Breaking ಒಡಿಶಾ; ವರುಣನ ಆರ್ಭಟಕ್ಕೆ ಸಂಪರ್ಕ ಕಡಿದುಕೊಂಡ 42 ಹಳ್ಳಿಗಳು
ಭುವನೇಶ್ವರ, ಆಗಸ್ಟ್ 19: ಒಡಿಶಾದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಸುಮಾರು 42 ಹಳ್ಳಿಗಳಿಗೆ ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಂಡಿರುವುದರಿಂದ ಜನರು ಸಮಸ್ಯೆಗಳಿಗೆ ಸಿಲುಕಿದ್ದಾರೆ.
ಮಹಾನದಿ ಮತ್ತು ಪೈಕಾ ನದಿಗಳ ಪ್ರವಾಹವು ಕಡಿಮೆಯಾಗಲು ಪ್ರಾರಂಭಿಸಿದೆ. ಆದರೆ, ಕುಜಾಂಗ್ ಮತ್ತು ತಿರ್ಟೋಲ್ ಬ್ಲಾಕ್ಗಳಲ್ಲಿನ ಸುಮಾರು 42 ಹಳ್ಳಿಗಳು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಂಡಿವೆ. ಹೀಗಾಗಿ ಜನರು ಪ್ರವಾಹದ ಪರಿಣಾಮಗಳನ್ನು ನಿಭಾಯಿಸಲು ಇನ್ನೂ ಹೆಣಗಾಡುತ್ತಿದ್ದಾರೆ.
ಕುಜಂಗ್ನ 11 ಪಂಚಾಯತ್ಗಳ 34 ಗ್ರಾಮಗಳ 14,967 ನಿವಾಸಿಗಳು ಮತ್ತು ತಿರ್ತೋಲ್ನ ಎಂಟು ಗ್ರಾಮಗಳ 2,000 ನಿವಾಸಿಗಳು ದಿಕ್ಕು ತೋಚದಂತ ಸ್ಥಿತಿಯಲ್ಲಿದ್ದಾರೆ. ಕುಜಂಗ್ನ ಜಯಸಂಖ್ಪುರ ಗ್ರಾಮದ 200 ಕುಟುಂಬಗಳಿಗೆ ಇನ್ನೂ ಪರಿಹಾರ ಸಾಮಗ್ರಿಗಳು ಬಂದಿಲ್ಲ. ಹೊರ ಪ್ರಪಂಚದಿಮದ ಸಂಪರ್ಕ ಕಡಿತಗೊಂಡ ಗ್ರಾಮಕ್ಕೆ ಯಾವುದೇ ಅಧಿಕಾರಿ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಅನೇಕ ಸಂತ್ರಸ್ತ ಗ್ರಾಮಸ್ಥರು ರಸ್ತೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಡ್ಡುಗಳ ಮೇಲೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಭಾರಿ ಮಳೆಯಾಗುವ ವರದಿ ನೀಡಿರುವ ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಗುರುವಾರದಂದು ಹವಾಮಾನ ಇಲಾಖೆ ಕಚೇರಿಯು ರಾಜ್ಯದ 20 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಆರೆಂಜ್ ಅಲರ್ಟ್ ನೀಡಿತ್ತು.
ಶುಕ್ರವಾರ ಕಟಕ್, ಕೇಂದ್ರಪಾರ ಮತ್ತು ಸಂಬಲ್ಪುರ ಸೇರಿದಂತೆ 17 ಜಿಲ್ಲೆಗಳಲ್ಲಿ 116 ರಿಂದ 204 ಮಿಮೀ ಭಾರಿ ಮಳೆಯಾಗುವ ಸೂಚನೆ ನೀಡಿದೆ. ಉಳಿದ 13 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆಯಾಗುವ ನಿರೀಕ್ಷೆಯಿದೆ.

ಜೊತೆಗೆ ನಾಳೆ ಶನಿವಾರದಂದು ಕಲಹಂಡಿ ಮತ್ತು ಪಶ್ಚಿಮ ಒಡಿಶಾದ ಏಳು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಈ ಪ್ರದೇಶದಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿರುವುದರಿಂದ ಶುಕ್ರವಾರ ಮತ್ತು ಶನಿವಾರ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ರಾಜ್ಯ ಸರ್ಕಾರ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ರಾಜ್ಯದ 12 ಪ್ರವಾಹ ಪೀಡಿತ ಜಿಲ್ಲೆಗಳ ಪೈಕಿ ಐದು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಮುಂದಿನ 15 ದಿನಗಳ ಕಾಲ ಸಂತ್ರಸ್ತರಿಗೆ ಸಹಾಯವನ್ನು ನೀಡುವುದಾಗಿ ಘೋಷಿಸಿದರು.
ಅತಿ ಹೆಚ್ಚು ಹಾನಿಗೊಳಗಾಗಿರುವ ಖುದ್ರಾ, ಪುರಿ, ಕಟಕ್, ಕೇಂದ್ರಪಾರ ಮತ್ತು ಜಗತ್ಸಿಂಗ್ಪುರ ಜಿಲ್ಲೆಗಳ ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ 15 ದಿನಗಳ ಕಾಲ ಪರಿಹಾರ ಘೋಷಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications