ಡಿಸೆಂಬರ್ 23 ರಂದು ಬಾಗಿಲು ತೆರೆಯಲಿದೆ ಪುರಿ ಜಗನ್ನಾಥ ದೇವಾಲಯ
ಪುರಿ, ಡಿಸೆಂಬರ್ 14: ಕೊರೊನಾ ಸೋಂಕಿನಿಂದಾಗಿ ಕಳೆದ 9 ತಿಂಗಳಿನಿಂದ ಬಾಗಿಲು ಮುಚ್ಚಿದ್ದ ಪುರಿ ಜಗನ್ನಾಥ ದೇವಾಲಯ ಡಿಸೆಂಬರ್ 23ರಂದು ತೆರೆಯಲಿದೆ.
ಶ್ರೀ ಜಗನ್ನಾಥ ದೇವಸ್ಥಾನ ಆಡಳಿತ ಮುಖ್ಯಸ್ಥ ಕ್ರಿಶನ್ ಕುಮಾರ್ ಮಾತನಾಡಿ, ಭಕ್ತರ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ದೇವಾಲಯವನ್ನು ಪುನಃ ತೆರೆಯುವ ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದರು.
ಈಗಾಗಲೇ ದೇವಸ್ಥಾನ ತೆರೆಯುವ ಕುರಿತು ಸಭೆ ನಡೆದಿದ್ದು, ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಡಿಸೆಂಬರ್ 23ರಂದು ದೇವಾಲಯವನ್ನು ಮತ್ತೆ ತೆರೆಯಲು ನಿರ್ಧರಿಸಲಾಗಿದೆ.

ಮತ್ತು ಪುರಿಯ ಜನರು ದೇವಾಲಯಕ್ಕೆ ಪ್ರವೇಶಿಸಲು ಮೊದಲು ಅವಕಾಶವನ್ನು ಪಡೆಯುತ್ತಾರೆ ಎಂದು ತಿಳಿಸಿದ್ದಾರೆ. ಅನುಮೋದನೆ ಬಳಿಕ ಪ್ರಮಾಣಿತ ಕಾರ್ಯಚರಣಾ ವಿಧಾನವನ್ನು ನೀಡಲಾಗುತ್ತದೆ.
ಪುರಿ ದೇವಸ್ಥಾನದ ಬಾಗಿಲು ತೆರೆದ ಐದು ದಿನಗಳಲ್ಲಿ ಪುರಿಯ ಜನತೆಗೆ ದೇವರ ದರ್ಶನ ಪಡೆಯಲು ಅವಕಾಶ ಮಾಡಿಕೊಡುವಂತೆ ಕೇಳಲಾಗುತ್ತಿದೆ ಎಂದರು.
ದೇವಸ್ಥಾನದ ಆಸುಪಾಸಿನಲ್ಲಿ ವಾಸಿಸುತ್ತಿದ್ದರೂ ಕೂಡ ದೇವಸ್ಥಾನಕ್ಕೆ ತೆರಳಲು ಜನರಿಗೆ ಅವಕಾಶವಿರಲಿಲ್ಲ ಹೀಗಾಗಿ ಮೊದಲ ಐದು ದಿನ ಪುರಿಯ ಭಕ್ತರು ದೇವರ ದರ್ಶನ ಪಡೆಯಬೇಕು.
ಹೊಸ ವರ್ಷವಾಗಿದ್ದರಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬರುವ ಸಾಧ್ಯೆ ಇರುವುದರಿಂದ ಜನವರಿ 1 ಹಾಗೂ 2 ರಂದು ದೇವಸ್ಥಾನವನ್ನು ಮುಚ್ಚಲಾಗುತ್ತದೆ.
ಜನವರಿ 3 ರಂದು ಎಂದಿನಂತೆ ದೇವಸ್ಥಾನದ ಬಾಗಿಲು ತೆರೆದಿರಲಿದೆ. 48 ಗಂಟೆಯೊಳಗಾಗಿ ಪಡೆದ ಕೊವಿಡ್ ನೆಗೆಟಿವ್ ವರದಿಯನ್ನು ಭಕ್ತರು ಹೊಂದಿರಬೇಕು. ಆರ್ಟಿಪಿಸಿಆರ್ ಪರೀಕ್ಷೆಯನ್ನು ಮಾಡಿಸಲು ಅನುಮತಿ ಇದೆ. 5 ಸಾವಿರ ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ಕ್ರಮೇಣವಾಗಿ ಭಕ್ತರ ಸಂಖ್ಯೆಯನ್ನು ಹೆಚ್ಚಿಸಲಾಗುತ್ತದೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications