ಒಡಿಶಾದಲ್ಲಿ ನಕ್ಸಲರಿಂದ ಕರ್ತವ್ಯನಿರತ ಮಹಿಳಾ ಚುನಾವಣಾಧಿಕಾರಿ ಹತ್ಯೆ
ಒಡಿಶಾ, ಏ.18: ಒಡಿಶಾದಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿಯನ್ನು ನಕ್ಸಲರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ
ಒಡಿಶಾಸ ಕಂದಮಾಲ್ ಜಿಲ್ಲೆಯ ಗೋಚಪಡಾದಲ್ಲಿ ಘಟನೆ ನಡೆದಿದೆ. ಸಂಜುಕ್ತಾ ಕಂದಮಾಲ್ ಹತ್ಯೆಗೀಡಾದ ಚುನಾವಣಾ ಅಧಿಕಾರಿ.
ಅಧಿಕಾರಿ ಮನೆಯಿಂದ ಚುನಾವಣಾ ಮತಗಟ್ಟೆಗೆ ತೆರಳುತ್ತಿದ್ದ ವೇಳೆ ಅವರ ವಾಹನವನ್ನು ಅಡ್ಡಗಟ್ಟಿದ ಬಂದೂಕುದಾರಿ ನಕ್ಸಲರು ವಾಹನಕ್ಕೆ ಬೆಂಕಿ ಹಚ್ಚಿ ಅಧಿಕಾರಿಯನ್ನು ಹತ್ಯೆಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ ವರ್ಷ ನವೆಂಬರ್ 11 ರಂದು ನಡೆಸಲಾಗಿದ್ದ ದಾಳಿಯಲ್ಲಿ ಬಿಎಸ್ಎಫ್ನ ಓರ್ವ ಸಬ್ ಇನ್ಸ್ಪೆಕ್ಟೆರ್ ಮೃತಪಟ್ಟಿದ್ದರೆ ಹಲವರು ಗಾಯಗೊಂಡಿದ್ದರು. ಅಲ್ಲದೆ ಏಪ್ರಿಲ್ 9 ರಂದು ಛತ್ತೀಸ್ಗಢದಲ್ಲೂ ನಕ್ಸಲರು ಬಾಂಬ್ ದಾಳಿ ನಡೆಸುವ ಮೂಲಕ ದಾಂತೇವಾಡದ ಕ್ಷೇತ್ರದ ಬಿಜೆಪಿ ಶಾಸಕ ಭೀಮಾ ಮಾಂಡವಿ ಸೇರಿ 5 ಜನ ಪೊಲೀಸರನ್ನು ಹತ್ಯೆ ಮಾಡಿದ್ದರು.
ಕರಪತ್ರ ಬ್ಯಾನರ್ಗಳನ್ನು ಅಂಟಿಸಿ ಪ್ರತಿಭಟಿಸಿದ್ದಾರೆ. ಅಲ್ಲದೆ ಚುನಾವಣಾ ಅಧಿಸೂಚನೆ ಹೊರ ಬಿದ್ದ ನಂತರ ಈವರೆಗೆ ಒಡಿಶಾದಲ್ಲಿ ಸುಮಾರು 7ಕ್ಕೂ ಹೆಚ್ಚು ಬಾರಿ ಸುಧಾರಿತ ಸ್ಫೋಟಗಳನ್ನು ಬಳಸಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಕ್ಸಲ್ ಪೀಡಿತ ಒಡಿಶಾ ರಾಜ್ಯದ 21 ಲೋಕಸಭಾ ಕ್ಷೇತ್ರಗಳ ಪೈಕಿ ಎರಡನೇ ಹಂತದಲ್ಲಿ ಅಸ್ಕಾ, ಬಾರಾಗಡ್, ಬೋಲಂಗೀರ್, ಸುದರ್ಗಡ್ ಹಾಗೂ ಕಂಧಮಲ್ ಸೇರಿದಂತೆ ಒಟ್ಟು 5 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ನಡೆಯುತ್ತಿದೆ.












Click it and Unblock the Notifications