ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಐವರ ಬಂಧನ
ಭುವನೇಶ್ವರ, ಜುಲೈ, 19: ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ಅತ್ಯಾಚಾರ ಯತ್ನದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲ್ಛಾವಣಿಯಿಂದ ಜಿಗಿದು ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಅತ್ಯಾಚಾರ ನಡೆಸಲು ಯತ್ನಿಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಒಡಿಶಾದ ಕಿಯೋಂಜಾರ್ ಜಿಲ್ಲೆಯ ನಿವಾಸಿಯಾಗಿರುವ ವಿದ್ಯಾರ್ಥಿನಿ ತನ್ನ ಸಹೋದರನೊಂದಿಗೆ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಕಳಿಂಗನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರೀ ಮಳೆಯಾಗುತ್ತಿದ್ದರಿಂದ ಶಾಲೆಯಲ್ಲಿ ಆಶ್ರಯ ಪಡೆಯುವಂತೆ ಬಾಲಕಿ ಮತ್ತು ಆಕೆಯ ಸಹೋದರನಿಗೆ ಸಲಹೆ ನೀಡಿದ ಐವರು ಆರೋಪಿಗಳು, ಬಳಿಕ ಅವರು ಆಕೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ನಿಂದ ಇಳಿದಾಗ ಭಾರೀ ಮಳೆಯಾಗುತ್ತಿದ್ದ ಕಾರಣ ಪುರುಷರ ಗುಂಪೊಂದು ಶಾಲಾ ಕಟ್ಟಡದಲ್ಲಿ ಉಳಿದುಕೊಳ್ಳಿ. ಮಳೆ ನಿಂತಾಗ ನಿಮ್ಮ ಊರಿಗೆ ಹಿಂತಿರುಗಿ ಎಂದು ಸೂಚಿಸಿದ್ದರು. ಅವರ ಸಲಯೆಯಂತೆ ನಾವು ಅಲ್ಲೇ ಉಳಿದುಕೊಳ್ಳಲು ಒಪ್ಪಿಕೊಂಡಿದ್ದೆವು. ರಾತ್ರಿಯಾಗುತ್ತಿದ್ದಂತೆ ಕಿರಾತಕರ ಗುಂಪು ನನ್ನ ಸಹೋದರನನ್ನು ಥಳಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾರೆ.
ಬಾಲಕಿಯ ಸಹೋದರನ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಲೆಗೆ ಕೆಡವಿ ಯಶಸ್ವಿಯಾಗಿದ್ದಾರೆ. ಕಿರಾತಕರು ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಬಾಲಕಿ ಶಾಲೆಯ ಕಟ್ಟಡದ ಮೇಲ್ಛಾವಣಿಯ ಮೇಲಿನಿಂದ ಜಿಗಿದಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅತ್ಯಾಚಾರಕ್ಕೆ ಯತ್ನಿಸಿದ ಸಮಯದಲ್ಲಿ ಬಾಲಕಿಯ ಸಹೋದರ ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತ್ರಸ್ತೆಯ ಸಹೋದರನ ಹೇಳಿಕೆ ಆಧರಿಸಿ ಎಲ್ಲ ಐವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಕಳಿಂಗನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪಿಬಿ ರೌತ್ ತಿಳಿಸಿದ್ದಾರೆ.

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಒಡಿಶಾದಲ್ಲಿ ಅಷ್ಟೇ ಅಲ್ಲ ಬೇರೆ ರಾಜ್ಯಗಳಲ್ಲೂ ನಡೆಯುತ್ತಲೇ ಇವೆ. ಪೊಲೀಸರು ಆರೋಪಿಗಳನ್ನು ಮಟ್ಟ ಹಾಕುತ್ತಲೇ ಇದ್ದಾರೆ. ಆದರೆ ಅತ್ಯಾಚಾರಿಗಳ ಸಂಖ್ಯೆ ಮಾತ್ರ ಕಡಿಮೆ ಆದ ರೀತಿ ಕಾಣುತ್ತಿಲ್ಲ. ಪೋಷಕರ ಗಮನವೆಲ್ಲ ತಮ್ಮ ಮಕ್ಕಳ ಕಡೆ ಇರುತ್ತದೆ.
ಶಾಲೆಗಳ ಆವರಣದಲ್ಲಿ ಹೀಗೆ ಅತ್ಯಾಚಾರಗಳು ನಡೆದರೆ ಎಂತಹ ಪೋಷಕರೂ ಕೂಡ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಾರೆ. ಅದಕ್ಕಾಗಿ ಬರೀ ಆರೋಪಿಗಳನ್ನು ಬಂಧಿಸಿದರೆ ಸಾಲದು ಅವರಿಗೆ ಸೂಕ್ತ ರೀತಿಯಲ್ಲಿ ಶಿಕ್ಷೆಯಾಗಬೇಕು. ಹಾಗಾದಾಗ ಮಾತ್ರ ಅನಾಹುತಗಳನ್ನು ತಪ್ಪಿಸಲು ಸಾಧ್ಯ. ಈಗಾಗಲೇ ಒಡಿಶಾದಲ್ಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ












Click it and Unblock the Notifications