5ನೇ ಬಾರಿ ಒಡಿಶಾ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ ನವೀನ್ ಪಟ್ನಾಯಕ್
ಭುವನೇಶ್ವರ್, ಮೇ 29: ಒಡಿಶಾ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಐದನೇಯ ಅವಧಿಗೆ ನವೀನ್ ಪಟ್ನಾಯಕ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ 20 ವರ್ಷಗಳಿಂದಲೂ ನವೀನ್ ಪಟ್ನಾಯಕ್ ಅವರು ಒಡಿಶಾದ ಸಿಎಂ ಆಗಿದ್ದರು. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅವರ ಪಕ್ಷಕ್ಕೆ ಬಹುಮತ ದೊರೆತಿದ್ದು ನವೀನ್ ಪಟ್ನಾಯಕ್ ಅವರು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ನವೀನ್ ಪಟ್ನಾಯಕ್ ಅವರ ಬಿಜೆಡಿ (ಬಿಜು ಜನತಾ ದಳ) ಪಕ್ಷದ ಮುಖಂಡರೂ ಆಗಿದ್ದು, 2000 ನೇ ಇಸವಿ ಮಾರ್ಚ್ 05 ರಂದು ಮೊದಲ ಬಾರಿಗೆ ಒಡಿಶಾದ ಸಿಎಂ ಆಗಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅಂದಿನಿಂದ ಸತತವಾಗಿ 19 ವರ್ಷ 84 ದಿನ ಅವರು ಒಡಿಶಾದ ಸಿಎಂ ಆಗಿ ಕಾರ್ಯನಿರ್ವಹಿಸುತ್ತಲೇ ಇದ್ದಾರೆ. ಈಗ ಮತ್ತೊಮ್ಮೆ ಅವರು ಆಯ್ಕೆಯಾಗಿದ್ದಾರೆ.

ಭುವನೇಶ್ವರ್ನಲ್ಲಿ ಪ್ರಮಾಣವಚನ
ಭುವನೇಶ್ವರ್ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ನವೀನ್ ಪಟ್ನಾಯಕ್ ಮತ್ತು ಇನ್ನೂ ಕೆಲವು ಮಂತ್ರಿಗಳಿಗೆ ಪ್ರಮಾಣ ವಚನ ಭೋದಿಸಿದರು. ಈ ಸಂದರ್ಭದಲ್ಲಿ ನವೀನ್ ಪಟ್ನಾಯಕ್ ಅವರ 19 ವರ್ಷ ಸಿಎಂ ಆಗಿ ಕಾರ್ಯ ನಿರ್ವಹಿಸಿದ ನೆನಪಿಗೆ ಟ್ವಿಟ್ಟರ್ನಲ್ಲಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

20 ಮಂತ್ರಿಗಳು ಪ್ರಮಾಣ ವಚನ
ನಿನ್ನೆಯೇ 20 ಮಂತ್ರಿಗಳನ್ನು ಪಟ್ನಾಯಕ್ ಅವರು ಆಯ್ಕೆ ಮಾಡಿದ್ದಾರೆ. ಅದರಲ್ಲಿ 11 ಕ್ಯಾಬಿನೆಟ್ ದರ್ಜೆ ಸಚಿವರು, 9 ಮಂದಿ ಸಚಿವರನ್ನು ಆಯ್ಕೆ ಮಾಡಲಾಗಿದೆ. ಅವರೂ ಸಹ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
|
ಮೋದಿ ಟ್ವಿಟ್ಟರ್ ಮೂಲಕ ಅಭಿನಂದನೆ
ನವೀನ್ ಪಟ್ನಾಯಕ್ ಅವರು ಇಂದಿನ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಿದ್ದರು. ಆದರೆ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಾಗಿಲ್ಲ, ಆದರೆ ಟ್ವಿಟ್ಟರ್ ಮೂಲಕ ನವೀನ್ ಪಟ್ನಾಯಕ್ ಅವರಿಗೆ ಮೋದಿ ಅವರು ಅಭಿನಂದನೆಗಳನ್ನು ಹೇಳಿದ್ದಾರೆ.

ಭಾರಿ ಬಹುಮತ ಗಳಿಸಿದ್ದ ಬಿಜೆಡಿ
ಕೆಲ ದಿನಗಳ ಹಿಂದೆ ನಡೆದ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿಯು 147 ಸ್ಥಾನಗಳಲ್ಲಿ 112 ಕ್ಷೇತ್ರಗಳಲ್ಲಿ ಗೆದ್ದು ಭಾರಿ ಬಹುಮತಗಳಿಸಿತ್ತು. ಕಳೆದ 19 ವರ್ಷದಿಂದಲೂ ಒಡಿಶಾದಲ್ಲಿ ಬಿಜೆಪಿ ಪಕ್ಷವೇ ಅಧಿಕಾರದಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 12 ಸ್ಥಾನ ಗಳಿಸಿದ್ದರೆ, ಬಿಜೆಪಿಯು 9 ಸ್ಥಾನ ಗಳಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications