ಗಂಡ ಮನೆಗೆ ತಡವಾಗಿ ಬಂದನೆಂದು ಕುದಿಯುವ ಎಣ್ಣೆಯನ್ನು ಮುಖಕ್ಕೆ ಸುರಿದ ಹೆಂಡತಿ
ಭೋಪಾಲ್, ಜನವರಿ 05: ಗಂಡ ಮನೆಗೆ ತಡವಾಗಿ ಬಂದಿದ್ದಕ್ಕೆ ಪತ್ನಿಯೊಬ್ಬಳು ಭಾರೀ ಅವಾಂತರ ಸೃಷ್ಟಿಸಿದ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದೆ. ಗಂಡ ತಡವಾಗಿ ಮನೆಗೆ ಬಂದಿದ್ದ ಎಂಬ ಕಾರಣಕ್ಕೆ ಮಲಗಿದ್ದ ಗಂಡನ ಮುಖದ ಮೇಲೆ ಕುದಿಯುವ ಎಣ್ಣೆ ಸುರಿದು ಪತ್ನಿ ಹೀನಾಯ ಕೃತ್ಯ ಮೆರೆದಿದ್ದಾಳೆ.
35 ವರ್ಷದ ಆರೋಪಿ ಶಿವಕುಮಾರಿ ಅಹಿರ್ವಾರ್ ತನ್ನ ಗಂಡ ಅರವಿಂದ್ ಅಹಿರ್ವಾರ್(38) ಮೇಲೆ ಕುದಿಯುವ ಎಣ್ಣೆ ಸುರಿದಿದ್ದಾಳೆ. ಪರಿಣಾಮ ಅರೆಬೆಂದ ಸ್ಥಿತಿಯಲ್ಲಿರುವ ಪತಿರಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.
ನಾಲ್ಕು ವರ್ಷದ ಹಿಂದೆ ಮದುವೆಯಾದ ಈ ಜೋಡಿಯ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಆದರೆ ಪತಿ ಮನೆಗೆ ತಡವಾಗಿ ಎಂಬ ಕಾರಣಕ್ಕೆ ಆರಂಭವಾದ ಜಗಳವು ತಾರಕಕ್ಕೇರಿ ಈ ಭಾರೀ ಅವಾಂತರಕ್ಕೆ ಕಾರಣವಾಗಿದೆ. ಜಗಳವನ್ನು ರಾತ್ರಿ ಕುಟುಂಬಸ್ಥರು ಮಧ್ಯ ಪ್ರವೇಶಿಸಿ ನಿಲ್ಲಿಸಿದ್ದಾರೆ. ಆದರೆ ರಾತ್ರಿ ಜಗಳಕ್ಕೆ ತಣ್ಣಗಾಗದ ಪತ್ನಿ ಶಿವಕುಮಾರಿ, ಬೆಳಿಗ್ಗೆ ಐದು ಗಂಟೆಯ ಸುಮಾರಿಗೆ ಎಣ್ಣೆಯನ್ನು ಕಾಯಿಸಿ, ಮಲಗಿದ್ದ ಗಂಡನ ಮುಖದ ಮೇಲೆ ಸುರಿದಿದ್ದಾಳೆ. ಸುಡುತ್ತಿದ್ದ ಎಣ್ಣೆಯಿಂದಾಗಿ ಅರವಿಂದ್ ಮುಖ ಸುಟ್ಟಿದ್ದು, ಆತ ಚೀರಿಕೊಂಡಿದ್ದಾನೆ.

ಮನೆಯವರೆಲ್ಲರೂ ಸೇರಿ ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅರವಿಂದ್ ಕುಟುಂಬಸ್ಥರು ಶಿವಕುಮಾರಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸಿಟ್ಟಿನಿಂದಾಗಿ ನಾನು ತಪ್ಪು ಮಾಡಿದೆ ಎಂದು ಶಿವಕುಮಾರಿ ಒಪ್ಪಿಕೊಂಡಿರುವುದಾಗಿ ಆಕೆಯ ಸಹೋದರ ತಿಳಿಸಿದ್ದಾರೆ. ಮುಖಕ್ಕೆ ತೀವ್ರ ಗಾಯಗೊಂಡಿರುವ ಅರವಿಂದ್, ಈಗ ಸಾಗರ ಜಿಲ್ಲೆಯ ಬುಂದೇಲ್ಖಂಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications