ಬಿಜೆಡಿ ಜೊತೆ ಮೈತ್ರಿ ಸೂಚನೆ ನೀಡಿದ ಮೋದಿ ಮಾತು: ಕಾಂಗ್ರೆಸ್ ಆರೋಪ
ಭುವನೇಶ್ವರ, ಡಿಸೆಂಬರ್ 26: "ಪ್ರಧಾನಿ ನರೇಂದ್ರ ಓದಿಯವರು ಒಡಿಶಾದಲ್ಲಿ ಮಾಡಿದ ಭಾಷಣ ಬಿಜು ಜನತಾ ದಳ(ಬಿಜೆಡಿ) ಮತ್ತು ಬಿಜೆಪಿ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗೆ ಸೂಚನೆ" ಎಂದು ಕಾಂಗ್ರೆಸ್ ಆರೋಪಿಸಿದೆ.
ಸೋಮವಾರ ಒಡಿಶಾದದಲ್ಲಿ ಭಾಷಣ ಮಾಡುತ್ತಿದ್ದ ಮೋದಿ, ಒಡಿಶಾ ಸರ್ಕಾರವನ್ನು ಟೀಕಿಸಿದರಾದರೂ ಎಲ್ಲೂ ಬಿಜೆಡಿ ಬಗ್ಗೆಯಾಗಲೀ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬಗ್ಗೆಯಾಗಲೀ ಸೊಲ್ಲೆತ್ತಲಿಲ್ಲ. ಪಕ್ಷದ ಹೆಸರನ್ನಾಗಲೀ, ಮುಖ್ಯಮಂತ್ರಿಯ ಹೆಸರನ್ನಾಗಲೀ ಉಲ್ಲೇಖಿಸದೆ ಪರೋಕ್ಷವಾಗಿ ಮಾತಿನ ಪ್ರಹಾರ ನಡೆಸಿ ಜಾಣ ನಡೆ ಇಟ್ಟರು. ಮೋದಿಯವರ ಈ ನಡೆ ಬಿಜೆಪಿ ಮತ್ತು ಬಿಜೆಡಿ ನಡುವೆ ಏರ್ಪಡಬಹುದಾದ ಸಂಭಾವ್ಯ ಮೈತ್ರಿಯ ಸೂಚನೆ ನೀಡಿತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿರಂಜನ್ ಪಟ್ನಾಯಕ್, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಬ್ಬರೂ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಳ್ಳು ಆಶ್ವಾಸನೆ ನೀಡುತ್ತಿರುವುದು ಸರಿಯಲ್ಲ ಎಂದರು.

ಆದರೆ ಬಿಜೆಪಿ-ಬಿಜೆಡಿ ಮೈತ್ರಿ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಗೆ ಪ್ರತ್ಯುತ್ತರ ನೀಡಿದ ಬಿಜೆಡಿ, ನಾವು ಕಾಮಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ಸಂಯುಕ್ತ ಕೂಟ ನಿರ್ಮಿಸುವ ಉದ್ದೇಶ ಹೊಂದಿದ್ದೇವೆ. ಆದ್ದರಿಂದ ಕಾಂಗ್ರೆಸ್ ನ ಆರೋಪ ಆಧಾರ ರಹಿತ ಮತ್ತು ಹುರುಳಿಲ್ಲದ್ದು ಎಂದಿದೆ.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications