ಜಗನ್ನಾಥ ರಥ ಯಾತ್ರೆ 2020: ದೇವಸ್ನಾನ ಪೂರ್ಣಿಮೆಯ ವಿಶೇಷತೆಯೇನು?
ಭುವನೇಶ್ವರ, ಜೂನ್ 5: ಭಕ್ತರು ಕಾತುರದಿಂದ ಕಾಯುತ್ತಿರುವ ಜಗನ್ನಾಥ ದೇವರ ಸ್ನಾನ ಯಾತ್ರೆ ಒಡಿಶಾದಲ್ಲಿ ಇಂದಿನಿಂದ ಆರಂಭಗೊಂಡಿದೆ.
Recommended Video
ಸ್ನಾನ ಯಾತ್ರೆಯು ಪೂರ್ಣ ಹುಣ್ಣಿಮೆಯ ದಿನ ಪ್ರತಿವರ್ಷವೂ ನಡೆಯುತ್ತದೆ. ಈ ವರ್ಷ ದೇವಸ್ತಾನ ಪೂರ್ಣಮಾ ಅಥವಾ ಸ್ನಾನಯಾತ್ರೆ ಜೂನ್ 5 ರಂದು ಆಚರಿಸಲಾಗುತ್ತಿದೆ.
ಕೊರೊನಾ ವೈರಸ್ ಭಯದಿಂದಾಗಿ ಭಕ್ತರಿಗೆ ಜಗನ್ನಾಥ ದೇವಸ್ಥಾನದ ಹತ್ತಿರ ಹೋಗಲು ಅನುಮತಿ ನೀಡುತ್ತಿಲ್ಲ. ಕೇವಲ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ಸೇರಿ ಈ ರಥ ಯಾತ್ರೆ ಮುನ್ನಡೆಸುತ್ತಿದ್ದಾರೆ. ಟಿವಿಯಲ್ಲಿ ರಥಯಾತ್ರೆ ಲೈವ್ ತೋರಿಸಲಾಗುತ್ತಿದೆ.
ದೇವಸ್ನಾನ ಪೂರ್ಣಿಮಾ ಅಥವಾ ಸ್ನಾನ ಯಾತ್ರೆಯನ್ನು ಪುರಿಯಲ್ಲಿ ನಡೆಯುವ ಜಗನ್ನಾಥ ಯಾತ್ರೆಗೂ ಮುನ್ನ ನಡೆಸಲಾಗುತ್ತದೆ. ಭಕ್ತರು ನದಿಯನ್ನು ಮಿಂದೇಳುತ್ತಾರೆ.

ಸ್ನಾನಯಾತ್ರೆಗೂ ಮುನ್ನ ನಡೆಯುವುದೇನು?
ಸ್ನಾನಯಾತ್ರೆ ಆರಂಭಕ್ಕೂ ಮುನ್ನದಿನ ಜಗನ್ನಾಥ, ಬಾಲಭದ್ರ, ಸುಭದ್ರಾದೇವಿ , ಸುದರ್ಶನ ಚಿತ್ರಗಳನ್ನು ದೇವಸ್ಥಾನದಿಂದ ತೆಗೆದುಕೊಂಡು ಬರಲಾಗುತ್ತದೆ. ಅಲ್ಲಿಂದ ನದಿಯವರೆಗೆ 'ಪಹಂಡಿ' ಮೆರವಣಿಗೆ ನಡೆಯಲಿದೆ. ಪ್ರತಿಯೊಬ್ಬರು ದೇವಸ್ಥಾನದಲ್ಲಿಯೇಏ ಇರಬೇಕು ಕೆಲವರಿಗೆ ಮಾತ್ರ ನೀಡಿನಲ್ಲಿ ಇಳಿಯಲು ಅವಕಾಶ ಮಾಡಿಕೊಡಲಾಗುತ್ತದೆ.

ಸ್ನಾನ ಯಾತ್ರೆ
ವರ್ಷಕ್ಕೊಮ್ಮ 'ಸುನಾ ಕುವಾ' ಬಂಗಾರದ ಬಾವಿಯಲ್ಲಿ ಸ್ನಾನ ಮಾಡಲಾಗುತ್ತಿದೆ. ದೇವಸ್ಥಾನದ ಅರ್ಚಕರು ನೀರಿಗೆ ಇಳಿಯುವಾಗ ಬಾಯಿ ಹಾಗೂ ಮುಖಕ್ಕೆ ಬಟ್ಟೆಯನ್ನು ಕಟ್ಟಿಕೊಳ್ಳುತ್ತಾರೆ. ಅವರ ಉಸಿರು ನೀರಿಗೆ ತಾಗಿ ನೀರು ಮಲಿನವಾಗಬಾರದು ಎಂದು. ಹಾಗೆಯೇ ಗಂಧ, ಚಂದನ ಕೆಲವು ಹೂವುಗಳಿಂದ ನೀರನ್ನು ಶುಚಿಗೊಳಿಸುತ್ತಾರೆ. ಬಳಿಕ ದೇವ ಜಗನ್ನಾಥ, ದೇವಿ ಸುಭದ್ರಾ ಹಾಗೂ ಬಾಲಭದ್ರ ದೇವರಿಗೆ ಗಣಪತಿ ರೀತಿ ಅಲಂಕಾರ ಮಾಡಲಾಗುತ್ತದೆ.

ಸ್ನಾನ ಯಾತ್ರೆ ಮುಗಿದ ಮೇಲೆ 14 ದಿನ ದೇವಸ್ಥಾನ ಬಂದ್
ಸ್ನಾನಯಾತ್ರೆ ಮುಗಿದ ಬಳಿಕ 10 ದಿನ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ದಿನನಿತ್ಯದ ಪೂಜೆಯು ಕೂಡ ನಡೆಯುವುದಿಲ್ಲ. ಭಕ್ತರು ವಿಶೇಷ ದರ್ಶನ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಭಕ್ತರು ಕೇವಲ ಫಲಾಹಾರವನ್ನು ಮಾತ್ರ ಸ್ವೀಕರಿಸಬಹುದಾಗಿದೆ.

ಅಲರ್ನಾತ್ ದೇವ
ಸ್ನಾನ ಯಾತ್ರೆ ಮುಗಿದ ಬಳಿಕ ಅಲರ್ನಾತ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಬೇಕು ಬ್ರಹ್ಮಗಿರಿಯಲ್ಲಿದೆ ಪುರಿಯಿಂದ 25 ಕಿ.ಮೀ ದೂರದಲ್ಲಿದೆ. ಜಗನ್ನಾಥ ದೇವರು ಸ್ನಾನಯಾತ್ರೆ ಮುಗಿಸಿ ಅಲರ್ನಾತ್ಗೆ ಬರುತ್ತಾರೆ ಎನ್ನುವ ನಂಬಿಕೆ ಇನ್ನೂ ಉಳಿದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications