ಅಂತರ್-ಜಾತಿ ವಿವಾಹದ ಪ್ರೋತ್ಸಾಹಧನ ಅರ್ಜಿ ಸಲ್ಲಿಕೆಗೆ ಹೊಸ ವೆಬ್ ಸೈಟ್
ಭುವನೇಶ್ವರ್, ಅಕ್ಟೋಬರ್.30: ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದೇ ಬೇಕಿಲ್ಲ. ನೀವು ಕುಳಿತಲ್ಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದರೆ 60 ದಿನಗಳಲ್ಲಿ ಸರ್ಕಾರದಿಂದ ಸಹಾಯಧನವು ನಿಮ್ಮ ಖಾತೆಗೆ ಜಮಾ ಆಗಲಿದೆ.
ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರವು ಇಂಥದೊಂದು ವಿನೂತನ ಸರ್ಕಾರಿ ವೆಬ್ ಸೈಟ್ ಗೆ ಚಾಲನೆ ನೀಡಿದೆ. ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸುಮಂಗಲ ವೆಬ್ ಸೈಟ್ ನ್ನು ಪ್ರಾರಂಭಿಸಲಾಗಿದೆ. ಇದರಿಂದ ಸಾಮಾಜಿಕ ಸಾಮರಸ್ಯ ಕಾಪಾಡುವುದಕ್ಕೆ ಸಾಧ್ಯವಾಗುತ್ತದೆ ಎನ್ನುವುದು ಸಿಎಂ ನವೀನ್ ಪಟ್ನಾಯಕ್ ಸರ್ಕಾರದ ನಂಬಿಕೆ ಎಂದು ವರದಿಯಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇಲಾಖೆ ಹಾಗೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯು ಈ ವೆಬ್ ಸೈಟ್ ನ್ನು ಅಭಿವೃದ್ಧಿಪಡಿಸಿದೆ. ಕಳೆದ 2018ರಲ್ಲಿ ಅಂತರ್-ಜಾತಿ ವಿವಾಹಕ್ಕೆ ನೀಡುವ ಪ್ರೋತ್ಸಾಹ ಧನದ ಮೊತ್ತವನ್ನು 1 ಲಕ್ಷದಿಂದ 2.50 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿತ್ತು.

ದಂಪತಿ ಬ್ಯಾಂಕ್ ಖಾತೆಗೆ ಹಣ ಜಮಾವಣೆ:
ಅಂತರ್-ಜಾತಿ ವಿವಾಹ ಮಾಡಿಕೊಂಡ ದಂಪತಿಯು ಸುಮಂಗಲ ವೆಬ್ ಸೈಟ್ ನಲ್ಲಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ದಂಪತಿಯ ಹೆಸರಿನಲ್ಲಿರುವ ಜಂಟಿ ಬ್ಯಾಂಕ್ ಖಾತೆಗೆ ಅರ್ಜಿ ಸಲ್ಲಿಸಿದ 60 ದಿನಗಳಲ್ಲೇ ಪ್ರೋತ್ಸಾಹ ಧನದ ಮೊತ್ತವು ಜಮಾವಣೆ ಆಗುತ್ತದೆ. ಆದರೆ ಮದುವೆಯಾಗಿ ಮೂರು ವರ್ಷಗಳ ನಂತರವಷ್ಟೇ ಈ ಹಣವನ್ನು ಬ್ಯಾಂಕ್ ನಿಂದ ಬಿಡಿಸಿಕೊಳ್ಳುವುದಕ್ಕೆ ಅವಕಾಶ ನೀಡಲಾಗುತ್ತದೆ.
2017-18ನೇ ಸಾಲಿನಲ್ಲಿ 543 ದಂಪತಿ ಈ ಯೋಜನೆಯ ಉಪಯೋಗವನ್ನು ಪಡೆದುಕೊಂಡಿದ್ದಾರೆ. ಒಡಿಶಾ ಸರ್ಕಾರವು ಅಂತರ್-ಜಾತಿ ವಿವಾಹವಾದ ದಂಪತಿಗೆ ಪ್ರೋತ್ಸಾಹ ಧನ ನೀಡುವುದಕ್ಕಾಗಿ 2.65 ಕೋಟಿ ರೂಪಾಯಿ ಖರ್ಚು ಮಾಡಿದೆ.
ಈ ಯೋಜನೆ ಫಲಾನುಭವಿ ಆಗಬೇಕಿದ್ದಲ್ಲಿ ಹಿಂದೂ ವಿವಾಹ ಕಾಯ್ದೆ 1955ರ ಅಡಿಯಲ್ಲಿ ಮದುವೆ ಕುರಿತು ನೋಂದಣಿ ಮಾಡಿಕೊಳ್ಳುವುದು. ಈ ವೇಳೆ ಪತ್ನಿ ಹಿಂದುಳಿದ ಜಾತಿ ಅಥವಾ ಹಿಂದುಳಿದ ಜನಾಂಗಕ್ಕೆ ಸೇರಿದವರು ಆಗಿರಬೇಕು. ಒಂದು ವೇಳೆ ಪತ್ನಿಯು ಮೇಲ್ವರ್ಗಕ್ಕೆ ಸೇರಿದವರಾಗಿದ್ದಲ್ಲಿ ಪತಿಯು ಎಸ್ ಸಿ ಅಥವಾ ಎಸ್ ಟಿಗೆ ಸೇರಿದವರು ಆಗಿರಬೇಕು. ಒಟ್ಟಿನಲ್ಲಿ ದಂಪತಿ ಪೈಕಿ ಒಬ್ಬರು ಎಸ್ ಸಿ, ಎಸ್ ಟಿಗೆ ಸೇರಿದವರು ಆಗಿದ್ದಲ್ಲಿ ಮಾತ್ರ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳುವುದಕ್ಕೆ ಅವಕಾಶವಿದೆ.
ಮೊದಲ ಬಾರಿ ಮದುವೆಯಾಗುವ ದಂಪತಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ವಿಧವೆ ಮತ್ತು ಪತ್ನಿ ತೀರಿಕೊಂಡ ಪತಿಯು ಅಂತರ್-ಜಾತಿ ವಿವಾಹವಾದರು ಕೂಡಾ ಯೋಜನೆಯ ಫಲಾನುಭವಿ ಆಗಬಹುದು. ಈ ಪ್ರೋತ್ಸಾಹ ಧನವನ್ನು ಭೂಮಿ ಖರೀದಿ, ಹೊಸ ವ್ಯಾಪಾರ ಆರಂಭ ಸೇರಿದಂತೆ ಹಲವು ಉದ್ದೇಶಗಳಿಗೆ ಬಳಸಿಕೊಳ್ಳುವುದಕ್ಕೆ ಅವಕಾಶವಿದೆ.
ವಿದ್ಯಾರ್ಥಿ ವೇತನಕ್ಕೂ ಹೊಸ ವೆಬ್ ಸೈಟ್:
ಒಡಿಶಾ ಸರ್ಕಾರವು ಮತ್ತೊಂದು ವೆಬ್ ಸೈಟ್ ನ್ನು ಆರಂಭಿಸಿದ್ದು, ಇದು ವಿದ್ಯಾರ್ಥಿಗಳಿಗೆ ಸಹಾಯ ಧನ ಅರ್ಜಿ ಸಲ್ಲಿಸುವುದಕ್ಕೆ ನೆರವಾಗಲಿದೆ. ರಾಜ್ಯದ ಎಂಟು ಇಲಾಖೆಗಳು ನೀಡುವ 21 ಬಗೆಯ ವಿದ್ಯಾರ್ಥಿ ವೇತನವನ್ನು ಯಾವುದೇ ಸ್ಪರ್ಧೆಯಿಲ್ಲದೇ ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಹಿಂದುಳಿದ ಜನಾಂಗಕ್ಕೆ ಸೇರಿದ 11 ಲಕ್ಷ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications