ಆಘಾತಕಾರಿ ಘಟನೆ: ಟಿ.ವಿ. ಚಾನೆಲ್ ಉದ್ಯೋಗಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಭುವನೇಶ್ವರ್, ಸೆಪ್ಟೆಂಬರ್ 11: ಬಿಜೆಪಿ ನಾಯಕ ಬೈಜಯಂತ್ ಪಂಡಾ ಅವರ ಪತ್ನಿ ಹಾಗೂ OTVಯ ವ್ಯವಸ್ಥಾಪಕ ನಿರ್ದೇಶಕಿ ಜಗಿ ಪಂಡಾ ಮತ್ತು ಅಪ್ರಾಪ್ತ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಯ ತಾಯಿ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಮಾತುಕತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತ ವಯಸ್ಸಿನ ಮಗಳನ್ನು ಟಿವಿ ವಾಹಿನಿಯ ಕಚೇರಿಗೆ ಕರೆತಂದು ಬಳಿಕ ತಾನು ಕ್ರಮ ತೆಗೆದುಕೊಳ್ಳುವುದಾಗಿ ಚಾನೆಲ್ನ ಎಂ.ಡಿ. ಆ ತಾಯಿಗೆ ಹೇಳಿರುವುದು ದಾಖಲಾಗಿದೆ.
ಚಾನೆಲ್ನಲ್ಲಿ ಕೆಲಸ ಮಾಡುವ ಕೆಲವು ಉದ್ಯೋಗಿಗಳೇ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಒಡಿಶಾ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಒಎಸ್ಸಿಪಿಸಿಆರ್) ಭುವನೇಶ್ವರ ಮೂಲದ ಖಾಸಗಿ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕಿ ಜಗಿ ಪಂಡಾ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಆಯುಕ್ತರು ಹಾಗೂ ಖೋರ್ದಾ ಕಲೆಕ್ಟರ್ಗೆ ಸೂಚನೆ ನೀಡಿದೆ. ಅದರ ಬೆನ್ನಲ್ಲೇ ಈ ಸಂಭಾಷಣೆ ವೈರಲ್ ಆಗಿದೆ. ಮುಂದೆ ಓದಿ.

15 ದಿನ ಅತ್ಯಾಚಾರ
ಸಂತ್ರಸ್ತೆ ಬಾಲಕಿಯ ತಾಯಿ ಇದೇ ಚಾನೆಲ್ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಅತ್ಯಾಚಾರ ಘಟನೆ ಬಗ್ಗೆ ಅವರು ಒಎಸ್ಸಿಪಿಸಿಆರ್ಗೆ ದೂರು ನೀಡಿದ್ದರು. ಮಹಿಳೆ ನೀಡಿರುವ ದೂರಿನ ಪ್ರಕಾರ, ಏಪ್ರಿಲ್-ಮೇ ಅವಧಿಯಲ್ಲಿ ಸುಮಾರು 15 ದಿನಗಳ ಕಾಲ ಚಾನೆಲ್ನ ಅನೇಕ ಉದ್ಯೋಗಿಗಳು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ವಿಡಿಯೋ ಬಿಡುಗಡೆ ಬೆದರಿಕೆ
ಮಗಳ ಕೈ ಕಾಲುಗಳನ್ನು ಕಟ್ಟಿಹಾಕಿ ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅತ್ಯಾಚಾರದ ವಿಡಿಯೋಗಳನ್ನು ಕೂಡ ಅವರು ರೆಕಾರ್ಡ್ ಮಾಡಿಕೊಂಡಿದ್ದು, ಇದರ ಬಗ್ಗೆ ಯಾರಿಗಾದರೂ ತಿಳಿಸಿದರೆ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಮುಚ್ಚಿಹಾಕಲು ಪ್ರಯತ್ನ
ಬಾಲಕಿಯು ತಮ್ಮ ಹೆಸರು ಹೇಳಿದರೆ ಆಕೆ ಹಾಗೂ ಆಕೆಯ ತಾಯಿ ಇಬ್ಬರನ್ನೂ ಕೊಂದು ಹಾಕುವುದಾಗಿ ಕೂಡ ಚಾನೆಲ್ನ ಉದ್ಯೋಗಿಗಳು ಬೆದರಿಸಿದ್ದರು. ಈ ಘಟನೆಯ ಬಗ್ಗೆ ನ್ಯೂಸ್ ಚಾನೆಲ್ನ ಎಂ.ಡಿ.ಗೆ ಆಗಲೇ ಮಾಹಿತಿ ನೀಡಿದ್ದರೂ ಆರೋಪಿಗಳ ವಿರುದ್ಧ ಅವರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಬದಲಾಗಿ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಈ ಪ್ರಕರಣದಲ್ಲಿ ಮುಂದುವರಿಯದಂತೆ ಒತ್ತಡ ಹೇರಿದ್ದರು ಎಂದು ಕೂಡ ಆರೋಪಿಸಿದ್ದಾರೆ.

48 ಗಂಟೆಯಲ್ಲಿ ವರದಿಗೆ ಸೂಚನೆ
ಒಟಿವಿ ವಾಹಿನಿಯ ಎಂಡಿ ಪೋಕ್ಸೋ ಕಾಯ್ದೆಯ ಸೆಕ್ಷನ್ 19, 20 ಮತ್ತು 21ರ ಅಡಿ ಹಾಗೂ ಐಪಿಸಿ ಸೆಕ್ಷನ್ನ ವಿವಿಧ ಕಾನೂನುಗಳ ಅಡಿ ಅಪರಾಧ ಎಸಗಿರುವುದು ಕಂಡುಬಂದಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಒಎಸ್ಸಿಪಿಸಿಆರ್ ತಿಳಿಸಿದೆ.
48 ಗಂಟೆಗಳ ಒಳಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ತನಿಖೆಯ ವರದಿಯನ್ನು ಸಲ್ಲಿಸುವಂತೆ ಕಲೆಕ್ಟರ್ ಹಾಗೂ ಪೊಲೀಸ್ ಆಯುಕ್ತರಿಗೆ ಒಎಸ್ಸಿಪಿಸಿಆರ್ ಸೂಚನೆ ನೀಡಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications