Get Updates
Get notified of breaking news, exclusive insights, and must-see stories!

ಒಡಿಶಾದಲ್ಲಿ ಚುನಾವಣಾಧಿಕಾರಿಯನ್ನು ಗುಂಡಿಟ್ಟು ಕೊಂದ ಮಾವೋವಾದಿಗಳು

ಭುವನೇಶ್ವರ್ (ಒಡಿಶಾ), ಏಪ್ರಿಲ್ 17: ಚುನಾವಣೆ ಅಧಿಕಾರಿಯೊಬ್ಬರನ್ನು ಮಾವೋವಾದಿಗಳು ಗುಂಡಿಟ್ಟು ಕೊಂದ ಘಟನೆ ಒಡಿಶಾದ ಕಂಧಮಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬುಧವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೃತಪಟ್ಟ ಅಧಿಕಾರಿಯನ್ನು ಸಂಜುಕ್ತ ದಿಗಲ್ ಎಂದು ಗುರುತಿಸಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಕಂಧಮಲ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಮತ್ತೊಂದು ವರದಿ ಪ್ರಕಾರ: ಚುನಾವಣೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ವಾಹನವು ಫಿರಂಜಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಗುನಿಪದರ್ ಗೆ ತೆರಳುತ್ತಿತ್ತು. ಆ ವೇಳೆ ಮಾವೋವಾದಿಗಳು ವಾಹನವನ್ನು ತಡೆದು, ಅಧಿಕಾರಿಗಳನ್ನು ಕೆಳಗೆ ಇಳಿಸಿ, ವಾಹನಕ್ಕೆ ಬೆಂಕಿ ಹೊತ್ತಿಸಿದ್ದಾರೆ

Lok Sabha Eletions 2019: Election officer killed by Maoists in Odisha’s Kandhamal

ಇದಕ್ಕೂ ಮುನ್ನ ಕಂಧಮಲ್ ಜಿಲ್ಲೆಯಲ್ಲಿ ಮಾವೋವಾದಿಗಳು ಬ್ಯಾನರ್ ಹಾಗೂ ಪೋಸ್ಟರ್ ಗಳನ್ನು ಹಾಕಿ, ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದರು. ಈ ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಎರಡನೇ ಹಂತದ ಮತದಾನ ಏಪ್ರಿಲ್ ಹದಿನೆಂಟನೇ ತಾರೀಕು ಗುರುವಾರದಂದು ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+