ಒಡಿಶಾ: ಭಾರಿ ಮಳೆ, ಪ್ರವಾಹಕ್ಕೆ ಮತ್ತೆ ಐದು ಮಂದಿ ಬಲಿ
ಭುವನೇಶ್ವರ, ಆಗಸ್ಟ್ 29: ಒಡಿಶಾದ ಐದು ಜಿಲ್ಲೆಗಳಲ್ಲಿ ಮಳೆ ಮತ್ತು ಪ್ರವಾಹದ ಅಬ್ಬರದಿಂದ ಜನಜೀವನ ತತ್ತರಿಸಿದೆ. ಮನೆ ಕುಸಿತ ಮತ್ತು ನೀರಿನಲ್ಲಿ ಮುಳುಗಿ ಹೋದ ಪ್ರತ್ಯೇಕ ಘಟನೆಗಳಲ್ಲಿ ಐದು ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಕುಮಾರ್ ಜೆನಾ ಶುಕ್ರವಾರ ತಿಳಿಸಿದ್ದಾರೆ.
ಬಾರ್ಗಾಡ್, ನೌಪಡ, ಜಜ್ಪುರ್, ಬಾಳೇಶ್ವರ್ ಮತ್ತು ಭದ್ರಾಕ್ನಲ್ಲಿ ಮನೆಗಳು ಕುಸಿದಿವೆ. ಕೆಲವರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇದರಿಂದ ಇನ್ನೂ ಐದು ಸಾವುಗಳು ವರದಿಯಾಗಿವೆ. ಇದಕ್ಕೂ ಮುನ್ನ ಮಯೂರ್ಭಂಜ್, ಕೊಯಿಂಝರ್ ಮತ್ತು ಸುಂದರ್ಗಡದಲ್ಲಿ ಏಳು ಮಂದಿ ಮಳೆಯಿಂದಾಗಿ ಜೀವ ಕಳೆದುಕೊಂಡಿದ್ದರು. ಇಬ್ಬರು ನಾಪತ್ತೆಯಾಗಿದ್ದರು ಎಂದು ಅವರು ವಿವರಿಸಿದ್ದಾರೆ.

ಪ್ರವಾಹ ಪರಿಸ್ಥಿತಿಯ ನಿರ್ವಹಣೆಗೆ ಒಡಿಶಾ 11 ಜಿಲ್ಲೆಗಳಲ್ಲಿ ಸರ್ಕಾರ ರಾಷ್ಟ್ರೀಯ ವಿಪತ್ತು ಸ್ಪಂದನಾ ದಳ, ಒಡಿಶಾ ವಿಪತ್ತು ತ್ವರಿತ ಕ್ರಿಯಾ ತಂಡ ಮತ್ತು ಅಗ್ನಿಶಾಮಕ ದಳಗಳ 39 ತಂಡಗಳನ್ನು ನಿಯೋಜನೆ ಮಾಡಿದೆ. ಶನಿವಾರ ಐದು ಹೆಚ್ಚುವರಿ ಎನ್ಡಿಆರ್ಎಫ್ ತಂಡಗಳು ಸೇರಿಕೊಳ್ಳಲಿವೆ.
ಒಡಿಶಾದ ವಿವಿಧ ಭಾಗಗಳಲ್ಲಿ ಕೆಲವು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದೆ. ಇದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಅನೇಕ ಹಳ್ಳಿಗಳು ಜಲಾವೃತವಾಗಿವೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications