ಎಂಜಿನಿಯರ್ ಕೈಲಿ ಬಸ್ಕಿ ಹೊಡೆಸಿದ್ದ ಶಾಸಕನ ಬಂಧನ
ಭುವನೇಶ್ವರ್, ಜೂನ್ 24: ನಿರ್ಮಿಸಿದ ರಸ್ತೆ ಗುಣಮಟ್ಟದ್ದಾಗಿಲ್ಲವೆಂದು ಆರೋಪಿಸಿ ರಸ್ತೆ ನಿರ್ಮಿಸಿದ ಎಂಜಿನಿಯರ್ ಅನ್ನು ಸಾರ್ವಜನಿಕವಾಗಿ ನಿಂದಿನ ಜನರ ಎದುರು ಬಸ್ಕಿ ಹೊಡೆಯುವಂತೆ ಮಾಡಿದ ಒಡಿಸ್ಸಾದ ಆಡಳಿತ ಪಕ್ಷದ ಶಾಸಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜು ಜನತಾ ದಳ (ಬಿಜೆಡಿ) ಪಕ್ಷದ ಪಾಟ್ನಾಗರ್ ಕ್ಷೇತ್ರದ ಶಾಸಕ ಸರೋಜ್ ಮೆಹರ್ ಅವರು ಮೂರು ವಾರದ ಹಿಂದೆ ಎಂಜಿನಿಯರ್ ಜಯಂತ್ ಸಬಾರ್ ಅವರನ್ನು ಸಾರ್ವಜನಿಕವಾಗಿ ಬಸ್ಕಿ ಹೊಡೆಯುವಂತೆ ಮಾಡಿದ್ದರು. ಹಾಗಾಗಿ ಇಂದು ಬೆಳಿಗ್ಗೆ ಅವರನ್ನು ಬಂಧಿಸಲಾಗಿದೆ.
ಎಂಜಿನಿಯರ್ ಜಯಂತ್ ಸಬಾರ್ ಅವರು ಉಸ್ತುವಾರಿ ವಹಿಸಿಕೊಂಡು ನಿರ್ಮಿಸಿದ್ದ ರಸ್ತೆ ಗುಣಮಟ್ಟದಿಂದ ಕೂಡಿಲ್ಲವೆಂದು ಜನರು ಆರೋಪಿಸಿದ್ದಾರೆ, ಹಾಗಾಗಿ ಅವರ ಮುಂದೆ ಬಸ್ಕಿ ಹೊಡೆಯಬೇಕೆಂದು ಒತ್ತಾಯ ಮಾಡಿ ಸರೋಜ್ ಅವರಿಂದ ಸಾರ್ವಜನಿಕವಾಗಿ ಶಾಸಕ ಸರೋಜ್ ಮೆಹರ್ ಅವರು ಎಂಜಿನಿಯರ್ ಅವರಿಂದ ಬಸ್ಕಿ ಹೊಡೆಸಿದ್ದರು.

ಶಾಸಕ ಸರೋಜ್ ಅವರು ಬಸ್ಕಿ ಹೊಡೆಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಬಲವಂತವಾಗಿ ಎಂಜಿನಿಯರ್ ಅನ್ನು ಬಸ್ಕಿ ಹೊಡೆಸಿದ್ದು ಕಾಣುತ್ತದೆ, ಅಷ್ಟೆ ಅಲ್ಲದೆ, ನಾನು ನಿನ್ನ ಶಾಸಕ ನಾನು ಆದೇಶ ನೀಡುತ್ತಿದ್ದೇನೆ ಬಸ್ಕಿ ಹೊಡಿ ಇಲ್ಲವಾದರೆ ಜನರಿಂದ ಹೊಡೆಸುತ್ತೇನೆ ಎಂದು ಶಾಸಕ ಸರೋಜ್ ಬೆದರಿಕೆ ಹಾಕುತ್ತಿರುವುದು ಸಹ ವಿಡಿಯೋದಲ್ಲಿ ದಾಖಲಾಗಿದೆ.
ಘಟನೆ ನಡೆದಾಗ ಸ್ಥಳದಲ್ಲಿ ಪೊಲೀಸರು ಇದ್ದರು, ಅವರೇ ಎಂಜಿನಿಯರ್ ಅವರನ್ನು ರಕ್ಷಿಸಿದ್ದರು. ಆ ನಂತರ ಘಟನೆಯ ವಿಡಿಯೋ ವೈರಲ್ ಆಗಿ, ಶಾಸಕರ ದರ್ಪದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.
ಎಂಜಿನಿಯರ್ ಜಯಂತ್ ಅವರ ಪತ್ನಿ ಅವರು ಶಾಸಕ ಸರೋಜ್ ಮೆಹರ್ ಅವರ ವಿರುದ್ಧ ಠಾಣೆಗೆ ದೂರು ನೀಡಿದ್ದು, ಇಂದು ಬೆಳಿಗ್ಗೆ ಶಾಸಕನನ್ನು ಬಂಧಿಸಲಾಗಿದೆ. ಪರಿಶಿಷ್ಟಜಾತಿ/ ವರ್ಗ ದೌರ್ಜನ್ಯ ತಡೆ ಕಾಯ್ದೆಯ ಅಡಿ ದೂರು ದಾಖಲಿಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications