿದ್ದ ಪ್ರಹ್ಲಾದ್ ಪಟೇಲ್ ಅವರು ಮೋದಿ ಸರ್ಕಾರ್ 2.0ದಲ್ಲಿ ಸಂಸ್ಕೃತಿ, ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+