ಕೊವಿಡ್-19 ಚಿಕಿತ್ಸೆಗೆ ಪ್ಲಾಸ್ಮಾ ಬ್ಯಾಂಕ್ ತೆರೆದ ಮತ್ತೊಂದು ರಾಜ್ಯ
ಭುವನೇಶ್ವರ್, ಜುಲೈ.16: ಕೊರೊನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಮೊದಲು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತಾ ಅನಿವಾರ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ನವದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳ ಅನುಸರಿಸಿದ ಮಾರ್ಗವನ್ನೂ ಒಡಿಶಾ ಸರ್ಕಾರ ಕೂಡಾ ಪಾಲಿಸಲು ಮುಂದಾಗಿದೆ.
Recommended Video
ನವದೆಹಲಿ ಮತ್ತು ಮಹಾರಾಷ್ಟ್ರದ ಬಳಿಕ ಮೂರನೇ ರಾಜ್ಯದಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲಾಗಿದೆ. ಒಡಿಶಾದಲ್ಲಿ ಕೊರೊನಾವೈರಸ್ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವ ಉದ್ದೇಶಕ್ಕಾಗಿ ಪ್ಲಾಸ್ಮಾ ಸಂಗ್ರಹಕ್ಕೆ ಸರ್ಕಾರವು ಮುಂದಾಗಿದೆ.
ದೇಶದಲ್ಲೇ ಮೊದಲ ಬಾರಿಗೆ ನವದೆಹಲಿ ಸರ್ಕಾರವು ಕೊರೊನಾ ವೈರಸ್ ಸೋಂಕಿತರಿಗೆ ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನವನ್ನು ಬಳಸಿತ್ತು. ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ನಂತರ ಮಹಾರಾಷ್ಟ್ರದಲ್ಲೂ ಸೋಂಕಿತರ ಚಿಕಿತ್ಸೆಗೆ ಇದೇ ವಿಧಾನವನ್ನು ಬಳಸಿಕೊಳ್ಳಲಾಗಿತ್ತು.

ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದರೇನು?:
ಕೊರೊನಾ ವೈರಸ್ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆದು ಗುಣಮುಖರಾದ ವ್ಯಕ್ತಿಗಳ ರಕ್ತದಲ್ಲಿನ ಕನ್ವೆಲೆಸೆಂಟ್ ಪ್ಲಾಸ್ಮಾವನ್ನು ಸಂಗ್ರಹಿಸಲಾಗುತ್ತದೆ. ಈ ಕನ್ವೆಲೆಸೆಂಟ್ ಪ್ಲಾಸ್ಮಾವನ್ನು ಗಂಭೀರ ಸ್ಥಿತಿಯಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರಿಗೆ ಇಂಜೆಕ್ಟ್ ಮಾಡಲಾಗುತ್ತದೆ. ಈ ಚಿಕಿತ್ಸಾ ವಿಧಾನವನ್ನು ಕನ್ವೆಲೆಸೆಂಟ್ ಪ್ಲಾಸ್ಮಾ ಥೆರಪಿ ಎಂದು ವೈದ್ಯಕೀಯ ಭಾಷೆಯಲ್ಲಿ ಹೇಳಲಾಗುತ್ತದೆ. ಈ ಪ್ಲಾಸ್ಮಾದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಟಬಲ್ಲ ಆಂಡಿಬಾಡಿ ಗುಣವಿದ್ದು, ಸೋಂಕಿತರ ದೇಹದಲ್ಲಿರುವ ಕೊರೊನಾವೈರಸ್ ಗಳ ಮೇಲೆ ದಾಳಿ ನಡೆಸುವುದಕ್ಕೆ ಸಹಕಾರಿ ಆಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಈ ಹಿನ್ನೆಲೆ ನವದೆಹಲಿ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೊನಾವೈರಸ್ ನಿಂದ ಗುಣಮುಖರಾದ ವ್ಯಕ್ತಿಗಳಿಂದ ಪ್ಲಾಸ್ಮಾ ಸಂಗ್ರಹಿಸುವುದಕ್ಕಾಗಿ ಬ್ಯಾಂಕ್ ತೆರಯಲಾಗಿದೆ. ಇದೀಗ ಒಡಿಶಾ ಸರ್ಕಾರ ಕೂಡಾ ಪ್ಲಾಸ್ಮಾ ಥೆರಿಪಿಗೆ ಹೆಚ್ಚಿನ ಒತ್ತು ನೀಡಿದ್ದು, ಅದಕ್ಕಾಗಿ ಬ್ಯಾಂಕ್ ವೊಂದನ್ನು ತೆರೆದಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications