ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್
ಪುರಿ, ಜೂನ್ 18: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ, ಜೂನ್ 23 ರಂದು ಭಗವಾನ್ ಜಗನ್ನಾಥರ ವಾರ್ಷಿಕ ರಥಯಾತ್ರೆಯನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಈ ವರ್ಷ ನಾವು ರಥಯಾತ್ರೆಗೆ ಅವಕಾಶ ನೀಡಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Recommended Video
ಕೊರೊನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಒಡಿಶಾ ಡೆವಲಪ್ಮೆಂಟ್ ಕೌನ್ಸಿಲ್ ಎಂಬ ಎನ್ಜಿಒ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು ಮತ್ತು ಈ ವರ್ಷ ರಥಯಾತ್ರೆಗೆ ತಡೆಯಾಜ್ಞೆ ನೀಡುವಂತೆ ಕೋರಿತ್ತು.
ಅಬ್ಬಾ..! ನದಿಯಿಂದ ಇದ್ದಕ್ಕಿದ್ದಂತೆ ಹೊರಬಂತು 500 ವರ್ಷಗಳ ಹಳೆಯ ವಿಷ್ಣು ದೇವಾಲಯ
ಈ ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬಾಡೆ ಬುಧವಾರ, ನಾವು ರಥಯಾತ್ರೆಗೆ ಅನುಮತಿಸಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು. ಸಾಂಕ್ರಾಮಿಕ ಸಮಯದಲ್ಲಿ ಇಂತಹ ಘಟನೆಗಳು ಸಂಭವಿಸದಿರಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಈ ಆದೇಶ ಅಗತ್ಯವಾಗಿದೆ ಎಂದಿದ್ದಾರೆ.