'ಫೋನಿ' ಸಮೀಕ್ಷೆಗೆ ಬಂದು ಪಟ್ನಾಯಕ್ ಗೆ ಸಲಾಂ ಎಂದ ಮೋದಿ

ಭುವನೇಶ್ವರ, ಮೇ 06: ಫೋನಿ ಸೈಕ್ಲೋನ್ ಪೀಡಿತ ಒಡಿಶಾದಲ್ಲಿ ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಹಾಡಿ ಹೊಗಳಿದರು.

"ನವೀನ್ ಪಟ್ನಾಯಕ್ ಅವರು ಅತ್ಯುತ್ತಮ ಕೆಲಸ ಮಾಡಿದ್ದಾರೆ. ಜೊತೆಗೆ ಅವರು ನೀಡಿದ್ದ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸಿದ ಒಡಿಶಾ ಜನರ ನಡೆ ಕೂಡ ಶ್ಲಾಘನೀಯ" ಎಂದು ಮೋದಿ ಹೇಳಿದರು.

ಕೇಂದ್ರ ಸರ್ಕಾರವು ಕಳೆದ ವಾರ ಸೈಕ್ಲೋನ್ ಪೀಡಿತ ಒಡಿಶಾಕ್ಕೆ 1000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಮತ್ತೆ 1000 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮೋದಿ ಹೇಳಿದ್ದಾರೆ.

Odisha: PM Modi praises Naveen Patnaik for his great work after Cyclone Fani

ಒಡಿಶಾದಲ್ಲಿ ಉಂಟಾದ ಫೋನಿ ಚಂಡಮಾರುತಕ್ಕೆ ಇದುವರೆಗೂ 34 ಜನ ಮೃತರಾಗಿದ್ದು, ನೂರಾರು ಜನ ಗಾಯಗೊಂಡಿದ್ದಾರೆ. ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

5000 ಆಶ್ರಯ ತಾಣಗಳನ್ನು ನಿರ್ಮಿಸಲಾಗಿದ್ದು, 1500 ಕ್ಕೂ ಹೆಚ್ಚು ಬಸ್ ಗಳ ಮೂಲಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಗಂಟೆಗೆ 200 ಕಿಮೀ. ವೇಗದಲ್ಲಿ ಗಾಳಲಿ ಬೀಸುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗಿದೆ. 10,000 ಹಳ್ಳಿಗಳ ಸುಮಾರು ಒಂದು ಕೋಟಿಗೂ ಅಧಿಕ ಜನರು ಸೈಕ್ಲೋನ್ ಪರಿಣಾಮ ಎದುರಿಸುತ್ತಿದ್ದಾರೆ. ಒಡಿಶಾದ ಪ್ರಸಿದ್ಧ ಪುರಿಯ ಜಗನ್ನಾಥ ಮಂದಿರವೂ ಪುರಿ ಸೈಕ್ಲೋನ್ ನಿಂದ ಹಾನಿಯೊಳಗಾಗಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+