1 ರಿಂದ 12ನೇ ತರಗತಿವರೆಗಿನ ಶೇ.30ರಷ್ಟು ಪಠ್ಯಕ್ರಮ ಕಡಿತ
ಭುವನೇಶ್ವರ್, ಆಗಸ್ಟ್.27: ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಯಿಂದ 12ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಶೇ.30ರಷ್ಟು ಕಡಿತಗೊಳಿಸುವುದುಕ್ಕೆ ಒಡಿಶಾ ಸರ್ಕಾರವು ತೀರ್ಮಾನಿಸಿದೆ.
Recommended Video
ಒಡಿಶಾದಲ್ಲಿ ಕೊವಿಡ್-19 ಸೋಂಕಿನ ಭೀತಿಯಲ್ಲಿ ಇಂದಿನವರೆಗೂ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈ ಹಿನ್ನೆಲೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ.
2020-21ನೇ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 12ನೇ ತರಗತಿಯ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ. ಶಾಲಾ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ರಚಿಸಿದ್ದ ಮೂರು ಸಮಿತಿಗಳ ಶಿಫಾರಸ್ಸು ಆಧಾರದ ಮೇಲೆ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರವು ತಿಳಿಸಿದೆ.

ರಾಜ್ಯ ಸರ್ಕಾರದ ವೆಬ್ ಸೈಟ್ ನಲ್ಲಿ ಪಠ್ಯಕ್ರಮ:
ಒಡಿಶಾ ಸರ್ಕಾರದ ಅಧಿಕೃತ ವೆಬ್ ಸೈಟ್ ಗಳಲ್ಲಿ ಮಧ್ಯಮ ಶಿಕ್ಷಣ ಮಂಡಳಿ, ಉನ್ನತ ಮಧ್ಯಮ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಸಂಶೋಧನಾ ತರಬೇತಿ ಮಂಡಳಿಗೆ ಸಂಬಂಧಿಸಿದ ಪಠ್ಯಕ್ರಮವನ್ನು ಅಪ್ ಲೋಡ್ ಮಾಡಲಾಗುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣಕ್ಕೆ ಅಗತ್ಯವಾಗಿರುವ ಪಠ್ಯಕ್ರಮವನ್ನು ಯಥಾವತ್ತಾಗಿ ಮುಂದುವರಿಸುವುದಾಗಿ ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ.
ಒಡಿಶಾದಲ್ಲಿ ಕೊರೊನಾವೈರಸ್ ಸೋಂಕು:
ಒಡಿಶಾದಲ್ಲಿ ಒಟ್ಟು 90986 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 501 ಜನರು ಪ್ರಾಣ ಬಿಟ್ಟಿದ್ದಾರೆ. 62813 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 27672 ಸಕ್ರಿಯ ಪ್ರಕರಣಗಳಿರುವುದು ಪತ್ತೆಯಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications