ವಿಡಿಯೋ: 'ಬಂತು ಬಂತು ಟ್ರೈನ್ ಬಂತು' ಖುಷಿಯಲ್ಲಿ ನೃತ್ಯ ಮಾಡಿದ ಪ್ರಯಾಣಿಕರು
ಭೋಪಾಲ್ ಮೇ 26: ಬುಧವಾರ ತಡರಾತ್ರಿ ಮಧ್ಯಪ್ರದೇಶದ ರತ್ಲಾಮ್ ರೈಲು ನಿಲ್ದಾಣದಲ್ಲಿ ಕುತೂಹಲಕಾರಿ ದೃಶ್ಯ ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ರೈಲ್ವೇ ನಿಲ್ದಾಣದಲ್ಲಿ ಹಲವಾರು ಪ್ರಯಾಣಿಕರು ಗರ್ಭಾ ಡ್ಯಾನ್ಸ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾತ್ರಿ ರೈಲ್ವೇ ನಿಲ್ದಾಣದ ಪ್ಲಾಟ್ಫಾರಂ ನಂ.5ರಲ್ಲಿ ಹತ್ತಾರು ಜನರ ಈ ಸ್ವಯಂಪ್ರೇರಿತ ಪ್ರದರ್ಶನಕ್ಕೆ ಕಾರಣವೇನೆಂದರೆ ರೈಲು ಸಮಯಕ್ಕಿಂತ 20 ನಿಮಿಷ ಮುಂಚಿತವಾಗಿ ಬಂದಿರುವುದು. ಹೌದು.. ಬಾಂದ್ರಾ-ಹರಿದ್ವಾರ ರೈಲು ಬುಧವಾರ ರಾತ್ರಿ 10.15 ಕ್ಕೆ 20 ನಿಮಿಷಗಳ ಮುಂಚಿತವಾಗಿ ರತ್ಲಾಮ್ ನಿಲ್ದಾಣಕ್ಕೆ ಬಂದಾಗ ಇದು ಪ್ರಾರಂಭವಾಯಿತು. ರೈಲು ಹೊರಡಲು 10 ನಿಮಿಷಗಳ ನಿಲುಗಡೆ ಸಮಯವನ್ನು ಹೊಂದಿತ್ತು.
ಪ್ರಯಾಣಿಕರ ಕೈಯಲ್ಲಿ ಸುಮಾರು 30 ನಿಮಿಷಗಳಿರುವಾಗ, ಪ್ರಯಾಣಿಕರ ಗುಂಪು ಗರ್ಭಾ ನೃತ್ಯ ಮಾಡಲು ಪ್ರಾರಂಭಿಸಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ 'ಒಡ್ನಿ ಉಡಿ ಉಡಿ ಜಾಯೆ' ಮುಂತಾದ ಹಾಡುಗಳಿಗೆ ಗುಂಪು ನೃತ್ಯ ಮಾಡುವುದನ್ನು ನೋಡಬಹುದು. ಇದರಿಂದ, ನೋಡುಗರಿಗೆ ಆಶ್ಚರ್ಯವಾಗಿದೆ.

ಈ ಕ್ಲಿಪ್ ಅನ್ನು ರೈಲ್ವೇ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕೂ ಆಪ್ನಲ್ಲಿ "ಹ್ಯಾಪಿ ಜರ್ನಿ" ಎಂದು ಬರೆಯುವ ಮೂಲಕ ಹಂಚಿಕೊಂಡಿದ್ದಾರೆ.
ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ಕೂ ಬಳಕೆದಾರರು, "ಭಾರತೀಯರಾದ ನಾವು ಆಚರಿಸಲು ಇಷ್ಟಪಡುತ್ತೇವೆ. ನಮಗೆ ಸಂತೋಷಪಡಲು ಒಂದು ಕಾರಣವನ್ನು ನೀಡಿ ... " ಎಂದು ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
"ಬಹುತ್ ಸುಂದರ್ (ತುಂಬಾ ಸುಂದರ)" ಎಂದು ಮತ್ತೊಬ್ಬರು ಬರೆದಿದ್ದಾರೆ.
"ರೈಲು ಸಮಯಕ್ಕೆ ಸರಿಯಾಗಿ ಬಂದಾಗ, ಅದು ನಿಜವಾಗಿಯೂ ಸಂತೋಷದ ಮೂಲವಾಗಿದೆ" ಎಂದು ಹಿಂದಿಯಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications