ವಿಮಾನ, ರೈಲು ಸಂಚಾರ ನಿರ್ಬಂಧಿಸಿ: ಮೋದಿಗೆ ಒಡಿಶಾ ಸಿಎಂ ಮನವಿ
ಭುವನೇಶ್ವರ, ಜೂನ್ 18: ವಿಮಾನ ಸಂಚಾರ ಹಾಗೂ ರೈಲು ಸಂಚಾರಕ್ಕೆ ನಿರ್ಬಂಧ ಮುಂದುವರಿಸಿ ಎಂದು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಪ್ರಧಾನಿ ಮೋದಿ ಬಳಿ ಮನವಿ ಮಾಡಿದ್ದಾರೆ.
Recommended Video
ನಿನ್ನೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ್ದರು. ಈ ವೇಳೆ ಜೂನ್ ತಿಂಗಳ ಅಂತ್ಯದವರೆಗೂ ನಮ್ಮ ರಾಜ್ಯದಲ್ಲಿ ವಿಮಾನ ಮತ್ತು ರೈಲು ಸಂಚಾರಕ್ಕೆ ತಡೆ ನೀಡಿ ಎಂದು ವಿನಂತಿಸಿಕೊಂಡಿದ್ದಾರೆ.
''ಜೂನ್ ತಿಂಗಳು ನಮ್ಮ ರಾಜ್ಯಕ್ಕೆ ಬಹಳ ಪ್ರಮುಖವಾದದು. ಸಾವಿರಾರು ವಲಸೆ ಕಾರ್ಮಿಕರು ರಾಜ್ಯಕ್ಕೆ ಹಿಂತಿರುಗಿದ್ದಾರೆ. ಮುಂಗಾರು ಬೇರೆ ಪ್ರವೇಶವಾಗಿದೆ. ಈ ವೇಳೆ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ಕೇಂದ್ರ ಸರ್ಕಾರ ರೈಲು ಮತ್ತು ವಿಮಾನ ಸಂಚಾರವನ್ನು ಈ ತಿಂಗಳ ಅಂತ್ಯದವರೆಗೂ ನಿರ್ಬಂಧಿಸಿದರೆ ಉತ್ತಮ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ಈ ವೇಳೆ ಒಡಿಶಾದ ಅನೇಕ ಮಂದಿ ಗಾಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರಧಾನಿ ಅವರ ಗಮನ ತಂದರು. 'ಕಡಿಮೆ ವೇತನ ಪಡೆಯುವ ಹಲವು ಮಂದಿ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ಭಾರತಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು' ಎಂದು ಒತ್ತಾಯಿಸಿದರು.
ನೀಟ್, ಜೆಇಇ-ಮೇನ್, ಕ್ಲಾಟ್ ಮುಂತಾದ ರಾಷ್ಟ್ರೀಯ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಹಾಜರಾಗುವ ವೇಳೆ ಎದುರಾಗುವ ತೊಂದರೆಗಳ ಕುರಿತು ಪಟ್ನಾಯಕ್ ತಿಳಿಸಿಕೊಟ್ಟರು. "ರಾಜ್ಯಮಟ್ಟದ ಪ್ಲಸ್ -2 ಪರೀಕ್ಷೆಗಳು ಪೂರ್ಣಗೊಂಡ ನಂತರವೇ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಗಳನ್ನು ನಡೆಸಬೇಕು," ಕೇಂದ್ರಕ್ಕೆ ಮನವರಿಕೆ ಮಾಡಿದರು.
ಪ್ರಸ್ತುತ ಒಡಿಶಾದಲ್ಲಿ 4512 ಮಂದಿಗೆ ಕೊರೊನಾ ಸೋಂಕು ತಗುಲಿದೆ. 3047 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ 1451 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ 14 ಜನರು ಕೊರೊನಾಗೆ ಬಲಿಯಾಗಿದ್ದಾರೆ.
-
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ












Click it and Unblock the Notifications