ವಿಡಿಯೋ: 'ಬಂತು ಬಂತು ಟ್ರೈನ್ ಬಂತು' ಖುಷಿಯಲ್ಲಿ ನೃತ್ಯ ಮಾಡಿದ ಪ್ರಯಾಣಿಕರು
ಭೋಪಾಲ್ ಮೇ 26: ಬುಧವಾರ ತಡರಾತ್ರಿ ಮಧ್ಯಪ್ರದೇಶದ ರತ್ಲಾಮ್ ರೈಲು ನಿಲ್ದಾಣದಲ್ಲಿ ಕುತೂಹಲಕಾರಿ ದೃಶ್ಯ ಕಂಡುಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ರೈಲ್ವೇ ನಿಲ್ದಾಣದಲ್ಲಿ ಹಲವಾರು ಪ್ರಯಾಣಿಕರು ಗರ್ಭಾ ಡ್ಯಾನ್ಸ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾತ್ರಿ ರೈಲ್ವೇ ನಿಲ್ದಾಣದ ಪ್ಲಾಟ್ಫಾರಂ ನಂ.5ರಲ್ಲಿ ಹತ್ತಾರು ಜನರ ಈ ಸ್ವಯಂಪ್ರೇರಿತ ಪ್ರದರ್ಶನಕ್ಕೆ ಕಾರಣವೇನೆಂದರೆ ರೈಲು ಸಮಯಕ್ಕಿಂತ 20 ನಿಮಿಷ ಮುಂಚಿತವಾಗಿ ಬಂದಿರುವುದು. ಹೌದು.. ಬಾಂದ್ರಾ-ಹರಿದ್ವಾರ ರೈಲು ಬುಧವಾರ ರಾತ್ರಿ 10.15 ಕ್ಕೆ 20 ನಿಮಿಷಗಳ ಮುಂಚಿತವಾಗಿ ರತ್ಲಾಮ್ ನಿಲ್ದಾಣಕ್ಕೆ ಬಂದಾಗ ಇದು ಪ್ರಾರಂಭವಾಯಿತು. ರೈಲು ಹೊರಡಲು 10 ನಿಮಿಷಗಳ ನಿಲುಗಡೆ ಸಮಯವನ್ನು ಹೊಂದಿತ್ತು.
ಪ್ರಯಾಣಿಕರ ಕೈಯಲ್ಲಿ ಸುಮಾರು 30 ನಿಮಿಷಗಳಿರುವಾಗ, ಪ್ರಯಾಣಿಕರ ಗುಂಪು ಗರ್ಭಾ ನೃತ್ಯ ಮಾಡಲು ಪ್ರಾರಂಭಿಸಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ 'ಒಡ್ನಿ ಉಡಿ ಉಡಿ ಜಾಯೆ' ಮುಂತಾದ ಹಾಡುಗಳಿಗೆ ಗುಂಪು ನೃತ್ಯ ಮಾಡುವುದನ್ನು ನೋಡಬಹುದು. ಇದರಿಂದ, ನೋಡುಗರಿಗೆ ಆಶ್ಚರ್ಯವಾಗಿದೆ.

ಈ ಕ್ಲಿಪ್ ಅನ್ನು ರೈಲ್ವೇ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕೂ ಆಪ್ನಲ್ಲಿ "ಹ್ಯಾಪಿ ಜರ್ನಿ" ಎಂದು ಬರೆಯುವ ಮೂಲಕ ಹಂಚಿಕೊಂಡಿದ್ದಾರೆ.
ವಿಡಿಯೊವನ್ನು ಇಲ್ಲಿ ವೀಕ್ಷಿಸಿ:
ಕೂ ಬಳಕೆದಾರರು, "ಭಾರತೀಯರಾದ ನಾವು ಆಚರಿಸಲು ಇಷ್ಟಪಡುತ್ತೇವೆ. ನಮಗೆ ಸಂತೋಷಪಡಲು ಒಂದು ಕಾರಣವನ್ನು ನೀಡಿ ... " ಎಂದು ಬರೆಯುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
"ಬಹುತ್ ಸುಂದರ್ (ತುಂಬಾ ಸುಂದರ)" ಎಂದು ಮತ್ತೊಬ್ಬರು ಬರೆದಿದ್ದಾರೆ.
"ರೈಲು ಸಮಯಕ್ಕೆ ಸರಿಯಾಗಿ ಬಂದಾಗ, ಅದು ನಿಜವಾಗಿಯೂ ಸಂತೋಷದ ಮೂಲವಾಗಿದೆ" ಎಂದು ಹಿಂದಿಯಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications