ಏರ್ ಸ್ಟ್ರೈಕ್ ನಂತರ ಪಾಕಿಸ್ತಾನ ಈಗಲೂ ಹೆಣ ಎಣಿಸುತ್ತಿದೆ: ಪ್ರಧಾನಿ ಮೋದಿ
ಕೊರಾಪುತ್(ಒಡಿಶಾ), ಮಾರ್ಚ್ 29: "ಪಾಕಿಸ್ತಾನ ಈಗಲೂ ಉಗ್ರರ ಶವವನ್ನು ಲೆಕ್ಕ ಹಾಕುತ್ತಿದೆ, ಆದರೂ ಭಾರತದ ಬಳಿ ಸಾಕ್ಷ್ಯ ಕೇಳುತ್ತದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಡಿಶಾದ ಕೊರಾಪುತ್ ನಲ್ಲಿ ಸಮಾವೇಶವೊಂದನ್ನುದ್ದೇಶಿ ಮೋದಿ ಮಾತನಾಡುತ್ತಿದ್ದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಏರ್ ಸ್ಟ್ರೈಕ್ ಆಗಿ ತಿಂಗಳಾಯಿತು. ಆದರೆ ಈಗಲೂ ಪಾಕಿಸ್ತಾನ ಉಗ್ರರ ಹೆಣಗಳನ್ನು ಲೆಕ್ಕಹಾಕುತ್ತಿದೆ ಎಂದು ಮೊದಿ ಲೇವಡಿ ಮಾಡಿದರು. ಭಾರತ ಉಗ್ರರ ನೆಲೆಗೇ ಹೋಗಿ ಅವರ ಮೇಲೆ ದಾಳಿ ನಡೆಸಿ, ಅವರನ್ನು ಕೊಂದರೆ, ನಮ್ಮವರು ಸಾಕ್ಷಿ ಕೇಳುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸೇರಿದಂತೆ ಇತರ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ಮಿಶನ್ ಶಕ್ತಿಯನ್ನೂ ಪ್ರಶ್ನಿಸುವ, ಟೀಕಿಸುವ ಮೂಲಕ ಕೆಲವರು ನಮ್ಮ ವಿಜ್ಞಾನಿಗಳ ಪರಿಶ್ರಮಕ್ಕೆ ಅಗೌರವ ಸೂಚಿಸಿದ್ದಾರೆ. ನಾವು ಬಾಹ್ಯಾಕಾಶ ಲೋಕದಲ್ಲಿ ಹೊಸ ಮೈಲಿಗಲ್ಲು ನಿರ್ಮಿಸಿದ್ದನ್ನು ಇಡೀ ವಿಶ್ವವೂ ಗುರುತಿಸಿದರೆ, ನಮ್ಮವರೇ ಟೀಕಿಸುತ್ತಿದ್ದಾರೆ ಎಂದರು.

ಹೆಣ ಲೆಕ್ಕ ಹಾಕುತ್ತಿರುವ ಪಾಕಿಸ್ತಾನ
ಏರ್ ಸ್ಟ್ರೈಕ್ ನಡೆದಿದ್ದೇ ಸುಳ್ಳು ಎಂದವರಿಗೆ ಗುದ್ದು ನೀಡಿದ ನರೇಂದ್ರ ಮೋದಿ, ಪಾಕಿಸ್ತಾನ ಈಗಲೂ ಉಗ್ರರ ಹೆಣ ಲೆಕ್ಕ ಹಾಕುತ್ತಿದೆ. ಹೀಗಿರುವಾಗ ಪಾಕಿಸ್ತಾನದಲ್ಲಿ ಮತ್ತು ಭಾರತದಲ್ಲೂ ಕೆಲವರು ಈ ದಾಳಿ ನಡೆದಿದ್ದೇ ಸುಳ್ಳು ಎಂದು ಸಾಕ್ಷಿ ಕೇಳುತ್ತಿದ್ದಾರೆ. ಸೈನಿಕರ ಸಾಧನೆಗೆ ಗೌರವ ನೀಡುವ ಸೌಜನ್ಯವಿಲ್ಲ ಎಂದರು. ಫೆಬ್ರವರಿ 14 ರಂದು ಜಮ್ಮು ಕಾಶ್ಮಿರದ ಪುಲ್ವಾಮಾದಲ್ಲಿ ಜೈಷ್ ಇ ಮೊಹಮ್ಮದ್ ಉಗ್ರ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ನಲವತ್ತಕ್ಕೂ ಹೆಚ್ಚು ಭಾರತೀಯ ಯೋಧರ ಹತ್ಯೆಗೈದಿದ್ದ. ಅದಕ್ಕೆ ಪ್ರತೀಕಾರ ಎಂಬಂತೆ ಫೆಬ್ರವರಿ 26 ರಂದು ಭಾರತ, ಪಾಕಿಸ್ತಾನದ ಉಗ್ರನೆಲೆಯ ಮೇಲೆ ಏರ್ ಸ್ಟ್ರೈಕ್ ನಡೆಸಿತ್ತು.

ವಿಜ್ಞಾನಿಗಳಿಗೂ ಅಗೌರವ
ಎರಡು ದಿನಗಳ ಹಿಂದೆ ನೀವೆಲ್ಲರೂ ಒಂದು ಮಹತ್ವದ ಸುದ್ದಿ ಕೇಳಿದ್ದೀರಿ, ಭಾರತ ಇದೀಗ ಬಾಹ್ಯಾಕಾಶ ಶಕ್ತಿಯಾಗಿ ಹೊರಹೊಮ್ಮಿದೆ. ಇಡೀ ಜಗತ್ತೂ ನಮ್ಮನ್ನು ಗುರುತಿಸುತ್ತಿರುವಾಗ, ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತಿರುವಾಗ, ಕೆಲವರು ಕೇವಲ ಸರ್ಕಾರವನ್ನು ಶಪಿಸುತ್ತ, ಪ್ರಶ್ನಿಸುತ್ತ, ಟೀಕಿಸುತ್ತ, ಅಂಥ ಸಾಧನೆಯನ್ನೂ ಅವಮಾನಿಸಿ ಮಾತನಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಉಪಗ್ರಹ ಪ್ರತಿರೋಧಕ ಅಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷೆಗೊಳಿಸುವ ಮೂಲಕ ಭಾರತ ಈ ಸಾಧನೆನಾಲ್ಕನೇ ದೇಶವಾಗಿ ಸಾಧನೆ ಬರೆದಿತ್ತು.

ಒಡಿಶಾದಲ್ಲಿ ವಿಧಾನಸಭೆಗೂ ಚುನಾವಣೆ
ಲೋಕಸಭಾ ಚುನಾವಣೆ ಏಪ್ರಿಲ್ 11 ರಂದು ಆರಂಭವಾಗಲಿದ್ದು, ಮೇ 19 ರಂದು ಮುಕ್ತಾಯವಾಗಲಿದೆ. ಒಟ್ಟು ಏಳು ಹಂತಗಳಲ್ಲಿ ನಡೆಯುವ ಚುನಾವಣೆಯ ಫಲಿತಾಂಶ ಮೇ 23 ರಂದು ಹೊರಬೀಳಲಿದೆ. ಓಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಎರಡೂ ಚುನಾವಣೆಗಳೂ ಏಪ್ರಿಲ್ 11 ರಂದೇ ನಡೆಯಲಿದೆ.

ಬಿಜೆಪಿ ಗೆದ್ದಿದ್ದೆಷ್ಟು?
ಒಡಿಶಾದಲ್ಲಿ ಒಟ್ಟು 21 ಲೋಕಸಭಾ ಕ್ಷೇತ್ರಗಳಿದ್ಚದು 2014 ರಲ್ಲಿ ಬಿಜೆಪಿ ಕೇವಲ 1 ಕ್ಷೇತ್ರದಲ್ಲಷ್ಟೇ ಗೆದ್ದಿತ್ತು. ಒಟ್ಟು 147 ವಿಧಾನಸಭಾ ಕ್ಷೇತ್ರಗಳನ್ನು ಒಡಿಶಾ ಹೊಂದಿದ್ದು, ಇದರಲ್ಲಿ ಕೇವಲ ಹತ್ತು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications