ಹೌರಾ- ಜಗದಾಳ್ ಪುರ್ ಸಮಲೇಶ್ವರಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಮೂವರು ಸಾವು
ಭುವನೇಶ್ವರ್ (ಒಡಿಶಾ), ಜೂನ್ 25: ಟವರ್ ಕಾರ್ ಗೆ ಡಿಕ್ಕಿ ಹೊಡೆದ ನಂತರ ಹೌರಾ- ಜಗದಾಳ್ ಪುರ್ ಸಮಲೇಶ್ವರಿ ಎಕ್ಸ್ ಪ್ರೆಸ್ ರೈಲು ಎಂಜಿನ್, ಎರಡನೆ ದರ್ಜೆಯ ಬೋಗಿ, ಲಗೇಜ್ ವ್ಯಾನ್ ಹಳಿ ತಪ್ಪಿ, ಮೂವರು ರೈಲ್ವೆ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ರಾಯಗಢ ಜಿಲ್ಲೆಯಲ್ಲಿ ಮಂಗಳವಾರ ಟವರ್ ಕಾರ್ ದುರಸ್ತಿ ನಡೆಯುತ್ತಿತ್ತು.
ಟೆಕ್ನಿಷಿಯನ್ ಸುರೇಶ್, ಸೀನಿಯರ್ ಸೆಕ್ಷನ್ ಎಂಜಿನಿಯರ್ ಸಾಗರ್, ಎಲೆಕ್ಟ್ರಿಕಲ್ ಟೆಕ್ನಿಷಿಯನ್ ಗೌರಿ ನಾಯ್ಡು ಮೃತರು. ಮೂಲಗಳ ಪ್ರಕಾರ, ಟವರ್ ಕಾರ್ ಗೆ ಡಿಕ್ಕಿಯಾದ ನಂತರ ರೈಲಿನ ಎಂಜಿನ್ ಗೂ ಬೆಂಕಿ ಹೊತ್ತಿಕೊಂಡಿದೆ. ಆ ನಂತರ ಅದನ್ನು ಬೇರ್ಪಡಿಸಲಾಗಿದೆ. ಈ ಘಟನೆಯು ಸಿಂಗಾಪುರ್ ರಸ್ತೆ ಹಾಗೂ ಕ್ಯೂತುಗುಡದ ಮಧ್ಯೆ ಸಂಜೆ ನಾಲ್ಕೂ ಮೂವತ್ತರ ಹೊತ್ತಿಗೆ ಸಂಭವಿಸಿದೆ.

ರೈಲಿನಲ್ಲಿ ಇದ್ದ ನೂರಾ ನಲವತ್ತೆಂಟು ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ಅವರನ್ನು ರಾಯಗಡಕ್ಕೆ ಕರೆದೊಯ್ಯಲಾಗಿದೆ. ಬೇರ್ಪಡಿಸಿದ ಬೋಗಿಗಳನ್ನು ಮತ್ತೊಂದು ಎಂಜಿನ್ ಸಹಾಯದಿಂದ ರಾಯಗಡಕ್ಕೆ ಮತ್ತೆ ತರಲಾಗಿದೆ. ಜಗದಾಳ್ ಪುರ್ ಹಾಗೂ ಕೋರಾಪುಟ್ ಗೆ ಎರಡು ಬಸ್ ಹಾಗೂ ಪ್ರಯಾಣಿಕರಿಗೆ ಊಟದ ವ್ಯವಸ್ಥೆ ಮಾಡಿದ್ದಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ ಜೆ.ಪಿ.ಮಿಶ್ರಾ ಹೇಳಿದ್ದಾರೆ.

ಕರ್ತವ್ಯದಲ್ಲಿ ಲೋಪ ಎಸಗಿದ ಆರೋಪದಲ್ಲಿ ಕ್ಯೂತುಗುಡ ಮತ್ತು ಸಿಂಗಪುರ್ ರಸ್ತೆಯ ಸ್ಟೇಷನ್ ಮಾಸ್ಟರ್ ಗಳನ್ನು ಅಮಾನತು ಮಾಡಲಾಗಿದೆ ಹಾಗೂ ತನಿಖೆಗೆ ಆದೇಶ ನೀಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications