ಲಸಿಕೆಯೇ ಇಲ್ಲ: ಒಡಿಶಾದಲ್ಲಿ 600 ಕೊರೊನಾ ಲಸಿಕಾ ಕೇಂದ್ರಗಳು ಬಂದ್!
ಭುವನೇಶ್ವರ್, ಏಪ್ರಿಲ್ 07: ಒಡಿಶಾದಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆ ಎದುರಾದ ಹಿನ್ನೆಲೆ ರಾಜ್ಯದ 600 ಕೊವಿಡ್-19 ಲಸಿಕಾ ಕೇಂದ್ರಗಳನ್ನು ಬಂದ್ ಮಾಡುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಒಡಿಶಾದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೊರೊನಾವೈರಸ್ ಸೋಂಕಿನ ಲಸಿಕೆ ವಿತರಣೆಗಾಗಿ 1472 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿತ್ತು. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಲಸಿಕಾ ಕೇಂದ್ರಗಳ ಸಂಖ್ಯೆ 1103ಕ್ಕೆ ಇಳಿಕೆಯಾಗಿತ್ತು. ಈ ಸಂಖ್ಯೆ ಬುಧವಾರದ ವೇಳೆದೆ 800ಕ್ಕೆ ಇಳಿದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 15 ಲಕ್ಷ ಡೋಸ್ ಲಸಿಕೆ ನೀಡುವಂತೆ ಕೋರಿದ ಬೆನ್ನಲ್ಲೇ ಮಂಗಳವಾರ 3.5 ಲಕ್ಷ ಡೋಸ್ ಕೊವಿಡ್-19 ಲಸಿಕೆ ವಿತರಣೆ ಮಾಡಲಾಗಿತ್ತು. ರಾಜ್ಯದ ಜಿಲ್ಲೆಗಳಲ್ಲಿರುವ ಕೆಲವು ಕೊರೊನಾ ಲಸಿಕೆ ಕೇಂದ್ರಗಳನ್ನು ಮುಚ್ಚುವುದರ ಹೊರತಾಗಿ ನಮ್ಮ ಎದುರಿಗೆ ಬೇರೆ ಮಾರ್ಗಗಳೇ ಕಾಣುತ್ತಿಲ್ಲ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ. ವಿಜಯ್ ಪಾಣಿಗ್ರಹಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊವಿಶೀಲ್ಡ್ ಲಸಿಕೆಯ ಕೊರತೆ:
ಒಡಿಶಾದಲ್ಲಿ 1.26 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆ ಸಂಗ್ರಹವಿದ್ದು, ಕೊವಿಶೀಲ್ಡ್ ಲಸಿಕೆಯ ಕೊರತೆ ಎದುರಾಗಿದೆ. ಜಿಲ್ಲಾಕೇಂದ್ರ ಮತ್ತು ಪ್ರಾದೇಶಿಕ ಪ್ರದೇಶಗಳಲ್ಲಿ ಇರುವ ಕೊರೊನಾವೈರಸ್ ಲಸಿಕೆ ಕೇಂದ್ರಗಳಲ್ಲಿ ಲಸಿಕೆಯ ಅಭಾವ ಕಂಡು ಬಂದಿದೆ. ರಾಜ್ಯದಲ್ಲಿ ಈವರೆಗೂ 37.41 ಲಕ್ಷ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ಪ್ರತಿನಿತ್ಯ ರಾಜ್ಯದಲ್ಲಿ 2.31 ಲಕ್ಷ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 5.33 ಲಕ್ಷ ಡೋಸ್ ಕೊವ್ಯಾಕ್ಸಿನ್ ಲಸಿಕೆ ಹಾಗೂ 1.26 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications