Get Updates
Get notified of breaking news, exclusive insights, and must-see stories!

ಬಿಜೆಪಿಗೆ ಒಬಿಸಿ ಟಕ್ಕರ್ ನೀಡಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್

ಒಂದೆಡೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ, ಇದೀಗ ಇನ್ನೊಂದೆಡೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಒಬಿಸಿಗೆ ಮತ್ತಷ್ಟು ಪಂಗಡಗಳನ್ನು ಸೇರಿಸಬೇಕು ಎಂದು ಹೇಳುವ ಮೂಲಕ ಬಿಜೆಪಿಗೆ ಟಕ್ಕರ್ ನೀಡಿದ್ದಾರೆ.

ಜಾತಿ ಆಧಾರಿತ ಜನಗಣತಿಯ ಅಗತ್ಯವಿದೆ ಎಂದು ಹೇಳುವ ಮೂಲಕ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಹಿಂದುಳಿದ ವರ್ಗಗಳ ಸಂಖ್ಯೆಯನ್ನು ನಿರ್ಧರಿಸುವ ಬೇಡಿಕೆ ಕುತೂಹಲ ಕೆರಳಿಸಿತ್ತು.

ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಪ್ರಕಾರ ಜಾತಿ ಆಧಾರಿತ ಜನಗಣತಿಯನ್ನು ಕೇಂದ್ರ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಜನರ ನಡುವಿನ ತಾರತಮ್ಯವನ್ನು ತಗ್ಗಿಸಲು ಏನಾದರೂ ಮಾಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದರು.

Naveen Patnaik’s OBC Turn To Outfox BJP

"ನಮ್ಮ ಜನರಿಗೆ ಸಂವೇದನಾಶೀಲವಾದದ್ದನ್ನು ನಾವು ಮಾಡುತ್ತೇವೆ. ನಮ್ಮ ಸರ್ಕಾರವು ಅದರ ಪರವಾಗಿ ನಿಲ್ಲುತ್ತದೆ ಮತ್ತು ಅದಕ್ಕಾಗಿ ನಾವು ಹೋರಾಡುತ್ತಿದ್ದೇವೆ" ಎಂದು ಹೇಳಿದರು.

"ನಮ್ಮ ರಾಜ್ಯದಲ್ಲಿ, ಶೇಕಡಾ 94 ರಷ್ಟು ಜನರು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಜನರಿಗೆ ಸಾಮಾಜಿಕ ನ್ಯಾಯವನ್ನು ನೀಡುವ ಸಲುವಾಗಿ ನಾವು ಒಬಿಸಿ ಆಯೋಗವನ್ನು ರಚಿಸಿದ್ದೇವೆ.

ನಾವು ನಮ್ಮದೇ ಮಟ್ಟದಲ್ಲಿ ಒಂದು ಡೇಟಾಬೇಸ್ ಅನ್ನು ಸಂಗ್ರಹಿಸುತ್ತಿದ್ದೇವೆ. ಅವರ ಬಳಕೆ ಅಭ್ಯಾಸ, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಪಟ್ನಾಯಕ್ ಕಳೆದ ತಿಂಗಳು ಹೇಳಿದ್ದರು.

ಸರ್ಕಾರವು ಅಧಿಕೃತ ಡೇಟಾವನ್ನು ಸೃಷ್ಟಿಸದ ಹೊರತು ಸುಪ್ರೀಂ ಕೋರ್ಟ್ ಮೀಸಲಾತಿಯ ಮೇಲಿನ ಶೇಕಡಾ 50 ರ ಮಿತಿಯನ್ನು ತೆಗೆದುಹಾಕುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಹಲವಾರು ವಿರೋಧ ಪಕ್ಷದ ನಾಯಕರು ತಮ್ಮ ರಾಜ್ಯಗಳಲ್ಲಿ ಜಾತಿ ಆಧಾರಿತ ಗಣತಿಗಾಗಿ ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಒಬಿಸಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಕ್ಕುಗಳನ್ನು ನೀಡುವ ಪರವಾಗಿಲ್ಲ ಎಂದು ಹೇಳಿದ್ದಾರೆ.

'ಒಬಿಸಿ' ಸಮಾಜದ ಎಣಿಕೆಯ ದೀರ್ಘಾವಧಿಯ ಬೇಡಿಕೆಯನ್ನು ತಿರಸ್ಕರಿಸುವ ಮೂಲಕ ಬಿಜೆಪಿ ಸರ್ಕಾರವು 'ಇತರ ಹಿಂದುಳಿದ ವರ್ಗಗಳನ್ನು' ಎಣಿಸಲು ಬಯಸುವುದಿಲ್ಲ ಎಂದು ಸಾಬೀತುಪಡಿಸಿದೆ ಏಕೆಂದರೆ ಒಬಿಸಿಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಹಕ್ಕುಗಳನ್ನು ನೀಡಲು ಬಯಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಮುಂಬರುವ 2021 ರ ಜನಗಣತಿಯ ವ್ಯಾಪ್ತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೊರತುಪಡಿಸಿ ಯಾವುದೇ ಜಾತಿಯನ್ನು ಹೊರಗಿಡುವುದು ಕೇಂದ್ರ ಸರ್ಕಾರವು "ಪ್ರಜ್ಞಾಪೂರ್ವಕ ನೀತಿ ನಿರ್ಧಾರ" ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ನಲ್ಲಿ ಕೇಂದ್ರ ಹೇಳಿದೆ.

2011-2013ರಲ್ಲಿ ಕೇಂದ್ರವು ಸಂಗ್ರಹಿಸಿದ ಒಬಿಸಿಗಳ ಜನಗಣತಿ ಡೇಟಾವನ್ನು ಹಂಚಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಮನವಿಯ ಮೇರೆಗೆ ಕೇಂದ್ರ ಸರ್ಕಾರದ ಅಫಿಡವಿಟ್ ಸಲ್ಲಿಸಲಾಗಿದೆ.

ಈ ಹಿಂದೆ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕೂಡ ಕೇಂದ್ರದ ಅಫಿಡವಿಟ್ ಅನ್ನು ಪ್ರಶ್ನಿಸಿದರು ಮತ್ತು ಜಾತಿ ಗಣತಿಗೆ ಅವಕಾಶ ನೀಡದೇ ಇದ್ದಲ್ಲಿ ಅದು ಬಿಜೆಪಿಯ ಪ್ರಜ್ಞಾಪೂರ್ವಕ ನಿರ್ಧಾರ ಎಂದು ಕೇಳಿದರೆ, ಬಿಹಾರದಲ್ಲಿ ಅದರ ಶಾಸಕರು ಜಾತಿ ಗಣತಿ ಪರವಾಗಿ ಪ್ರಸ್ತಾವನೆಯನ್ನು ಏಕೆ ಒಪ್ಪಿದರು? ಎಂದು ತೇಜಸ್ವಿ ಯಾದವ್ ಪ್ರಶ್ನಿಸಿದ್ದರು.

ಹಿಂದುಳಿದ ವರ್ಗಗಳ ಜನಗಣತಿಯು "ಆಡಳಿತಾತ್ಮಕವಾಗಿ ಕಷ್ಟಕರವಾಗಿದೆ" ಮತ್ತು ಸಂಪೂರ್ಣತೆ ಮತ್ತು ನಿಖರತೆಯಿಂದಾಗಿ ಎರಡೂ ತೊಂದರೆಗಳನ್ನು ಅನುಭವಿಸುತ್ತದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಹಿಂದುಳಿದ ವರ್ಗಗಳ ಜಾತಿ ಗಣತಿ ವಿಷಯದಲ್ಲಿ ಸಹಕಾರ ನೀಡುವಂತೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬಿಜೆಪಿಯೇತರ ನಾಯಕರಿಗೆ ಪತ್ರ ಬರೆದಿದ್ದಾರೆ. ಜಾತಿ ಗಣತಿಯು ಆಡಳಿತಾತ್ಮಕ ತೊಡಕಾಗಿದೆ, ಇದರ ಗಣತಿಯನ್ನು ಕೈಬಿಟ್ಟಿರುವುದು ಒಂದು ಪ್ರಜ್ಞಾಪೂರ್ವಕ ನಿರ್ಧಾರವಾಗಿದೆ ಎಂದು ಸರ್ಕಾರ ಹೇಳಿತ್ತು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಗಣತಿಗೆ ಕೇಂದ್ರ ಒಪ್ಪಿಗೆ ನೀಡಿರುವುದು ಬಿಹಾರ ಸೇರಿದಂತೆ ಇತರೆ ರಾಜಕೀಯ ಪ್ರಾಬಲ್ಯ ಹೊಂದಿರುವ ಇತರೆ ಹಿಂದುಳಿದ ವರ್ಗಗಳ ಅಸಮಾಧಾನಕ್ಕೆ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+