ಕ್ವಾರೆಂಟೈನ್ ನಲ್ಲಿದ್ದ ಕೊರೊನಾವೈರಸ್ ಸೋಂಕಿತರಿಗೆ 2,000 ರೂಪಾಯಿ!
ಭುವನೇಶ್ವರ್, ಜೂನ್.29: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ನಡುವೆ ಮಹಾಮಾರಿ ವಿರುದ್ಧ ಹೋರಾಟಕ್ಕೆ ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರವು ಮಹತ್ವದ ಹೆಜ್ಜೆಯನ್ನು ಇರಿಸಿದೆ.
Recommended Video
ಕೊರೊನಾವೈರಸ್ ಸೋಂಕಿತರು ಕೂಡಾ ಕ್ವಾರೆಂಟೈನ್ ನಲ್ಲಿ ಇರುವುದಕ್ಕೆ ಹಿಂದೂ-ಮುಂದೂ ನೋಡುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತರು ಸಾಂಸ್ಥಿಕ ಕ್ವಾರೆಂಟೈನ್ ಅವಧಿ ಪೂರ್ಣಗೊಳಿಸಿದ ಪ್ರತಿಯೊಬ್ಬರಿಗೂ ಸರ್ಕಾರದ ವತಿಯಿಂದ 2,000 ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ.
ಒಡಿಶಾದಲ್ಲಿ ಕಳೆದ ಜೂನ್.27ರಂದು 2,55,809 ಜನರ ರಕ್ತ ಹಾಗೂ ಗಂಟಲು ಮಾದರಿಯನ್ನು ಸಂಗ್ರಹಿಸಿದ್ದು ಕೊರೊನಾವೈರಸ್ ಸೋಂಕು ತಪಾಸಣೆಯನ್ನು ನಡೆಸಲಾಗಿದೆ. ರಾಜ್ಯದಲ್ಲಿ ಒಟ್ಟು 6614 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿದ್ದು, ಈ ಪೈಕಿ 4743 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಒಡಿಶಾದಲ್ಲಿ 1843 ಕೊರೊನಾವೈರಸ್ ಸೋಂಕಿತ ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಕ್ವಾರೆಂಟೈನ್ ಅವಧಿ ಪೂರ್ಣಗೊಳಿಸಿದರೆ 2,000 ರೂಪಾಯಿ
ಒಡಿಶಾದಲ್ಲಿ ಕೊರೊನಾವೈರಸ್ ಸೋಂಕಿತರು ಮತ್ತು ಸೋಂಕಿತ ಲಕ್ಷಣಗಳು ಕಂಡು ಬಂದಿರುವವರನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗುತ್ತದೆ. ಹೀಗೆ ಸಾಂಸ್ಥಿಕ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿದ ಪ್ರತಿಯೊಬ್ಬರಿಗೂ ತಲಾ 2,000 ರೂಪಾಯಿ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಹಾಯನಿಧಿ ಅಡಿಯಲ್ಲಿ ಈಗಾಗಲೇ 58,48,38,000 ರೂಪಾಯಿ ಹಣವನ್ನು ನೀಡಲಾಗಿದೆ.

ಪ್ರತಿನಿತ್ಯ ಸಾವಿರಾರು ಜನರು ಒಡಿಶಾಗೆ ವಾಪಸ್
ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಪ್ರತಿನಿತ್ಯ ಸಾವಿರಾರು ಜನರು ಒಡಿಶಾಗೆ ವಾಪಸ್ ಆಗುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ 2048 ಮಂದಿ ಸ್ವರಾಜ್ಯಕ್ಕೆ ಮರಳಿದ್ದು, ಇದುವರೆಗೂ ಹೊರರಾಜ್ಯ ಹಾಗೂ ಹೊರದೇಶಗಳಿಗೆ ತೆರಳಿದ್ದ 5,81,694 ಜನರು ಒಡಿಶಾಕ್ಕೆ ಮರಳಿದ್ದಾರೆ ಎಂದು ಅಂಕಿ-ಅಂಶಗಳನ್ನು ನೀಡಲಾಗಿದೆ.

3 ದಿನ ಪುರಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
ಇತ್ತೀಚಿಗಷ್ಟೇ ಪುರಿ ಜಗನ್ನಾಥ ರಥಯಾತ್ರೆಯನ್ನು ಸಂಕ್ಷಿಪ್ತ ರೀತಿಯಲ್ಲಿ ನೆರವೇರಿಸುವುದಕ್ಕೆ ಕೋರ್ಟ್ ಅನುಮತಿ ನೀಡಿದ್ದು ಆಗಿದೆ. ರಥಯಾತ್ರೆ ನಡೆಸಿದ್ದು ಆಗಿದೆ. ಇದರ ಬೆನ್ನಲ್ಲೇ ಬಹುದ್ ಜಾತ್ರೆ ನಡೆಯಲಿರುವ ಹಿನ್ನೆಲೆ ಜೂನ್.30ರ ರಾತ್ರಿ 10 ಗಂಟೆಯಿಂದ ಜುಲೈ.2ರ ರಾತ್ರಿ 10 ಗಂಟೆವರೆಗೂ ನಿಷೇಧಾಜ್ಞೆಯನ್ನು ಘೋಷಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಸರಕು-ಸೇವಾ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನ ಮತ್ತು ಸಾರ್ವಜನಿಕ ಸಂಚಾರಕ್ಕೆ ಅವಕಾಶ ಇರಿವುದಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.

ಕೊರೊನಾ ವಾರಿಯರ್ಸ್ ಪರಿಶ್ರಮವನ್ನು ಹೊಗಳಿದ ಸಿಎಂ
ಒಡಿಶಾದಲ್ಲಿ ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಪ್ರಾಮಾಣಿಕವಾಗಿ ಕರ್ತವ್ಯದ ಬದ್ಧತೆಯನ್ನು ತೋರುತ್ತಿರುವ ಕೊರೊನಾವಾರಿಯರ್ಸ್ ಅವರ ತ್ಯಾಗಕ್ಕೆ ಬೆಲೆ ಕಟ್ಟುವುದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಒಗ್ಗಟ್ಟಿನ ಹೋರಾಟದಿಂದ ಮಹಾಮಾರಿಯನ್ನು ಹೋಗಲಾಡಿಸಲು ಸಾಧ್ಯ ಎಂದು ತಿಳಿಸಿದ್ದಾರೆ. ಪ್ರತಿಯೊಬ್ಬರು ಸ್ವಯಂಶಿಸ್ತು ಹಾಗೂ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಕೊರೊನಾವೈರಸ್ ನಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications