ಎಲ್ಲಾ ಸಚಿವರ ರಾಜೀನಾಮೆ ಬೆನ್ನಲ್ಲೇ ಒಡಿಶಾಗೆ ಹೊಸ ಮಂತ್ರಿಮಂಡಲ
ಭುಬನೇಶ್ವರ್, ಜೂನ್ 5: ಸಿಎಂ ಆಜ್ಞೆಯ ಮೇರೆಗೆ ಸಂಪುಟದ ಎಲ್ಲಾ ಸಚಿವರೂ ರಾಜೀನಾಮೆ ನೀಡಿದ್ದ ಒಡಿಶಾದ ಬಿಜೆಡಿ ಸರಕಾರದಲ್ಲಿ ಹೊಸ ಮಂತ್ರಿಮಂಡಲ ಅಸ್ತಿತ್ವಕ್ಕೆ ಬಂದಿದೆ. ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರಕಾರದಲ್ಲಿ ನೂತನ ಸಚಿವ ಸಂಪುಟದಲ್ಲಿ ಹೊಸಬರಿಗೆ ಮಣೆ ಹಾಕಲಾಗಿದೆ. ಭಾನುವಾರ ಲೋಕ ಸೇವಾ ಭವನದಲ್ಲಿ ನಡೆದ ಸಮಾರಂಭದಲ್ಲಿ 21 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಕೆಲವರು ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನೂ ಕೆಲವರು ಮೊದಲ ಬಾರಿಗೆ ಮಂತ್ರಿಭಾಗ್ಯ ಪಡೆದಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ 21 ಸಚಿವರ ಪೈಕಿ 13 ಸಂಪುಟ ದರ್ಜೆಯವರಾದರೆ ಇನ್ನುಳಿದವರು ರಾಜ್ಯ ಖಾತೆ ಪಡೆದಿದ್ದಾರೆ.
ಯಾಕೆ ಈ ದಿಢೀರ್ ಬದಲಾವಣೆ?
ಒಡಿಶಾದಲ್ಲಿ ಇನ್ನೆರಡು ವರ್ಷದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಸತತವಾಗಿ ಐದು ಬಾರಿ ಸಿಎಂ ಆಗಿ ಸಾಧನೆ ಮಾಡಿರುವ ನವೀನ್ ಪಟ್ನಾಯಕ್ ಮುಂದಿನ ಚುನಾವಣೆಯಲ್ಲೂ ಗೆದ್ದು ದಾಖಲೆ ಬರೆಯುವ ತವಕದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಚುನಾವಣೆ ದೃಷ್ಟಿಯಿಂದ ಅವರು ತಮ್ಮ ಮಂತ್ರಿಮಂಡಲದಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೇ ಕಾರಣಕ್ಕೆ ಅವರು ಸಚಿವ ಸಂಪುಟ ಪುನಾರಚನೆಗೆ ಮುನ್ನ ತಮ್ಮ ಎಲ್ಲಾ ಸಚಿವರಿಗೂ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು. ಅದರಂತೆ ಎಲ್ಲಾ 20 ಮಂತ್ರಿಗಳು ನಿನ್ನೆ ಶನಿವಾರ ರಾಜೀನಾಮೆ ನೀಡಿದ್ದರು. ಇದೀಗ ಹೊಸದಾಗಿ ಮಂತ್ರಿಮಂಡಲ ರಚಿಸಿದ್ದಾರೆ.
ಮಂತ್ರಿ ಸ್ಥಾನ ಕಳೆದುಕೊಂಡವರಿಗೆ ಪಕ್ಷ ಸಂಘಟನೆಯಲ್ಲಿ ಜವಾಬ್ದಾರಿ ಕೊಡಲಾಗುತ್ತಿದೆ ಎಂದು ಒಡಿಶಾದ ಕೆಲ ಮಾಧ್ಯಮಗಳು ಹೇಳುತ್ತಿವೆ. ಈ ಬೆಳವಣಿಗೆಯು ಬಿಜು ಜನತಾ ದಳದಲ್ಲಿ ನವೀನ್ ಪಟ್ನಾಯಕ್ ಮಾತು ಬಿಟ್ಟರೆ ಬೇರೇನೂ ನಡೆಯಲ್ಲ ಎಂಬುದು ಇದು ಸ್ಪಷ್ಟವಾಗಿ ಸಾರುತ್ತಿದೆ.

ನವೀನ್ ಪಟ್ನಾಯಕ್ ಸಂಪುಟದ ನೂತನ ಸಚಿವರಿವರು:
ಸಂಪುಟ ದರ್ಜೆ:
ಜಗನ್ನಾಥ ಸರಕ
ನಿರಂಜನ್ ಪೂಜಾರಿ
ರಣೇಂದ್ರ ಪ್ರತಾಪ್ ಸ್ವೇನ್
ಪ್ರಮೀಳಾ ಮಲಿಕ್
ಉಷಾ ದೇವಿ
ಪ್ರಫುಲ್ಲಾ ಕುಮಾರ್ ಮಲ್ಲಿಕ್
ಪ್ರತಾಪ್ ಕೇಶರಿ ದೇಬ್
ಅತಾನು ಸಬ್ಯಸಾಚಿ ನಾಯಕ್
ಪ್ರದೀಪ್ ಕುಮಾರ್ ಅಮಾತ್ಯ
ನಬ ಕಿಶೋರ್ ದಾಸ್
ಅಶೋಕ್ ಚಂದ್ರ ಪಾಂಡ
ತುಕುನಿ ಸಾಹು
ರಾಜೇಂದ್ರ ಧೋಲಾಕಿಯಾ
ರಾಜ್ಯ ಖಾತೆ ಸಚಿವರು
ಸಮೀರ್ ರಂಜನ್ ದಾಸ್
ಅಶ್ವಿನಿ ಕುಮಾರ್ ಪಾತ್ರ
ಪ್ರೀತಿರಂಜನ್ ಘದಾಯ್
ಶ್ರೀಕಾಂತ್ ಸಾಹು
ತುಷಾರಕಾಂತಿ ಬೆಹೆರಾ
ರೋಹಿತ್ ಪೂಜಾರಿ
ರೀಟಾ ಸಾಹು
ಬಸಂತಿ ಹೇಮಬ್ರಮ್
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications