ಬೈಕ್ ಚಾಲನೆ ವೇಳೆ ಹೆಲ್ಮೆಟ್ ಧರಿಸದಿದ್ದರೆ ಲೈಸೆನ್ಸ್ ರದ್ದು!
ಭುವನೇಶ್ವರ್, ನವೆಂಬರ್.19: ಬೈಕ್ ಚಾಲನೆ ಮಾಡುತ್ತಿರುವ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವುದನ್ನು ಯಾವುದೇ ಕಾರಣಕ್ಕೂ ಮರೆಯುವಂತಿಲ್ಲ. ಒಂದು ವೇಳೆ ಹೆಲ್ಮೆಟ್ ಧರಿಸದೇ ಪೊಲೀಸರ ಕೈಗೆ ಸಿಕ್ಕಿ ಬಿದ್ದರೆ ಲೈಸೆನ್ಸ್ ನ್ನು ರದ್ದುಗೊಳಿಸಲಾಗುತ್ತದೆ. ಇಂಥದೊಂದು ಕಟ್ಟುನಿಟ್ಟಿನ ಕಾನೂನನ್ನು ಒಡಿಶಾ ಸರ್ಕಾರವು ಜಾರಿಗೊಳಿಸಿದೆ.
ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುವ ಅಪರಾಧಿಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಒಡಿಶಾ ಸರ್ಕಾರ ಗುರುವಾರ ರಾಜ್ಯ ಪೊಲೀಸ್ ಮತ್ತು ಸಾರಿಗೆ ಆಯುಕ್ತರಿಗೆ ಆದೇಶಿಸಿದೆ.

ಒಡಿಶಾದ ಸಾರಿಗೆ ಇಲಾಖೆ ಕಾರ್ಯದರ್ಶಿ ಎಂ.ಎಸ್.ಪಾಧಿ ಡಿಜಿಪಿ ಮತ್ತು ಸಾರಿಗೆ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವವರ ಚಾಲನಾ ಪರವಾನಗಿ (ಡಿಎಲ್) ಅಮಾನತುಗೊಳಿಸಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.
ಹೊಸ ಕಾನೂನು ಜಾರಿಗೊಳಿಸಲು ಕಾರಣ:
ಕಳೆದ 2019ರಲ್ಲಿ ಮತ್ತು 2020ರ ಜನವರಿಯಿಂದ ಅಕ್ಟೋಬರ್ ತಿಂಗಳಾಂತ್ಯದವರೆಗೂ ಹೆಲ್ಮೆಟ್ ಧರಸದೇ ಕಾನೂನು ಉಲ್ಲಂಘಿಸಿದ ಹಿನ್ನೆಲೆ ಡಿಎಲ್ ಅನ್ನು ಅಮಾನತುಗೊಳಿಸಿದ ಬಗ್ಗೆ ಜಿಲ್ಲಾವಾರು ವರದಿಯನ್ನು ಏಳು ದಿನಗಳಲ್ಲಿ ಸುಪ್ರೀಂಕೋರ್ಟ್ ಸಮಿತಿಯ ಮೌಲ್ಯಮಾಪನಕ್ಕಾಗಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಳೆದ ವರ್ಷದ ಒಡಿಶಾದಲ್ಲಿ ಸಂಭವಿಸಿದ 11064 ಅಪಘಾತಗಳಲ್ಲಿ 4688 ಬೈಕ್ ಅಪಘಾತಗಳೇ ಆಗಿರುವ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಒಟ್ಟು ರಸ್ತೆ ಅಪಘಾತದಲ್ಲಿ ಕಳೆದ ವರ್ಷ 5333 ಸಾವಿನ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 2398 ಮಂದಿ ಬೈಕ್ ಸವಾರರೇ ಆಗಿದ್ದರು. ಅದರಲ್ಲೂ ಬೈಕ್ ಅಪಘಾತದಲ್ಲಿ ಮೃತಪಟ್ಟ 2398 ಬೈಕ್ ಸವಾರರಲ್ಲಿ 2156 ಜನ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿತ್ತು.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications