25 ವರ್ಷದ ಚಂದ್ರಾನಿ ಮುರ್ಮು ಅತ್ಯಂತ ಕಿರಿಯ ವಯಸ್ಸಿನ ಸಂಸದೆ
ಭುವನೇಶ್ವರ್ (ಒಡಿಶಾ), ಮೇ 26: ಮೊದಲ ಪ್ರಯತ್ನದಲ್ಲೇ ಲೋಕಸಭೆ ಸಂಸದೆಯಾಗಿ ಆಯ್ಕೆಯಾಗಿರುವ ಒಡಿಶಾದ ಇಪ್ಪತ್ತೈದು ವರ್ಷದ ಎಂಜಿನಿಯರಿಂಗ್ ಪದವೀಧರೆ ಈ ಬಾರಿಯ ಅತ್ಯಂತ ಕಿರಿಯ ವಯಸ್ಸಿನ ಎಂ.ಪಿ. ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಆಕೆ ಹೆಸರು ಚಂದ್ರಾನಿ ಮುರ್ಮು. ಬುಡಕಟ್ಟು ಸಮುದಾಯವೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಿಯೊಂಜಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಇಪ್ಪತ್ತಾರು ವರ್ಷಕ್ಕೆ ಅಯ್ಕೆಯಾಗಿ, ದುಷ್ಯಂತ್ ಚೌಟಾಲ ನಿರ್ಮಿಸಿದ್ದ ದಾಖಲೆಯನ್ನು ಕಿಯೊಂಜಾರ್ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಬಿಜೆಡಿಯ ಚಂದ್ರಾಣಿ ಅವರು ಅಳಿಸಿ ಹಾಕಿದ್ದಾರೆ. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ಹಿಸ್ಸಾರ್ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ದುಷ್ಯಂತ್ ಅತ್ಯಂತ ಕಿರಿಯ ವಯಸ್ಸಿನ ಸಂಸದ ಎನಿಸಿಕೊಂಡಿದ್ದರು.
ಈಗ ಮುರ್ಮು ಅವರಿಗೆ ಇಪ್ಪತ್ತೈದು ವರ್ಷ ಹನ್ನೊಂದು ತಿಂಗಳು ಒಂಬತ್ತು ದಿನ ವಯಸ್ಸು. ಉದ್ಯೋಗ ಸೃಷ್ಟಿ ಮಾಡುವುದು ಅವರ ಆದ್ಯತೆ ಎಂದು ಹೇಳಿಕೊಂಡಿದ್ದಾರೆ. ಆ ಭಾಗದಲ್ಲಿ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವ ಯಾವ ಅವಕಾಶವನ್ನೂ ಬಿಟ್ಟುಕೊಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಖನಿಜ ಸಂಪನ್ಮೂಲ ಯಥೇಚ್ಛವಾಗಿ ಇರುವ ಕಿಯೊಂಜಾರ್ ನಂಥ ಜಿಲ್ಲೆಯಲ್ಲಿ ಉದ್ಯೋಗ ಬಿಕ್ಕಟ್ಟು ಇರುವುದು ದುರದೃಷ್ಟಕರ. ನಮ್ಮ ರಾಜ್ಯದ ಯುವ ಜನರು ಹಾಗೂ ಮಹಿಳೆಯರನ್ನು ಕೇಂದ್ರದಲ್ಲಿ ಪ್ರತಿನಿಧಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಎರಡು ಬಾರಿ ಸಂಸದರಾಗಿದ್ದ ಬಿಜೆಪಿಯ ಅನಂತ ನಾಯಕ್ ಅವರನ್ನು ಮುರ್ಮು ಅರವತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮೆಕ್ಯಾನಿಕಲ್ ಎಂಜಿನಿಯರ್ ಪದವಿ ಪಡೆದ ನಂತರ ಉದ್ಯೋಗ್ಕಕ್ಕೆ ಪ್ರಯತ್ನಿಸುತ್ತಿದ್ದ ಮುರ್ಮು, ಲೋಕಸಭೆ ಚುನಾವಣೆ ಸ್ಪರ್ಧಿಯಾಗಿ ಕಣಕ್ಕಿಳಿದರು. ಅಂದ ಹಾಗೆ ಕಿಯೊಂಜಾರ್ ಕ್ಷೇತ್ರದಿಂದ ಕಾಂಗ್ರೆಸ್ಸೇತರ ಎಂ.ಪಿಯನ್ನು ಒಂಬತ್ತು ಬಾರಿ ಸಂಸತ್ ಗೆ ಆರಿಸಿ ಕಳಿಸಿದ್ದಾರೆ. ಈ ಕ್ಷೇತ್ರದಿಂದ ಕಳೆದ ಎರಡು ಬಾರಿಯಿಂದ ಬಿಜು ಜನತಾದಳ ಗೆಲ್ಲುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications