ಪ್ರತಿ ಕುಟುಂಬಕ್ಕೂ ಉಚಿತ ಸ್ಮಾರ್ಟ್ ಫೋನ್ ಘೋಷಿಸಿದ ಸರ್ಕಾರ!
ಭುವನೇಶ್ವರ್, ನವೆಂಬರ್.17: ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ವಾಸವಿರುವ ಎಲ್ಲ ಕುಟುಂಬಗಳಿಗೂ ಉಚಿತವಾಗಿ ಸ್ಮಾರ್ಟ್ ಫೋನ್ ನೀಡುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸರ್ಕಾರವು ಮಂಗಳವಾರ ಘೋಷಿಸಿದೆ.
ಮಾಲ್ಕನ್ ಗಿರಿ ಜಿಲ್ಲೆಯ ನಕ್ಸಲ್ ಪೀಡಿತ ಸ್ವಾಭಿಮಾನ್ ಅಂಚಲ್ ಪ್ರದೇಶದ ನಿವಾಸಿಗಳ ಜೊತೆಗೆ ಸಿಎಂ ನವೀನ್ ಪಟ್ನಾಯಕ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ಈ ವೇಳೆ ಎಲ್ಲ ಕುಟುಂಬ ಸದಸ್ಯರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಸ್ಮಾರ್ಟ್ ಫೋನ್ ನೀಡುವುದಾಗಿ ಘೋಷಿಸಿದರು.
ಸ್ವಾಭಿಮಾನ್ ಅಂಚಲ್ ಪ್ರದೇಶವು ನನಗೆ ಯಾವಾಗಲೂ ಅತ್ಯಂತ ಪ್ರಿಯವಾಗಿದೆ. ಈ ಪ್ರದೇಶದ ಜನರ ಅಭಿವೃದ್ಧಿಗಾಗಿ ನಾನು ಸದಾ ಶ್ರಮಿಸುತ್ತೇನೆ. ಸರ್ಕಾರದ ವತಿಯಿಂದ ಸ್ಮಾರ್ಟ್ ಫೋನ್ ನೀಡಲಾಗುತ್ತಿದ್ದು, ಈ ಪ್ರದೇಶದ ಜನರು ದೇಶದ ಬೇರೆ ಭಾಗಗಳಲ್ಲಿರುವ ಜನರೊಂದಿಗೆ ಸಂಪರ್ಕ ಸಾಧಿಸುವುದಕ್ಕೆ ಸಹಕಾರಿ ಆಗಲಿದೆ. ಜೊತೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಶಿಕ್ಷಣ ಪಡೆಯಲು ಉಪಯೋಗವಾಗಲಿದೆ ಎಂದರು.

ಈ ಪ್ರದೇಶದಲ್ಲಿ 4ಜಿ ನೆಟ್ ವರ್ಕ್ ಸೇವೆ:
ಒಡಿಶಾದ ನಕ್ಸಲ್ ಪೀಡಿತ ಪ್ರದೇಶವಾಗಿರುವ ಸ್ವಾಭಿಮಾನ್ ಅಂಚಲ್ ನಲ್ಲಿ ಸದ್ಯದ ಮಟ್ಟಿಗೆ ನಾಲ್ಕು ಮೊಬೈಲ್ ನೆಟ್ ವರ್ಕ್ ಗಳಿವೆ. ಮುಂದಿನ ಕೆಲವೇ ದಿನಗಳಲ್ಲಿ 4ಜಿ ಸೌಲಭ್ಯವನ್ನು ಈ ಪ್ರದೇಶದ ಜನರಿಗೂ ಒದಗಿಸಲಾಗುವುದು ಎಂದು ನವೀನ್ ಪಟ್ನಾಯಕ್ ಭರವಸೆ ನೀಡಿದ್ದಾರೆ.
ಕಳೆದ 2018ರಲ್ಲಿ ಸ್ವಾಭಿಮಾನ್ ಅಂಚಲ್ ಪ್ರದೇಶಕ್ಕೆ ಭೇಟಿ ನೀಡಿದ್ದ ಸಿಎಂ ನವೀನ್ ಪಟ್ನಾಯಕ್, 100 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ಶಿಕ್ಷಣ, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ನೀರಾವರಿ, ಸಂಪರ್ಕ, ವಸತಿ, ಬ್ಯಾಂಕಿಂಗ್ ಸೇವೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದಕ್ಕಾಗಿ ಘೋಷಿಸಿದ ಪ್ಯಾಕೇಜ್ ಮೊತ್ತವನ್ನು ತದನಂತರದಲ್ಲಿ 215 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications